AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Floods: ಕರ್ನಾಟಕ ಬಿಜೆಪಿಯಿಂದ ಕೇರಳಕ್ಕೆ ಅಗತ್ಯ ವಸ್ತುಗಳ ರವಾನೆ

ಮಲ್ಲೇಶ್ವರಂ ಬಿಜೆಪಿ ರಾಜ್ಯ ಕಚೇರಿಯಿಂದ ಕೇರಳಕ್ಕೆ 5 ವಾಹನಗಳಲ್ಲಿ ಅಗತ್ಯ ವಸ್ತುಗಳು ರವಾನೆ ಆಗಿದೆ. ಕುಡಿಯುವ ನೀರು, ಹೊದಿಕೆ, ಟೂತ್ ಪೇಸ್ಟ್, ಬ್ರಶ್, ಬಟ್ಟೆ ಲಾರಿಗಳ ಮೂಲಕ ರವಾನೆ ಮಾಡಲಾಗಿದೆ.

Kerala Floods: ಕರ್ನಾಟಕ ಬಿಜೆಪಿಯಿಂದ ಕೇರಳಕ್ಕೆ ಅಗತ್ಯ ವಸ್ತುಗಳ ರವಾನೆ
ಕೇರಳದಲ್ಲಿ ಪ್ರವಾಹ ಪರಿಸ್ಥಿತಿ
TV9 Web
| Edited By: |

Updated on: Oct 22, 2021 | 2:31 PM

Share

ಬೆಂಗಳೂರು: ಕೇರಳದಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ ಆಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಬಿಜೆಪಿಯಿಂದ ಕೇರಳಕ್ಕೆ ಅಗತ್ಯ ವಸ್ತುಗಳ ರವಾನೆ ಮಾಡಲಾಗಿದೆ. ಕುಡಿಯುವ ನೀರು, ಹೊದಿಕೆ ಸೇರಿ ಅಗತ್ಯ ವಸ್ತುಗಳನ್ನು ಕಳುಹಿಸಿಕೊಡಲಾಗಿದೆ. 5 ಲಾರಿಗಳಲ್ಲಿ ಕೇರಳಕ್ಕೆ ಅಗತ್ಯ ವಸ್ತುಗಳ ರವಾನೆ ಮಾಡಲಾಗಿದೆ. ಕೇರಳದಲ್ಲಿ ಜಲಪ್ರವಾಹ ಉಂಟಾಗಿದೆ. ಈ ಕಾರಣದಿಂದ ಮಲ್ಲೇಶ್ವರಂ ಬಿಜೆಪಿ ರಾಜ್ಯ ಕಚೇರಿಯಿಂದ ಕೇರಳಕ್ಕೆ 5 ವಾಹನಗಳಲ್ಲಿ ಅಗತ್ಯ ವಸ್ತುಗಳು ರವಾನೆ ಆಗಿದೆ. ಕುಡಿಯುವ ನೀರು, ಹೊದಿಕೆ, ಟೂತ್ ಪೇಸ್ಟ್, ಬ್ರಶ್, ಬಟ್ಟೆ ಲಾರಿಗಳ ಮೂಲಕ ರವಾನೆ ಮಾಡಲಾಗಿದೆ. ಸಚಿವ ಡಾ. ಅಶ್ವಥ್ ನಾರಾಯಣ ಐದು ವಾಹನಗಳಿಗೆ ಹಸಿರು ನಿಶಾನೆ ತೋರಿದ್ದಾರೆ.

ಕೇರಳದಲ್ಲಿ ಮಳೆ (Kerala Rain)ಯಿಂದಾದ ಅವಾಂತರಗಳಿಂದ ಈಗಾಗಲೇ ಸುಮಾರು 42 ಮಂದಿ ಮೃತಪಟ್ಟಿದ್ದು, 6 ಜನ ಕಾಣೆಯಾಗಿದ್ದಾರೆ. ಜನ ಮೃತರಾಗಿದ್ದಾರೆ. ಆದರೆ ಸದ್ಯಕ್ಕಂತೂ ಅಲ್ಲಿ ಮಳೆ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಭಾರತೀಯ ಹವಾಮಾನ ಇಲಾಖೆ (India Meteorological Department) ಅಕ್ಟೋಬರ್​ 25ರವರೆಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಆರೆಂಜ್​ ಮತ್ತು ಯೆಲ್ಲೋ ಅಲರ್ಟ್​​ ಘೋಷಿಸಿದೆ. ಅದರಲ್ಲಿ ಕೊಟ್ಟಾಯಂ, ಇಡುಕ್ಕಿ, ಪಲಕ್ಕಾಡ್​​, ಮಲಪ್ಪುರಂ, ಕೊಯಿಕ್ಕೊಡ್​, ವಯಾನಾಡ್​ ಮತ್ತು ಕಣ್ಣೂರು, ಪಥನಂತಿಟ್ಟ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಹೇರಲಾಗಿದ್ದು, ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ತ್ರಿಶೂರ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ  ಹಳದಿ ಎಚ್ಚರಿಕೆ ನೀಡಲಾಗಿದೆ. ಆರೆಂಜ್​ ಅಲರ್ಟ್​ ಎಂದರೆ 6 ಸಿಎಂನಿಂದ 20 ಸಿಎಂನವರೆಗೆ ಮಳೆಯಾಗಬಹುದು ಎಂಬ ಎಚ್ಚರಿಕೆಯಾಗಿದೆ. ಹಾಗೇ ಹಳದಿ ಅಲರ್ಟ್​ ಎಂದರೆ 6ಸಿಎಂನಿಂದ 11 ಸಿಎಂವರೆಗೆ ಮಳೆಯಾಗಬಹುದು ಎಂಬ ಮುನ್ಸೂಚನೆಯಾಗಿದೆ.

ಸದ್ಯ ಕೇರಳದಲ್ಲಿ ನೈಋತ್ಯ ಮಾನ್ಸೂನ್​ ಸಕ್ರಿಯವಾಗಿದೆ. ಹೀಗಾಗಿ ಕೇರಳದ ಬಹುತೇಕ ಪ್ರದೇಶಗಳಲ್ಲಿ ಮತ್ತು ಲಕ್ಷದ್ವೀಪದ ವಿವಿಧ ಕಡೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೇ, ಇಂದು ಕೇರಳದ ಕರಾವಳಿ ತೀರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ಇರಬಹುದಾದ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದೆಂದು ಸೂಚಿಸಲಾಗಿದೆ.  ಇಂದಿನಿಂದ ಅಕ್ಟೋಬರ್​ 25ರವರೆಗೂ ಕೂಡ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕರೈಕಲ್​​ಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.  ಇದರೊಂದಿಗೆ ಅಕ್ಟೋಬರ್​ 22-24ರ ಅವಧಿಯಲ್ಲಿ ಜಮ್ಮು-ಕಾಶ್ಮೀರ, ಲಡಾಖ್​, ಗಿಲ್ಗಿಟ್​-ಬಲ್ಚಿಸ್ತಾನ್​, ಮುಜಾಫರಾಬಾದ್​, ಹಿಮಾಚಲಪ್ರದೇಶ ಮತ್ತು ಪಂಜಾಬ್​ಗಳಲ್ಲಿ ಗುಡುಗು-ಮಿಂಚು-ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದೂ ವರದಿ ನೀಡಿದೆ.

ಇದನ್ನೂ ಓದಿ: Video: ಕೇರಳ ಮಳೆಯ ಭೀಕರತೆ; ನೋಡನೋಡುತ್ತಿದ್ದಂತೆ ನದಿಗೆ ಕುಸಿದುಬಿತ್ತು ಇಡೀ ಮನೆ

ಇದನ್ನೂ ಓದಿ: Kerala Floods ಜೀವ ಉಳಿಯಿತು, ಆದರೆ ಎಲ್ಲವನ್ನೂ ಕಳೆದುಕೊಂಡೆವು: ಕೇರಳ ಪ್ರವಾಹ ಸಂತ್ರಸ್ತರ ಅಳಲು

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?