AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಠಗಳಿಗೆ ಜಾಗ, ಉದ್ಯೋಗಾಕಾಂಕ್ಷಿಗಳಿಗೂ ಸುಯೋಗ: ಸಚಿವ ಸಂಪುಟ​​ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಗೆ ಒಪ್ಪಿಗೆ ನೀಡಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ 100 ಕೋಟಿ ವೆಚ್ಚದಲ್ಲಿ ಮನೆ ನಿರ್ಮಾಣಕ್ಕೂ ಸಮ್ಮತಿ ದೊರೆತಿದೆ. ಜೊತೆಗೆ, 22 ಹಿಂದುಳಿದ ಮಠಗಳಿಗೆ ಜಮೀನು ಮಂಜೂರು ಮಾಡುವ ನಿರ್ಧಾರವೂ ಅಂಗೀಕರಿಸಲ್ಪಟ್ಟಿದೆ.

ಮಠಗಳಿಗೆ ಜಾಗ,  ಉದ್ಯೋಗಾಕಾಂಕ್ಷಿಗಳಿಗೂ ಸುಯೋಗ: ಸಚಿವ ಸಂಪುಟ​​ ಸಭೆಯಲ್ಲಿ ಮಹತ್ವದ ನಿರ್ಧಾರ
ಸಿಎಂ ಸಿದ್ದರಾಮಯ್ಯ
ಹರೀಶ್ ಜಿ.ಆರ್​.
| Edited By: |

Updated on:Jan 22, 2026 | 7:04 PM

Share

ಬೆಂಗಳೂರು, ಜನವರಿ 22: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಗೆ ಕ್ಯಾಬಿನೆಟ್​​ ಒಪ್ಪಿದ್ದರೆ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ ಹಲವು ಮಹತ್ವದ ನಿರ್ದಾರಗಳು ಕ್ಯಾಬಿನೆಟ್​​ ಸಭೆಯಲ್ಲಿ ಆಗಿವೆ

ವಯೋಮಿತಿ ಸಡಿಲಿಕೆ

ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈವರೆಗೂ ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಇದ್ದರೆ, SC, ST ಅಭ್ಯರ್ಥಿಗಳಿಗೆ 38 ವರ್ಷ ನಿಗದಿಪಡಿಸಲಾಗಿತ್ತು. ಆದರೀಗ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಆಗಲಿದ್ದು,  ಡಿ.31 2027 ವರೆಗೆ ಹೊರಡಿಸಲಾಗಿರುವ ಎಲ್ಲ ಅಧಿಸೂಚನೆಗಳಿಗೆ ಇದು ಅನ್ವಯ ಆಗಲಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ; ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು

ಮನೆ ನಿರ್ಮಾಣಕ್ಕೆ ಸಹಾಯ ಹಸ್ತ

ಅಲೆಮಾರಿ/ ಅರೆ ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿರುವ ರಾಜ್ಯ ಸಕರಕಾರ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ನಿರ್ಧರಿಸಿದೆ. 100 ಕೋಟಿ ಮೊತ್ತದಲ್ಲಿ, 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಗಳ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಹಿಂದುಳಿದ, ದಲಿತ ಮಠಗಳಿಗೆ ಜಾಗ ಮಂಜೂರು

22 ಹಿಂದುಳಿದ, ದಲಿತ ಮಠಗಳಿಗೆ ಜಾಗ ಮಂಜೂರಿಗೂ ಕ್ಯಾಬಿನೆಟ್​​ ಒಪ್ಪಿಗೆ ಸಿಕ್ಕಿದ್ದು, ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ನಿರ್ಧರಿಸಲಾಗಿದೆ. ಆ ಪ್ರಕಾರ ರಾವುತ್ತನಹಳ್ಳಿ ಗ್ರಾಮದ ಸರ್ವೆ ನಂ. 57 ಮತ್ತು 58ರಲ್ಲಿರುವ ಸರ್ಕಾರಿ ಜಮೀನು ಮಠಗಳಿಗೆ ಸಿಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:01 pm, Thu, 22 January 26

Follow Us
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ