AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮಲ್ಲಿ ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಿಲ್ಲ ಎಂದ ಬಿ‌ಕೆ ಹರಿಪ್ರಸಾದ್

Karnataka Cabinet Expansion: ಎಲ್ಲಾ ಸಮುದಾಯಕ್ಕೆ ಪ್ರಾತಿನಿಧ್ಯ ಕೊಟ್ಟು ಸಚಿವ ಸಂಪುಟ ವಿಸ್ತರಣೆ ಆದ್ರೂ ಹಿರಿಯ ಶಾಸಕರ ಅಸಮಾಧಾನ ಭುಗಿಲೆದ್ದಿದೆ. ಕೆಲವರು ಅಂತೂ ರಾಜೀನಾಮೆಗೆ ಮುಂದಾಗಿದ್ದಾರೆ. ಇತ್ತ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​​ ಮಾತ್ರ ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ಕೂಡ ನೀಡಿಲ್ಲ ಎಂದಿದ್ದಾರೆ.

ನಮ್ಮಲ್ಲಿ ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಿಲ್ಲ ಎಂದ ಬಿ‌ಕೆ ಹರಿಪ್ರಸಾದ್
ಬಿ‌.ಕೆ ಹರಿಪ್ರಸಾದ್ Image Credit source: tv9 kannada
Sunil MH
| Edited By: |

Updated on:Aug 04, 2026 | 3:18 PM

Share

ಬೆಂಗಳೂರು, ಆಗಸ್ಟ್​​ 04: ಕಾಂಗ್ರೆಸ್​ ಮನೆಯಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಮಿನಿಸ್ಟರ್ ಸ್ಥಾನ (Karnataka Cabinet) ಮಿಸ್​ ಆಗಿರುವುದು ಘಟನಾಘಟಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಕೆಲವರು ರಾಜೀನಾಮೆಯ ಹಾದಿ ಕೂಡ ಹಿಡಿದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ‌.ಕೆ ಹರಿಪ್ರಸಾದ್ (B. K. Hariprasad)​​, ‘ಯಾವುದೇ ಶಾಸಕರಲ್ಲಿ ಅಸಮಾಧಾನವಿಲ್ಲ. ಯಾರೂ ರಾಜೀನಾಮೆ ನೀಡಿಲ್ಲ’ ಎಂದು ಹೇಳಿದ್ದಾರೆ.

ನಾಯಕತ್ವದ ದಿವಾಳಿಯಿಲ್ಲ; ಎಲ್ಲ ಸಮುದಾಯಕ್ಕೂ ಅವಕಾಶ ಎಂದ ಬಿ‌.ಕೆ ಹರಿಪ್ರಸಾದ್

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದಲ್ಲಿ ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಎಂಬ ಸತ್ಯವನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ನಮ್ಮ ಪಕ್ಷದಲ್ಲಿ ನಾಯಕತ್ವದ ದಿವಾಳಿತನವಿಲ್ಲ, ಪ್ರತಿಯೊಬ್ಬರೂ ನಾಯಕರೇ. ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಈ ಬಾರಿ ಕೆಲವು ಹಿರಿಯರಿಗೆ ಅವಕಾಶ ಕೈತಪ್ಪಿದೆ. ಆದಾಗ್ಯೂ ಎಲ್ಲ ಸಮುದಾಯಗಳಿಗೂ ಸಮಾನ ಪ್ರಾತಿನಿಧ್ಯ ನೀಡಲಾಗಿದೆ. ಸಚಿವ ಸ್ಥಾನ ಸಿಗದೆ ನಿರಾಸೆಗೊಂಡಿರುವ ಕೃಷ್ಣಪ್ಪ, ಪ್ರಿಯಾ ಕೃಷ್ಣ ಹಾಗೂ ಹಿರಿಯ ನಾಯಕ ಮಂಕಾಳ ವೈದ್ಯ ಅವರೊಂದಿಗೆ ಮಾತುಕತೆ ನಡೆಸಲಾಗುವುದು’ ಎಂದರು.

ಬಿಜೆಪಿ ವಿರುದ್ಧ ಬಿ‌.ಕೆ ಹರಿಪ್ರಸಾದ್ ವಾಗ್ದಾಳಿ 

ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, ‘ಈ ಹಿಂದೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸುಮಾರು 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯವೇ ಸಿಕ್ಕಿರಲಿಲ್ಲ. ಅವರು ಸರ್ಕಾರ ನಡೆಸುವಾಗ ಎಷ್ಟು ಸಮತೋಲನ ಕಾಯ್ದುಕೊಂಡಿದ್ದರು ಎಂಬುದನ್ನು ಮೊದಲು ಹೇಳಲಿ’ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ನೂತನ ಸಚಿವರ ಪಟ್ಟಿಗೆ ಸಿದ್ದರಾಮಯ್ಯ ಅಸಮಾಧಾನ? ಮಾಜಿ ಸಿಎಂ ಬೇಸರಕ್ಕೆ ಕಾರಣವಾದ ಅಂಶಗಳು ಇಲ್ಲಿವೆ

‘ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಮೊದಲ ಬಾರಿಗೆ ಶೋಷಿತ ಸಮುದಾಯದವರಿಗೆ ಅರ್ಹ ಸ್ಥಾನಮಾನ ನೀಡಿದ್ದು, ಪೌರಕಾರ್ಮಿಕರ ಮಗನನ್ನು ಮಂತ್ರಿ ಮಾಡಿದ ಹೆಗ್ಗಳಿಕೆ ನಮ್ಮ ಪಕ್ಷಕ್ಕಿದೆ. ಎಲ್ಲಿಯೂ ಕೂಡ ಅಸಮಾಧಾನ ಇಲ್ಲ, ರಾಜೀನಾಮೆ ನೀಡಿರುವವರು ವಾಪಸ್ ತೆಗೆದುಕೊಳ್ಳುತ್ತಾರೆ’ ಎಂದರು.

ಮಹಿಳಾ ಸಚಿವರು ಹಾಗೂ ಸ್ಪೀಕರ್ ಆಯ್ಕೆ ಕುರಿತ ಚರ್ಚೆ ಬಗ್ಗೆ ಹೇಳಿದ್ದಿಷ್ಟು

ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ವಿಚಾರವಾಗಿ ಮಾತನಾಡಿದ ಅವರು, ‘ಮಹಿಳೆಯರಿಗೆ ಅವಕಾಶ ನೀಡಿಲ್ಲ. ಅದರ ಬಗ್ಗೆ ನಾನು ಚರ್ಚೆ ಮಾಡುತ್ತೇನೆ. ಮಹಿಳಾ ಸಚಿವರು ಆಗಬೇಕು. ಒಟ್ಟಾರೆಯಾಗಿ ಸಚಿವ ಸಂಪುಟ ಭರ್ತಿ ಪ್ರಕ್ರಿಯೆ ತಮಗೆ ಸಂಪೂರ್ಣ ಸಂತೃಪ್ತಿ ತಂದಿದೆ’ ಎಂದಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ಬೆದರಿಕೆ ಹಾಕಿದವರು ಯಾರು? ಸಿಎಂಗೇ ನೇರ ಕಡೆ ಮಾಡಿ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್

ಇನ್ನು ಸ್ಪೀಕರ್ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿಯ ಟೀಕೆಗಳಿಗೆ ತಿರುಗೇಟು ನೀಡಿದ ಅವರು, ‘ಸಂವಿಧಾನದ 170ನೇ ವಿಧಿಯ ಪ್ರಕಾರ ವಿಧಾನಸಭೆಯೇ ಸ್ಪೀಕರ್ ಅವರನ್ನು ಆಯ್ಕೆ ಮಾಡುತ್ತದೆ ಎಂಬ ಕನಿಷ್ಠ ಜ್ಞಾನವೂ ಬಿಜೆಪಿಯವರಿಗಿಲ್ಲವೇ? ನಾವು ಕೇವಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಅಷ್ಟೇ’ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:15 pm, Tue, 4 August 26

Follow Us