AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಆನ್‌ಲೈನ್‌ನಲ್ಲಿ ವಿವಾಹ ನೋಂದಣಿಗೆ ಶ್ರೀರಾಮ ಸೇನೆ ವಿರೋಧ

ರಾಜ್ಯದ 2023-24ನೇ ಸಾಲಿನ ಬಜೆಟ್​ ನಿನ್ನೆ ರಂದು ಮಂಡನೆಯಾಗಿದ್ದು, ಆನ್​ಲೈನ್​ ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಶ್ರೀರಾಮ ಸೇನೆ ವಿರೋಧ ವ್ಯಕ್ತಪಡಿಸಿದೆ.

Karnataka Budget 2023: ಆನ್‌ಲೈನ್‌ನಲ್ಲಿ ವಿವಾಹ ನೋಂದಣಿಗೆ ಶ್ರೀರಾಮ ಸೇನೆ ವಿರೋಧ
ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ 
Anil Kalkere
| Edited By: |

Updated on:Jul 08, 2023 | 12:51 PM

Share

ಬೆಂಗಳೂರು: ರಾಜ್ಯದ 2023-24ನೇ ಸಾಲಿನ ಬಜೆಟ್​ (Karnataka Budget 2023) ನಿನ್ನೆ (ಜು.07) ರಂದು ಮಂಡನೆಯಾಗಿದ್ದು, ಆನ್​ಲೈನ್ (Online)​ ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಶ್ರೀರಾಮ ಸೇನೆ (Shriram sene) ವಿರೋಧ ವ್ಯಕ್ತಪಡಿಸಿದೆ. ಇತ್ತೀಚಿನ ವರ್ಷಗಳಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚಾಗಿವೆ. ನೂರಾರು ಪ್ರಕರಣಗಳು ಹೊರ ಬರುತ್ತಿವೆ. ಆನ್ ಲೈನ್ ವಿವಾಹ ನೋಂದಣಿ ಲವ್ ಜಿಹಾದ್​ಗೆ ಕುಮ್ಮಕ್ಕು ಕೊಡಲಿದೆ. ತಂದೆ-ತಾಯಿಗೆ, ಸಮಾಜಕ್ಕೆ, ಸಂಘಟನೆಗಳಿಗೆ, ಹಿಂದೂಗಳಿಗೆ ಗೊತ್ತಾಗದ ಹಾಗೆ ಮುಸ್ಲಿಂ, ಕ್ರಿಶ್ಚಿಯನ್ನರು ಸಾರಾಗಟಾಗಿ ಆನ್‌ಲೈನ್​ನಲ್ಲಿ ನೋಂದಣಿ ಮಾಡಿಕೊಳ್ಳುತ್ತಾರೆ. ಆನ್‌ಲೈನ್‌ನಲ್ಲಿ ವಿವಾಹ ನೋಂದಣಿ ಮಾಡುವ ಮೂಲಕ ಆನಂದವಾಗಿ ಲವ್ ಜಿಹಾದ್ ಮಾಡಿಕೊಂಡು ಮೆರೆಯಬಹುದು ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ್​ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈಗಿರುವ, ರಿಜಿಸ್ಟರ್ ಕಚೇರಿಗಳಲ್ಲಿ ಒಂದು ತಿಂಗಳ ಮುಂಚೆ ಮಾಹಿತಿ ಕೊಡುವುದು. ಅವರ ವಿಳಾಸ, ಫೋಟೋಗಳನ್ನ ಹಾಕುವುದು ಯೋಗ್ಯವಾದ ವ್ಯವಸ್ಥೆಯಾಗಿದೆ. ಯಾರೂ ಯಾವುದೇ ರೀತಿಯ ಮೋಸ ವಂಚನೆ ಮಾಡಲು ಸಾಧ್ಯವಿಲ್ಲ. ಈ ಆನ್‌ಲೈನ್ ವಿವಾಹ ನೋಂದಣಿಯನ್ನು ರದ್ದು ಮಾಡಬೇಕು, ಜಾರಿ ಮಾಡಬಾರದು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಡಿಜಿಟಲ್​ ಲೈಬ್ರರಿಗೆ ನೋಂದಾಯಿಸಿಕೊಂಡವರಲ್ಲಿ ಬೆಂಗಳೂರು ಪಸ್ಟ್​​​, ಮೈಸೂರು ಸೆಕೆಂಡ್​​

ಏನಿದು ಆನ್​ಲೈನ್​ ನೋಂದಣಿ

ವಿವಾಹ ನೋಂದಣಿಗಾಗಿ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು, ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Sat, 8 July 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ