AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದೆ. ಜುಲೈ 17ರ ಬಳಿಕ ಸಿಎಂ ಡಿಕೆ ದೆಹಲಿಗೆ ತೆರಳಲಿದ್ದು, ಈ ನಡುವೆ ಒಂದು ಸಚಿವ ಸ್ಥಾನಕ್ಕೆ 150 ಕೋಟಿ ರೂ. ಲಾಬಿ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಆಕಾಂಕ್ಷಿ ಶಾಸಕರಲ್ಲಿ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ಶುರುವಾಗಿದೆ.

ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ
ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 15, 2026 | 7:50 AM

Share

ಮುಖ್ಯಾಂಶಗಳು

  • ಜುಲೈ 17ರ ನಂತರ ಸಿಎಂ ಡಿಕೆ ಸಂಪುಟ ವಿಸ್ತರಣೆಗೆ ದೆಹಲಿಗೆ ಪ್ರವಾಸ ಬೆಳೆಸಲಿದ್ದಾರೆ.
  • ಒಂದು ಸಚಿವ ಸ್ಥಾನಕ್ಕೆ 150 ಕೋಟಿ ಎಂದು ಆರ್.ಅಶೋಕ್ ಬಾಂಬ್ ಸಿಡಿಸಿದ್ದಾರೆ.
  • ಆಗಸ್ಟ್ 6 ರಿಂದ ಮಳೆಗಾಲದ ಅಧಿವೇಶನ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗದ ಹಿನ್ನೆಲೆಯಲ್ಲಿ, ಇದೀಗ ಸಂಪುಟ ವಿಸ್ತರಣೆಯ ಲಾಬಿ ತೀವ್ರಗೊಂಡಿದೆ. ಆಗಸ್ಟ್ 6 ರಿಂದ ಮಳೆಗಾಲದ ಅಧಿವೇಶನ ಆರಂಭವಾಗುವ ಸಾಧ್ಯತೆ ಇದ್ದು, ಅದಕ್ಕೂ ಮುನ್ನ ಹೈಕಮಾಂಡ್ ಒಪ್ಪಿಗೆ ಪಡೆಯಲು ನಾಯಕರು ಸಜ್ಜಾಗಿದ್ದಾರೆ. ಜುಲೈ 17ರ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಅಂತಿಮ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ಹಲವು ಆಕಾಂಕ್ಷಿಗಳು ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಬೀರಲು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

‘ಒಂದು ಸಚಿವ ಸ್ಥಾನಕ್ಕೆ 150 ಕೋಟಿ’: ಆರ್.ಅಶೋಕ್ ಗಂಭೀರ ಆರೋಪ

ಕಾಂಗ್ರೆಸ್‌ನಲ್ಲಿನ ಈ ಸಂಪುಟ ಸರ್ಕಸ್ ಅನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತೀವ್ರವಾಗಿ ಲೇವಡಿ ಮಾಡಿದ್ದಾರೆ. ಮೊದಲ ಹಂತದಲ್ಲಿ ಅಸಮಾಧಾನಗೊಂಡವರಿಗೆ ಫೈಟಿಂಗ್ ಕೋಟಾ ಅಡಿ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈಗ ನಡೆಯುತ್ತಿರುವುದು ಪೇಮೆಂಟ್ ಕೋಟಾ. ಒಂದು ಸಚಿವ ಸ್ಥಾನಕ್ಕೆ 100 ರಿಂದ 150 ಕೋಟಿ ರೂ. ಬೇಡಿಕೆ ಇಡಲಾಗಿದೆ ಎಂದು ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಆದರೆ ಈ ಆರೋಪಗಳ ನಡುವೆಯೂ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ಮುಂದುವರಿದಿದೆ.

ಇದನ್ನೂ ಓದಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ: ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ

ಸಂಪುಟ ವಿಸ್ತರಣೆ ರಾಕೆಟ್ ಸೈನ್ಸಾ? ಅಶೋಕ್ ಪ್ರಶ್ನೆ

ಆರ್. ಅಶೋಕ್ ಹೇಳುವಂತೆ, ಬಳ್ಳಾರಿಯಿಂದ ಭರತ್ ರೆಡ್ಡಿ ಯುವ ಕೋಟಾದಡಿ ಲಾಬಿ ನಡೆಸುತ್ತಿದ್ದರೆ, ನಾಗೇಂದ್ರ ಅವರು ಸಿದ್ದರಾಮಯ್ಯ ಮೂಲಕ ಹಾಗೂ ಜೆ.ಎನ್. ಗಣೇಶ್ ರೇಸ್‌ನಲ್ಲಿದ್ದಾರೆ. ಸಂಸದ ತುಕಾರಾಂ ತಮ್ಮ ಪತ್ನಿಗೆ ಸಚಿವ ಸ್ಥಾನ ಕೊಡಿಸಲು ಮುಂದಾಗಿದ್ದಾರೆ. ಇತ್ತ ಬೆಳಗಾವಿ ಭಾಗದಿಂದ ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ್ ಸವದಿ, ಅಶೋಕ ಪಟ್ಟಣ ಸೇರಿದಂತೆ ಆರು ಶಾಸಕರು ನೇರವಾಗಿ ಬೇಡಿಕೆ ಇಟ್ಟಿದ್ದಾರೆ. ಈ ನಡುವೆ, ಕೃಷಿ ಸಚಿವರನ್ನು ತಕ್ಷಣ ನೇಮಿಸುವಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ಗೆ ಸಂಪುಟ ವಿಸ್ತರಣೆ ‘ರಾಕೆಟ್ ಸೈನ್ಸ್’ ಆಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್
ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್
ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು
ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು
ಫಿಫಾ ವಿಶ್ವಕಪ್ ಸೆಮಿಫೈನಲ್ ನೋಡಲು ವಿಶೇಷ ಆದೇಶ
ಫಿಫಾ ವಿಶ್ವಕಪ್ ಸೆಮಿಫೈನಲ್ ನೋಡಲು ವಿಶೇಷ ಆದೇಶ
ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್
ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್
ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್​​ ದಾಳಿ
ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್​​ ದಾಳಿ