AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ: ಕಾರಣ ಏನು?

ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನಕ್ಕೆ ಕರ್ನಾಟಕದ ಕ್ಯಾಬಿನೆಟ್​​ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಬಿಜಿ ರಾಮ್ ಜಿ ಕಾಯ್ದೆ 2025ರ ಬಗ್ಗೆ ಈ ವೇಳೆ ಪ್ರಮುಖವಾಗಿ ಚರ್ಚೆ ನಡೆಯಲಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಮೂರು ನಿರ್ಣಯಗಳನ್ನು ಮಾಡಿದ್ದೇವೆ ಎಂದು ಸಚಿವ ಹೆಚ್​​.ಕೆ. ಪಾಟೀಲ್​​ ತಿಳಿಸಿದ್ದಾರೆ.

ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ: ಕಾರಣ ಏನು?
ಸಚಿವ ಸಂಪುಟ ಸಭೆ. (ಫೈಲ್​​ ಫೋಟೋ)
ಪ್ರಸನ್ನ ಗಾಂವ್ಕರ್​
| Edited By: |

Updated on:Jan 14, 2026 | 3:59 PM

Share

ಬೆಂಗಳೂರು, ಜನವರಿ 14: ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ​​ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಬಿಜಿ ರಾಮ್ ಜಿ ಕಾಯ್ದೆ 2025 ಸಮಾಜದ ಮೇಲೆ ಬೀರುವ ಪರಿಣಾಮಗಳ ಕುರಿತು ಜಂಟಿ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯಿಸಲು ತೀರ್ಮಾನ ಮಾಡಲಾಗಿದೆ ಎಂದು ವಿಶೇಷ ಕ್ಯಾಬಿನೆಟ್​​ ಸಭೆಯ ಬಳಿಕ ಸಚಿವ ಹೆಚ್​​.ಕೆ. ಪಾಟೀಲ್ ತಿಳಿಸಿದ್ದಾರೆ.

‘ಕೇಂದ್ರ ಸರ್ಕಾರದಿಂದ ಬಡವರಿಗೆ ದ್ರೋಹ’

ಕೇಂದ್ರದಿಂದ ನರೇಗಾ ಯೋಜನೆ ಹೆಸರು ಬದಲಾವಣೆ ವಿಚಾರ ಸಂಬಂಧ ವಿಧಾನಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಯೋಜನೆಯಡಿ ಹಿಂದೆ ಕೇಂದ್ರ ಶೇ.100 ಹಣ ಕೊಡ್ತಿತ್ತು, ಆದರೆ ಈಗ ಶೇ.40ರಷ್ಟು ಹಣವನ್ನು ರಾಜ್ಯವೇ ಕೊಡಬೇಕು. ಹೊಸ ಕಾಯ್ದೆ ಪ್ರಕಾರ ಕೇಂದ್ರ ಹೇಳಿದ ಕಡೆ ಕೆಲಸ ಮಾಡಬೇಕಿದ್ದು, ಬಡವರಿಗೆ ದ್ರೋಹ ಮಾಡಲಾಗ್ತಿದೆ ಎಂದು ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ಅಲ್ಲದೆ ಬಿಜೆಪಿಗರು ನಕಲಿ ರಾಮನ ಭಕ್ತರಾಗಿದ್ದು, ಮತಕ್ಕಾಗಿ ರಾಮ ಅಂತಾರೆ. ಎಲ್ಲ ದೇವಸ್ಥಾನ ಕಟ್ಟಿದ್ದು ನಾವಾಗಿರುವ ಕಾರಣ ನಿಜವಾದ ರಾಮನ ಭಕ್ತರು ನಾವೇ. ಬಿಜೆಪಿಯವರು ನಕಲಿ ಹಿಂದೂಗಳು ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ:  ‘ವಿಬಿಜಿ ರಾಮ್ ಜಿ ಕಾಯ್ದೆ’ ಭ್ರಷ್ಟಾಚಾರಿ ಕಾಂಗ್ರೆಸ್‌ ಮಧ್ಯವರ್ತಿಗಳಿಗೆ ತೊಡಕು; ಜೋಶಿ ತಿರುಗೇಟು

ಆದರೆ ವಿಬಿ ಜೀ ರಾಮ್ ಜೀ ಯೋಜನೆಗೆ ಕಾಂಗ್ರೆಸ್​​ ವಿರೋಧವನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ಕಾಂಗ್ರೆಸ್‌ ಅವಧಿಯಲ್ಲಿ ಮನರೇಗಾದಲ್ಲಿ 11 ಲಕ್ಷ ಕೋಟಿ ರೂಪಾಯಿ ಮೊತ್ತದ ಭ್ರಷ್ಟಾಚಾರ ಆಗಿದೆ. ಈ ಅಕ್ರಮ, ವ್ಯಾಪಕ ಭ್ರಷ್ಟಾಚಾರ ತಡೆಯಲೆಂದೇ ಕೇಂದ್ರ ಸರ್ಕಾರ ʼವಿಬಿಜಿ ರಾಮ್ ಜಿ ಕಾಯ್ದೆʼ ಜಾರಿ ತಂದಿದೆ. ಆದರೆ, ಕಾಂಗ್ರೆಸ್‌ಗೆ ಇದೇ ದೊಡ್ಡ ಸಮಸ್ಯೆಯಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಈ ಹಿಂದೆ ಆರೋಪಿಸಿದ್ದರು. ವಿಬಿಜಿ ರಾಮ್ ಜಿ ಕಾಯ್ದೆಯಲ್ಲಿ ಎಐ ತಂತ್ರಜ್ಞಾನ, ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿದ್ದು, ಕೆಲಸದ ಗುಣಮಟ್ಟವನ್ನೂ ಪರೀಕ್ಷಿಸಲಾಗುತ್ತಿದೆ. ಮನರೇಗದಲ್ಲಿ ಹಣ ಹೊಡೆಯುತ್ತಿದ್ದ ಕಾಂಗ್ರೆಸ್‌ನ ಮಧ್ಯವರ್ತಿಗಳಿಗೆ ಇದುವೇ ತಲೆನೋವಾಗಿ ಪರಿಣಮಿಸಿದೆ. ಹಾಗಾಗಿ ವಿರೋಧಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:43 pm, Wed, 14 January 26

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ