AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್. ಯಡಿಯೂರಪ್ಪ ನಿರ್ಧಾರದಿಂದ ರಿಲ್ಯಾಕ್ಸ್ ಆದ ಬಿಜೆಪಿ ನಾಯಕರು: ಹೈಕಮಾಂಡ್ ನಿರ್ಧಾರವೇ ಈಗ ಅಂತಿಮ

ಈಗ ಬಿಜೆಪಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿದ್ದು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಫರ್ಧೆ ವಿಚಾರಕ್ಕೆ ಫೈನಲ್ ಟಚ್ ಸಿಗಲಿದೆ.

ಬಿ.ಎಸ್. ಯಡಿಯೂರಪ್ಪ ನಿರ್ಧಾರದಿಂದ ರಿಲ್ಯಾಕ್ಸ್ ಆದ ಬಿಜೆಪಿ ನಾಯಕರು: ಹೈಕಮಾಂಡ್ ನಿರ್ಧಾರವೇ ಈಗ ಅಂತಿಮ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Jul 22, 2022 | 6:45 PM

Share

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ(BS Yediyurappa) ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ವಿಚಾರದಿಂದ ರಾಜ್ಯ ಬಿಜೆಪಿಗೆ ರಿಲ್ಯಾಕ್ಸ್ ಆಗಿದೆ. 2023ರಲ್ಲಿ BS ಯಡಿಯೂರಪ್ಪ ಸ್ಪರ್ಧೆ ಬಗ್ಗೆ ರಾಜ್ಯ ಬಿಜೆಪಿಯ ನಾಯಕರು ಗೊಂದಲದಲ್ಲಿದ್ದರು. 2023ಕ್ಕೆ B.S.ಯಡಿಯೂರಪ್ಪ ಸ್ಪರ್ಧೆ ಮಾಡ್ತಾರೋ, ಇಲ್ವೋ? ವಿಜಯೇಂದ್ರ ಸ್ಪರ್ಧೆ ವರುಣಾದಿಂದಲೋ, ಶಿಕಾರಿಪುರದಿಂದಲೋ ಎಂಬ ಅನೇಕ ಗೊಂದಲಗಳಿದ್ದವು. ಸದ್ಯ ಈಗ ನಾಯಕರ ಗೊಂದಲಕ್ಕೆ ತೆರೆ ಬಿದ್ದಿದೆ.

ಯಡಿಯೂರಪ್ಪ ರಾಜಕೀಯ ನಡೆ ಬಗ್ಗೆ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ. ಈವರೆಗೆ ಹೈಕಮಾಂಡ್ ಯಾವುದೇ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ. ಯಡಿಯೂರಪ್ಪ ವಿಚಾರ ನಮಗೆ ಬಿಡಿ ಎಂದಷ್ಟೇ ವರಿಷ್ಠರು ಹೇಳಿದ್ದರು. ಹೀಗಾಗಿ BSY ಘೋಷಣೆಯಿಂದ ರಾಜ್ಯ ನಾಯಕರಿಗೆ 2 ವಿಚಾರ ಸ್ಪಷ್ಟವಾಗಿದೆ. ಯಡಿಯೂರಪ್ಪ ಸ್ಪರ್ಧೆ ಮತ್ತು ವಿಜಯೇಂದ್ರ ಸ್ಪರ್ಧೆ ಎಲ್ಲಿಂದ ಎಂಬ ಬಗ್ಗೆ ರಾಜ್ಯ ನಾಯಕರಿಗೆ ಸ್ಪಷ್ಟತೆ ಸಿಕ್ಕಿದೆ.

ಈಗ ಬಿಜೆಪಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿದ್ದು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಫರ್ಧೆ ವಿಚಾರಕ್ಕೆ ಫೈನಲ್ ಟಚ್ ಸಿಗಲಿದೆ. ಒಂದು ವೇಳೆ ಶಿಕಾರಿಪುರದಿಂದ ಕಾರ್ಯಕರ್ತರಿಗೆ ಟಿಕೆಟ್ ಎಂಬ ನಿಲುವಿಗೆ ಹೈಕಮಾಂಡ್ ಬಂದಲ್ಲಿ ಮತ್ತೆ ಬೇರೆ ಕ್ಷೇತ್ರಕ್ಕೆ ಒಪ್ಪಿಕೊಳ್ಳಬೇಕಾದ ಅನಿವಾರ್ಯತೆಗೆ ವಿಜಯೇಂದ್ರಗೆ ಬೀಳಲಿದೆ.

ವಿಜಯೇಂದ್ರಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಬಿಎಸ್​ವೈ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್​ ಯಡಿಯೂರಪ್ಪ (BS Yediyurappa) ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಲು ( political retirement) ನಿರ್ಧರಿಸಿದ್ದಾರೆ. ಪುತ್ರ ವಿಜಯೇಂದ್ರಗೆ ಶಿಕಾರಿಪುರ ಕ್ಷೇತ್ರ (Shikaripura) ಬಿಟ್ಟುಕೊಡಲು ಸಹ ಮುಂದಾಗಿದ್ದಾರೆ. ಬಿಎಸ್‌ವೈ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ವಿಜಯೇಂದ್ರಗೆ ಪಕ್ಷದಲ್ಲಿ ಮಹತ್ವದ ಸ್ಥಾನಮಾನ ಸಿಕ್ಕಿಲ್ಲ. ಇದೆಲ್ಲವನ್ನೂ ಅಂದಾಜಿಸಿಯೇ ಬಿ.ಎಸ್.ಯಡಿಯೂರಪ್ಪ ಈ ತೀರ್ಮಾನ ಘೋಷಿಸಿದ್ದಾರೆ ಎನ್ನಲಾಗಿದೆ.

2018ರಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ವಿಜಯೇಂದ್ರ ಪ್ರಯತ್ನಿಸಿದ್ದರಾದರೂ ಕಡೇಕ್ಷಣದಲ್ಲಿ ಬಿಜೆಪಿ ಹೈಕಮಾಂಡ್‌ ಬ್ರೇಕ್‌ ಹಾಕಿತ್ತು. ವರಿಷ್ಠರು, ವಿಜಯೇಂದ್ರಗೆ ಕೇವಲ ಬಿಜೆಪಿ ಉಪಾಧ್ಯಕ್ಷ ಸ್ಥಾನ ನೀಡಿದ್ದರು! ಇದೀಗ ಬಿಎಸ್‌ವೈ ಕುಟುಂಬಸ್ಥರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ! ಬಿಎಸ್‌ವೈ ಸಿಎಂ ಆಗಿದ್ದಾಗ ಉಪಚುನಾವಣೆಗಳಲ್ಲಿ ಮಹತ್ವದ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆಯಿದೆ!

Published On - 6:41 pm, Fri, 22 July 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ