AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಹಿಂದಿ ದಿವಸ್​, ತ್ರಿಭಾಷಾ ಸೂತ್ರ ಹೇರಿದ್ದು ಕಾಂಗ್ರೆಸ್: ಆದ್ರೆ ಮಾತೃಭಾಷೆಯಲ್ಲೇ ಶಿಕ್ಷಣ ಕಲ್ಪಿಸಿರುವುದು ಮೋದಿ ಸರ್ಕಾರ- ಕರ್ನಾಟಕ ಬಿಜೆಪಿ ಟ್ವೀಟ್

ದೇಶದಲ್ಲಿ ಹಿಂದಿ ದಿವಸ್​, ತ್ರಿಭಾಷಾ ಸೂತ್ರ ಹೇರಿದ್ದು ಕಾಂಗ್ರೆಸ್. ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್ ರದ್ದು ಮಾಡ್ತೀವಿ ಎಂದು ಸೋನಿಯಾ ಗಾಂಧಿ ಮತ್ತು ರಾಹುಲ್​ರಿಂದ ಹೇಳಿಕೆ ಕೊಡಿಸುವ ಧಮ್ ಇದೆಯಾ? ಎಂದು ಟ್ವೀಟ್​ ಮೂಲಕ ಕಾಂಗ್ರೆಸ್​ ಅನ್ನು ಬಿಜೆಪಿ ಛೇಡಿಸಿದೆ.

ದೇಶದಲ್ಲಿ ಹಿಂದಿ ದಿವಸ್​, ತ್ರಿಭಾಷಾ ಸೂತ್ರ ಹೇರಿದ್ದು ಕಾಂಗ್ರೆಸ್: ಆದ್ರೆ ಮಾತೃಭಾಷೆಯಲ್ಲೇ ಶಿಕ್ಷಣ ಕಲ್ಪಿಸಿರುವುದು ಮೋದಿ ಸರ್ಕಾರ- ಕರ್ನಾಟಕ ಬಿಜೆಪಿ ಟ್ವೀಟ್
ಎನ್‌ಇಪಿ ಮೂಲಕ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯುವ ಅವಕಾಶವನ್ನು ಮೋದಿ ಸರ್ಕಾರ ಈಗಾಗಲೇ ಕಲ್ಪಿಸಿದೆ: ಕಾಂಗ್ರೆಸ್​ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್​​​​​​ ವಾರ್​
TV9 Web
| Edited By: |

Updated on: Sep 14, 2022 | 5:09 PM

Share

ಬೆಂಗಳೂರು: ಹಿಂದಿ ಭಾಷೆ (Hindi) ಹೇರಿಕೆಗೆ ಕಾಂಗ್ರೆಸ್​ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಪ್ರತಿಯಾಗಿ ಕಾಂಗ್ರೆಸ್​ ವಿರುದ್ಧ ರಾಜ್ಯ ಬಿಜೆಪಿ ಘಟಕ (Karnataka BJP) ಟ್ವೀಟ್​​​​​​ ಮಾಡಿ, ವಾಸ್ತವಾಂಶ ತೆರೆದಿಟ್ಟಿದೆ. ಈ ಹಿಂದಿನಿಂದಲೂ, ಮಾತೃಭಾಷೆಯಲ್ಲೇ (Mother Tongue) ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿ ಮೋದಿ ಸರ್ಕಾರ ಎನ್‌ಇಪಿ (National Education Policy -NEP) ಮೂಲಕ ಈ ಅವಕಾಶ ಕಲ್ಪಿಸಿದೆ ಎಂದು ಸ್ಪಷ್ಟನೆ ನೀಡಿದೆ.

ಆದರೆ ದೇಶದಲ್ಲಿ ಹಿಂದಿ ದಿವಸ್​, ತ್ರಿಭಾಷಾ ಸೂತ್ರ ಹೇರಿದ್ದು ಕಾಂಗ್ರೆಸ್. ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್ ರದ್ದು ಮಾಡ್ತೀವಿ ಎಂದು ಸೋನಿಯಾ ಗಾಂಧಿ ಮತ್ತು ರಾಹುಲ್​ರಿಂದ ಹೇಳಿಕೆ ಕೊಡಿಸುವ ಧಮ್ ಇದೆಯಾ? ಎಂದು ಟ್ವೀಟ್​ ಮೂಲಕ ಕಾಂಗ್ರೆಸ್​ ಅನ್ನು ಬಿಜೆಪಿ ಛೇಡಿಸಿದೆ.

ಬಿಜೆಪಿ ಟ್ವೀಟ್ ಸಾರಾಂಶ ಹೀಗಿದೆ: ಸಿದ್ದರಾಮಯ್ಯನವರೇ, ಮೋದಿ ಸರ್ಕಾರ ಎನ್‌ಇಪಿ ಮೂಲಕ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಿದೆ. ಆದರೆ @INCIndia ರಾಷ್ಟ್ರವ್ಯಾಪಿ #HindiDiwas, ತ್ರಿಭಾಷಾ ಸೂತ್ರ ಹೇರಿತು. ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್‌ ರದ್ದು ಮಾಡುತ್ತೇವೆ ಎಂದು ಸೋನಿಯಾ, ರಾಹುಲ್‌ ಗಾಂಧಿ ಅವರಿಂದ ಹೇಳಿಕೆ ಕೊಡಿಸುವ ಧಮ್‌ ಇದೆಯೇ?

ಕನ್ನಡದಲ್ಲೇ ಇಂಜಿನಿಯರಿಂಗ್ ಪರೀಕ್ಷೆ ಬರೆಯಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ:

ಇದಕ್ಕೂ ಮುನ್ನ ವಿಧಾನಸಭೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ, ಯಾವುದೇ ಅತಂಕಬೇಡ. ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮೀರಿ ನಡೆದುಕೊಂಡಿದ್ದೇವೆ. ಕನ್ನಡ ಕಡ್ಡಾಯಗೊಳಿಸಲು ಹೊಸ ಕಾನೂನು ತರುತ್ತೇವೆ. ಇದೇ ಅಧಿವೇಶನದಲ್ಲಿ ಹೊಸ ಕಾನೂನು ಜಾರಿ ಮಾಡ್ತೇವೆ. ಕನ್ನಡದಲ್ಲೇ ಇಂಜಿನಿಯರಿಂಗ್ ಪರೀಕ್ಷೆ ಬರೆಯಲು ಸಹ ಈಗಾಗಲೇ ಅವಕಾಶ ಕಲ್ಪಿಸಲಾಗಿದೆ ಎಂದು ಸದನಕ್ಕೆ ತಿಳಿಸಿದರು.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!