AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ ಖರೀದಿಗೆ ಸಂಪುಟ ಒಪ್ಪಿಗೆ

ಹತ್ತು ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ ಖರೀದಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ 10 ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್​​ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಲಿವೆ. ಡಬಲ್​ ಡೆಕ್ಕರ್​​ ಬಸ್​ಗಳಿಗೆ ಟೆಂಡರ್​ ಕರೆಯಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್​ ಪೂರ್ಣವಾಗಲಿದೆ.

10 ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ ಖರೀದಿಗೆ ಸಂಪುಟ ಒಪ್ಪಿಗೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Jan 07, 2024 | 7:35 AM

Share

ಬೆಂಗಳೂರು, ಜನವರಿ 07: ಹತ್ತು ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ (Double-decker electric Buses) ಖರೀದಿಸುವ ಪ್ರಸ್ತಾವನೆಗೆ ಸಚಿವ ಸಂಪುಟ (Cabinet) ಅನುಮೋದನೆ ನೀಡಿದೆ. ಈ 10 ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್​​ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಂಚರಿಸಲಿವೆ. ನಗರದಲ್ಲಿ ಮತ್ತೆ ಡಬಲ್ ಡೆಕ್ಕರ್ ಬಸ್‌ಗಳು ಸದ್ದು ಮಾಡಲಿವೆ. ಡಬಲ್​ ಡೆಕ್ಕರ್​​ ಬಸ್​ಗಳಿಗೆ ಟೆಂಡರ್​ ಕರೆಯಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್​ ಪೂರ್ಣವಾಗಲಿದೆ ಎಂದು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದರು.

ಡಬಲ್ ಡೆಕ್ಕರ್ ಬಸ್‌ಗಳಿಗೆ ಅಂಡರ್‌ಪಾಸ್‌ ಮತ್ತು ಇತರ ಅಡೆತಡೆಗಳಲ್ಲಿ ಸಂಚರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇದಕ್ಕಾಗಿ ಈಗಾಗಲೇ ಐದುಮಾರ್ಗ ರೂಪಿಸಲಾಗಿದೆ. ಈ ಡಬಲ್​ ಡೆಕ್ಕರ್​ ಬಸ್​ಗಳಿಗೆ ಬಿಎಂಟಿಸಿ ಬಸ್​ನ ಬಣ್ಣವನ್ನೇ ಅಂತಿಮಗೊಳಿಸಲಾಗಿದೆ. ಆದರೆ ಡಬಲ್​ ಡೆಕ್ಕರ್​​ ಬಸ್​ ವಿನ್ಯಾಸದ ಬಗ್ಗೆ ಚರ್ಚೆ ನಡೆದಿದೆ. ಜಪಾನ್​ ಡಬಲ್​ ಡೆಕ್ಕರ್​ ಬಸ್​ ಮಾದರಿಯನ್ನು ನನ್ನ ಆಪ್ತರು ಕಳಿಸಿದ್ದು, ಅದನ್ನು ಸಹ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಕಳಿಸಿದ್ದೇನೆ ಎಂದಿದ್ದರು.

ಇದನ್ನೂ ಓದಿ: ಭಾರತದಲ್ಲಿ ಮೊದಲ ಬಾರಿಗೆ ಪಿ ಅಂಡ್ ಪಿ ಡಬಲ್ ಡೆಕರ್ ರೈಲು; ಕೆಳಗೆ ಸರಕು, ಮೇಲೆ ಜನರು

ಅಲ್ಲದೇ 120 ನಾನ್-ಎಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಟೆಂಡರ್​​ ಕರೆಯಲಾಗಿದೆ. ಬಸ್‌ಗಳಲ್ಲಿ ಇಂಟೆಲಿಜೆಂಟ್ ಟ್ರಾನ್ಸ್‌ಪೋರ್ಟ್ ಮ್ಯಾನೇಜ್‌ಮೆಂಟ್ ಸಿಸ್ಟಮ್, ಪ್ಯಾಸೆಂಜರ್ ಡಿಸ್‌ಪ್ಲೇ ಬೋರ್ಡ್‌ಗಳು, ಸಿಸಿಟಿವಿ ವ್ಯವಸ್ಥೆಗಳು ಮತ್ತು ಪ್ಯಾನಿಕ್ ಬಟನ್‌ಗಳು ಇತ್ಯಾದಿಗಳನ್ನು ಅಳವಡಿಸಲಾಗಿದೆ. ಫೆಬ್ರವರಿ 13 ರಂದು ಟೆಂಡರ್ ಪ್ರಾರಂಭವಾಗುವ ಸಾಧ್ಯತೆ ಇದೆ.

ಪ್ರಸ್ತುತ, ಬಿಎಂಟಿಸಿ 9ಮೀ ಉದ್ದದ 90 ನಾನ್-ಎಸಿ ಮತ್ತು ಅಶೋಕ್ ಲೇಲ್ಯಾಂಡ್‌ನ ಅಂಗಸಂಸ್ಥೆಯಾದ ಸ್ವಿಚ್ ಮೊಬಿಲಿಟಿ ಲಿಮಿಟೆಡ್‌ನ 12 ಮೀ ಉದ್ದದ 300 ಬಸ್‌ಗಳು ಸೇರಿದಂತೆ 390 ಇ-ಬಸ್‌ಗಳು ನಗರದಲ್ಲಿ ಕಾರ್ಯನಿರ್ವಹಿಸುತ್ತಿವೆ.

ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:31 am, Sun, 7 January 24

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ