AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ದೀಢೀರ್​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ?

ಬಜೆಟ್ ಅಧಿವೇಶನದ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆ ಬಳಿಕ ಹೈಕಮಾಂಡ್ ಜತೆ ಮಾತನಾಡುವುದಾಗಿ ಸಿಎಂ ಭರವಸೆ ನೀಡಿದ್ದು, ಇತ್ತ ಶಾಸಕರೂ ಏಪ್ರಿಲ್ 11 ರಂದು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಲು ಸಿದ್ಧತೆ ನಡೆಸಿರೋದಾಗಿ ತಿಳಿದುಬಂದಿದೆ.

ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ದೀಢೀರ್​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ?
ಸಿಎಂ ಸಿದ್ದರಾಮಯ್ಯ ಭೇಟಿಯಾದ ಕಾಂಗ್ರೆಸ್​​ನ ಹಿರಿಯ ಶಾಸಕರುImage Credit source: Tv9 Kannada
Pramod Shastri G
| Edited By: |

Updated on: Mar 17, 2026 | 4:33 PM

Share

ಬೆಂಗಳೂರು, ಮಾರ್ಚ್​​ 17: ಬಜೆಟ್​​ ಅಧಿವೆಶನದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ವಿಧಾನಸೌಧ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಎಂಎಲ್​​ಎಗಳು ಮನವಿ ಮಾಡಿದ್ದಾರೆ. ಭೋಜನ ವಿರಾಮದ ಸಮಯದಲ್ಲಿ ಸಿಎಂ ಭೇಟಿಯಾಗಿರುವ ‘ಕೈ’ ಶಾಸಕರು 3ಕ್ಕೂ ಹೆಚ್ಚು ಬಾರಿ ನಾವು ಎಂಎಲ್​​ಎಗಳಾಗಿದ್ದೇವೆ. ಹೀಗಾಗಿ ನಮಗೂ ಅವಕಾಶ ನೀಡಿ ಎಂಬ ಆಗ್ರಹ ಮುಂದಿಟ್ಟಿದ್ದಾರೆ. ಶಾಸಕರಾದ ಎನ್​.ಎ.ಹ್ಯಾರಿಸ್​, ಹಂಪನಗೌಡ ಬಾದರ್ಲಿ, ಬಾಲಕೃಷ್ಣ, ನಾರಾಯಣಸ್ವಾಮಿ, ಅಶೋಕ ಪಟ್ಟಣ, ಯಶವಂತರಾಯಗೌಡ ಪಾಟೀಲ್, ತನ್ವೀರ್ ಸೇಠ್, ರಾಘವೇಂದ್ರ ಹಿಟ್ನಾಳ್ ಸೇರಿ 16 ಶಾಸಕರಿಂದ ಈ ಬಗ್ಗೆ ಮನವಿ ಮಾಡಲಾಗಿದೆ.

‘ಉಪಚುನಾವಣೆ ಬಳಿಕ ಸಂಪುಟ ಪುನಾರಚನೆ’

ಸಚಿವ ಸಂಪುಟ ವಿಚಾರವಾಗಿ ಸ್ವತಃ ನಾನೇ ದೆಹಲಿಗೆ ಹೋಗುತ್ತೇನೆ. ಉಪಚುನಾವಣೆ ಬಳಿಕ ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಲಿದ್ದು, ಆ ವೇಳೆ ನಿಮ್ಮ ಆಗ್ರಹವನ್ನು ವರಿಷ್ಠರಿ ಗಮನಕ್ಕೆ ತರೋದಾಗಿ ಸಿಎಂ ಸಿದ್ದರಾಮಯ್ಯ ಈ ವೇಳೆ ಹಿರಿಯ ಶಾಸಕರಿಗೆ ತಿಳಿಸಿದ್ದಾರೆ. ಅಲ್ಲದೆ, ಉಪಚುನಾವಣೆ ಬಳಿಕ ಸಂಪುಟ ಪುನಾರಚನೆ ಮಾಡುವುದಾಗಿ ಭರವಸೆಯನ್ನೂ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸ್ಪೀಕರ್ ಖಾದರ್ ಗುಡುಗಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ! ಇಲಾಖಾವಾರು ಎಷ್ಟು ಉತ್ತರ ನೀಡಲಾಯ್ತು? ಇಲ್ಲಿದೆ ವರದಿ

‘ಏಪ್ರಿಲ್ 11ರಂದು ದೆಹಲಿಗೆ ಹೋಗಲು ಪ್ಲ್ಯಾನ್’

ಇನ್ನು ಸಿಎಂ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಹೆಚ್​.ಸಿ. ಬಾಲಕೃಷ್ಣ, ಮೂಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಶಾಸಕರೆಲ್ಲರೂ ಈ ವೇಳೆ ಉಪಸ್ಥಿತರಿದ್ದರು. ಮಂತ್ರಿ ಮಂಡಲ ಪುನಾರಚನೆ ವೇಳೆ ನಮ್ಮನ್ನು ಪರಿಗಣಿಸುವಂತೆ ಕೇಳಿದ್ದೇವೆ. ಕನಿಷ್ಠ 20 ಹಿರಿಯ ಶಾಸಕರಿಗೆ ಅವಕಾಶ ಕೊಡುವಂತೆ ಆಗ್ರಹಿಸಲಾಗಿದೆ. ಈ ವೇಳೆ ಹೈಕಮಾಂಡ್​ ಜೊತೆ ನಾನು ಮಾತನಾಡ್ತೇನೆ, ನೀವೂ ಮಾತನಾಡಿ ಎಂದು ಸಿಎಂ ಹೇಳಿದ್ದಾರೆ. ಹೀಗಾಗಿ ನಾವು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ. ಏಪ್ರಿಲ್ 11ರಂದು ದೆಹಲಿಗೆ ಹೋಗಲು ಪ್ಲ್ಯಾನ್ ಮಾಡಿದ್ದು, 40 ಶಾಸಕರು ಒಟ್ಟಾಗಿ ಹೈಕಮಾಂಡ್​ಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ