AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ರಾಜಕೀಯ ಜೀವನವೇ ಒಂದು ಡ್ರಾಮ; ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ, ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ

ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ.

ಕುಮಾರಸ್ವಾಮಿ ರಾಜಕೀಯ ಜೀವನವೇ ಒಂದು ಡ್ರಾಮ; ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ, ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Apr 02, 2022 | 4:17 PM

Share

ಬೆಂಗಳೂರು: ರಾಜ್ಯ ಬಿಜೆಪಿ ಘಟಕ(BJP Karnataka) ಸರಣಿ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(HD Kumaraswamy) ವಿರುದ್ಧ ವಾಗ್ದಾಳಿ ನಡೆಸಿದೆ. ಕುಮಾರಸ್ವಾಮಿ ಟ್ವೀಟ್‌ಗಳಿಗೆ ರಾಜ್ಯ ಬಿಜೆಪಿ ಘಟಕ ತಿರುಗೇಟು ನೀಡಿದೆ. ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಹೆಚ್‌ಡಿಕೆ ಸರ್ಕಸ್‌ ಮಾಡುತ್ತಿದ್ದಾರೆ. ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರ ಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ ಎಂದು ಹ್ಯಾಷ್ ಟ್ಯಾಗ್ ಬಳಸಿ #ಹಿಂದೂವಿರೋಧಿಜೆಡಿಎಸ್‌ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ.

ಮಾನ್ಯ #LuckyDipCM ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗುಡುಗಿದೆ.

ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಕುಮಾರ ಸ್ವಾಮಿ. ಅವರ ರಾಜಕೀಯ ವರಸೆ. ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್‌ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ “ಪುರುಷಾರ್ಥ” ಅಡಗಿದೆಯೇ? ಎಂದು ಕುಮಾರಸ್ವಾಮಿಗೆ ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ಹೊಸ ಹಾಡಿನಲ್ಲಿ ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡ ಆಶಿಕಾ ರಂಗನಾಥ್

ಕಪಾಳಕ್ಕೆ ಹೊಡೆದ ಪ್ರಕರಣ: ವಿಲ್​ ಸ್ಮಿತ್ ಮಹತ್ವದ ನಿರ್ಧಾರ; ನಟನ ವಿರುದ್ಧ ಶಿಸ್ತಿನ ಕ್ರಮ ಎಂದ ಅಕಾಡೆಮಿ

Published On - 3:34 pm, Sat, 2 April 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?