AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ನಗರದಲ್ಲಿ ಹಲವೆಡೆ ರಾತ್ರಿಯಿಡೀ ಧಾರಾಕಾರ ಮಳೆ.. ಇಂದೂ ಮಳೆ ಬೀಳುವ ಸಾಧ್ಯತೆ: ಹವಾಮಾನ ಇಲಾಖೆ ಸೂಚನೆ

Bangalore Rain Update: ನಿನ್ನೆ ಬುಧವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ನಗರ ತಂಪಾಗಿದೆ. ಬಿಸಿಲಿಗೆ ಬೆಂದಿದ್ದ ನಗರದ ಜನರಿಗೆ ತಂಪಾದ ವಾತಾವರಣ ಕಂಡು ಮನಸ್ಸಿಗೆ ಹಿತವೆನಿಸುತ್ತಿದೆ.

Bengaluru Rain: ನಗರದಲ್ಲಿ ಹಲವೆಡೆ ರಾತ್ರಿಯಿಡೀ ಧಾರಾಕಾರ ಮಳೆ.. ಇಂದೂ ಮಳೆ ಬೀಳುವ ಸಾಧ್ಯತೆ: ಹವಾಮಾನ ಇಲಾಖೆ ಸೂಚನೆ
ಮಳೆ (ಸಾಂಕೇತಿಕ ಚಿತ್ರ)
shruti hegde
|

Updated on: Apr 15, 2021 | 11:11 AM

Share

ಬೆಂಗಳೂರು: ನಗರದಲ್ಲಿ ಹಲವೆಡೆ ಬುಧವಾರ ರಾತ್ರಿಯಿಡೀ ಧಾರಾಕಾರ ಮಳೆಯಾಗಿದೆ. ಹಲವು ದಿನಗಳಿಂದ ರಣ ಬಿಸಿಲು ಕಂಡಿದ್ದ ಜನರಿಗೆ ವರುಣನ ಆಗಮನ ಖುಷಿ ನೀಡಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಹೆಚ್ಚು ಮಳೆ ದಾಖಲಾಗಿದ್ದು, ಇಂದು (ಏಪ್ರಿಲ್ 15) ಗುರುವಾರ ಬೆಳಿಗ್ಗೆಯಿಂದ ನಗರದಲ್ಲಿ ತಂಪಾದ ವಾತಾವರಣವಿದೆ. ನಗರದ ಸುದ್ದುಗುಂಟೆ ಪಾಳ್ಯ, ಸಿದ್ದಾಪುರ, ಜಯನಗರದಲ್ಲಿ 45 ಮಿಲಿಮೀಟರ್​ ಮಳೆಯಾಗಿದೆ.

ಕೋರಮಂಗಲದಲ್ಲಿ ‌24 ಮಿಲಿಮೀಟರ್​ ಮಳೆಯಾಗಿದೆ. ಹೊಯ್ಸಳ ‌ನಗರ 18 ಮಿ.ಮಿ, ಗುಟ್ಟಹಳ್ಳಿ 15 ಮಿ.ಮೀ, ಮನೋರಾಯನ ಪಾಳ್ಯದಲ್ಲಿ 15 ಮಿಲಿಮೀಟರ್ ಮಳೆಯಾಗಿದೆ. ಹೆಚ್​ಆರ್​ಎಸ್​ ಲೇಔಟ್​ನಲ್ಲಿ 13 ಮಿ.ಮೀ, ಶಾಂತಲನಗರ 10 ಮಿ.ಮೀ, ಈಜೀಪುರ 10 ಮಿ.ಮೀ ಮಳೆ ದಾಖಲಾಗಿದೆ. ವರ್ತೂರಿನಲ್ಲಿ 22 ಮಿ.ಮೀ ಮಳೆಯಾಗಿದ್ದು, ಬೆಳ್ಳಂದೂರಿನಲ್ಲಿ 21 ಮಿಲಿಮೀಟರ್ ಮಳೆ ದಾಖಲಾಗಿದೆ.

ನಗರದ ಹಲವೆಡೆ ರಾತ್ರಿ ಪೂರ್ತಿ ಮಳೆಯಾಗಿದ್ದು, ಬೆಳಿಗ್ಗೆ ರಸ್ತೆಯ ಅಕ್ಕ-ಪಕ್ಕದ ಮರಗಳೆಲ್ಲಾ ಹಚ್ಚಹಸಿರಿನಂದ ಕಂಗೊಳಿಸುತ್ತಿದೆ. ತಂಪಾದ ವಾತಾವರಣ ಇದ್ದು, ಬೆಳಿಗ್ಗೆ ಜಾಗಿಂಗ್​ ಹೊರಟಿರುವವರ ಮನಸ್ಸಿಗೆ ಖುಷಿ ತಂದಿದೆ. ಜಯನಗರ, ಬಿಟಿಎಂ ಲೇಔಟ್, ಹೊಯ್ಸಳ ನಗರದಲ್ಲಿ ಅಧಿಕ ಮಳೆಯಾಗಿದ್ದು, ಬೆಳಗಿನ ಜಾವ ಹಲವೆಡೆ ಭಾರೀ ಮಳೆಯಾಗಿದೆ. ಬೆಂಗಳೂರಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಜೊತೆಗೆ ಗಾಳಿಯ ಆರ್ಭಟವೂ ಜೋರಾಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದಿರುವ ಘಟನೆ ಕೆಲವೆಡೆ ನಡೆದಿದೆ. ಅವರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳೂ ಆಗಿವೆ. ಕೆ.ಜಿ ರಸ್ತೆಯ ಕಂದಾಯ ಭವನದ ಬಳಿ ದ್ವಿಚಕ್ರ ವಾಹನ ಸವಾರರು ಜಾರಿಬಿದ್ದಿದ್ದು, ಕೆಲಕಾಲ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಗಾಳಿ ಜೊತೆಗೆ ಮಳೆಯಾಗುತ್ತಿರುವುದರಿಂದ ವಾಹನ ಸವಾರರು ಅಥವಾ ರಸ್ತೆಯಲ್ಲಿ ನಡೆದು ಸಾಗುವವರು ಹೆಚ್ಚು ಎಚ್ಚರದಿಂದ ಸಾಗಬೇಕು. ಹಲವು ಜಿಲ್ಲೆಗಳಲ್ಲಿ ಗುಡು ಸಹಿತ ಮಳೆ ಕಾಣಿಸಿಕೊಂಡಿದೆ. ಗುರುವಾರವೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Bengaluru Rain: ಬಿಸಿಲಿನಿಂದ ಬೆಂದಿದ್ದ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ; ರಾಜಧಾನಿಯ ಹಲವೆಡೆ ಜಿಟಿಜಿಟಿ ಮಳೆ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?