AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಆನ್‌ಲೈನ್‌ನಲ್ಲಿ ವಿವಾಹ ನೋಂದಣಿಗೆ ಶ್ರೀರಾಮ ಸೇನೆ ವಿರೋಧ

ರಾಜ್ಯದ 2023-24ನೇ ಸಾಲಿನ ಬಜೆಟ್​ ನಿನ್ನೆ ರಂದು ಮಂಡನೆಯಾಗಿದ್ದು, ಆನ್​ಲೈನ್​ ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಶ್ರೀರಾಮ ಸೇನೆ ವಿರೋಧ ವ್ಯಕ್ತಪಡಿಸಿದೆ.

Karnataka Budget 2023: ಆನ್‌ಲೈನ್‌ನಲ್ಲಿ ವಿವಾಹ ನೋಂದಣಿಗೆ ಶ್ರೀರಾಮ ಸೇನೆ ವಿರೋಧ
ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ 
Anil Kalkere
| Edited By: ವಿವೇಕ ಬಿರಾದಾರ|

Updated on:Jul 08, 2023 | 12:51 PM

Share

ಬೆಂಗಳೂರು: ರಾಜ್ಯದ 2023-24ನೇ ಸಾಲಿನ ಬಜೆಟ್​ (Karnataka Budget 2023) ನಿನ್ನೆ (ಜು.07) ರಂದು ಮಂಡನೆಯಾಗಿದ್ದು, ಆನ್​ಲೈನ್ (Online)​ ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಶ್ರೀರಾಮ ಸೇನೆ (Shriram sene) ವಿರೋಧ ವ್ಯಕ್ತಪಡಿಸಿದೆ. ಇತ್ತೀಚಿನ ವರ್ಷಗಳಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚಾಗಿವೆ. ನೂರಾರು ಪ್ರಕರಣಗಳು ಹೊರ ಬರುತ್ತಿವೆ. ಆನ್ ಲೈನ್ ವಿವಾಹ ನೋಂದಣಿ ಲವ್ ಜಿಹಾದ್​ಗೆ ಕುಮ್ಮಕ್ಕು ಕೊಡಲಿದೆ. ತಂದೆ-ತಾಯಿಗೆ, ಸಮಾಜಕ್ಕೆ, ಸಂಘಟನೆಗಳಿಗೆ, ಹಿಂದೂಗಳಿಗೆ ಗೊತ್ತಾಗದ ಹಾಗೆ ಮುಸ್ಲಿಂ, ಕ್ರಿಶ್ಚಿಯನ್ನರು ಸಾರಾಗಟಾಗಿ ಆನ್‌ಲೈನ್​ನಲ್ಲಿ ನೋಂದಣಿ ಮಾಡಿಕೊಳ್ಳುತ್ತಾರೆ. ಆನ್‌ಲೈನ್‌ನಲ್ಲಿ ವಿವಾಹ ನೋಂದಣಿ ಮಾಡುವ ಮೂಲಕ ಆನಂದವಾಗಿ ಲವ್ ಜಿಹಾದ್ ಮಾಡಿಕೊಂಡು ಮೆರೆಯಬಹುದು ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ್​ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈಗಿರುವ, ರಿಜಿಸ್ಟರ್ ಕಚೇರಿಗಳಲ್ಲಿ ಒಂದು ತಿಂಗಳ ಮುಂಚೆ ಮಾಹಿತಿ ಕೊಡುವುದು. ಅವರ ವಿಳಾಸ, ಫೋಟೋಗಳನ್ನ ಹಾಕುವುದು ಯೋಗ್ಯವಾದ ವ್ಯವಸ್ಥೆಯಾಗಿದೆ. ಯಾರೂ ಯಾವುದೇ ರೀತಿಯ ಮೋಸ ವಂಚನೆ ಮಾಡಲು ಸಾಧ್ಯವಿಲ್ಲ. ಈ ಆನ್‌ಲೈನ್ ವಿವಾಹ ನೋಂದಣಿಯನ್ನು ರದ್ದು ಮಾಡಬೇಕು, ಜಾರಿ ಮಾಡಬಾರದು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಡಿಜಿಟಲ್​ ಲೈಬ್ರರಿಗೆ ನೋಂದಾಯಿಸಿಕೊಂಡವರಲ್ಲಿ ಬೆಂಗಳೂರು ಪಸ್ಟ್​​​, ಮೈಸೂರು ಸೆಕೆಂಡ್​​

ಏನಿದು ಆನ್​ಲೈನ್​ ನೋಂದಣಿ

ವಿವಾಹ ನೋಂದಣಿಗಾಗಿ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು, ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Sat, 8 July 23

Follow Us
Anil Kalkere
Anil Kalkere
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?