AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಸಿಎಂ ಬಸವರಾಜ ಬೊಮ್ಮಾಯಿ

ದೆಹಲಿಯಿಂದ 6 ಗಂಟೆಯ ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದ ಸಿಎಂ 8.45ಕ್ಕೆ ಬೆಂಗಳೂರು ತಲುಪಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಆರ್.ಟಿ ನಗರ ನಿವಾಸದಿಂದ ಗೃಹ ಕೃಷ್ಣಾಗೆ ತೆರಳುತ್ತಾರೆ.

ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9 Web
| Edited By: sandhya thejappa|

Updated on:May 01, 2022 | 11:16 AM

Share

ಬೆಂಗಳೂರು: ದೆಹಲಿಗೆ ತೆರಳಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಮೇ 1) ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ. ಒಂದು ದಿನದ ದೆಹಲಿ ಪ್ರವಾಸ ಮುಗಿಸಿ ಆರ್.ಟಿ ನಗರದ ನಿವಾಸಕ್ಕೆ ಬಂದಿದ್ದಾರೆ. ದೆಹಲಿಯಿಂದ 6 ಗಂಟೆಯ ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದ ಸಿಎಂ 8.45ಕ್ಕೆ ಬೆಂಗಳೂರು ತಲುಪಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಆರ್.ಟಿ ನಗರ ನಿವಾಸದಿಂದ ಗೃಹ ಕೃಷ್ಣಾಗೆ ತೆರಳುತ್ತಾರೆ. ನಂತರ ಸಿಎಂ ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಭಾಗಿಯಾಗುತ್ತಾರೆ.

ಮಧ್ಯಾಹ್ನ 1 ಗಂಟೆಗೆ ರಾಮಾನುಜ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗುತ್ತಾರೆ. ಸಂಜೆ 5.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಜಸ್ಟಿನ್ ಶ್ರೀ ಎಂ ರಾಮಕೃಷ್ಣ ಜನ್ಮ ದಿನಾಚರಣೆಯಲ್ಲಿ ಬೊಮ್ಮಾಯಿ ಪಾಲ್ಗೊಳ್ಳುತ್ತಾರೆ.

ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ವಾಣಿಜ್ಯ ಸಚಿವ ಪಿಯೂಶ್ ಗೋಯಲ್​​ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಸಚಿವ ಸಂಪುಟ ಬಗ್ಗೆ ಚರ್ಚೆ ಮಾಡಿರುವ ಸಾಧ್ಯತೆಯಿದೆ. ಏಪ್ರಿಲ್​ 5ರಂದೂ ಬಸವರಾಜಬೊಮ್ಮಾಯಿ ದೆಹಲಿಗೆ ಹೋಗಿದ್ದರು. ಆಗಲೂ ಸಹ ಸಂಪುಟ ವಿಸ್ತರಣೆ ಮಾತುಗಳು ಮುನ್ನಲೆಗೆ ಬಂದಿದ್ದವು.

ಬಿಜೆಪಿ ಸರ್ಕಾರ ರಚಿಸಿದಾಗ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳಂತೂ ತುದಿಗಾಲಿನಲ್ಲಿ ನಿಂತಿದ್ದಾರೆ. ಅದರಲ್ಲೂ ಮುಖ್ಯವಾಗಿ ಕೇಳಿಬರುತ್ತಿರುವುದು ಬಸನಗೌಡ ಪಾಟೀಲ್​ ಯತ್ನಾಳ್​, ಎಂಪಿ ರೇಣುಕಾಚಾರ್ಯ, ದತ್ತಾತ್ರೇಯ ಪಾಟೀಲ್​ ರೇವುರ್​, ಪಿ.ರಾಜೀವ್​, ಎಸ್​.ಎ.ರಾಮದಾಸ್​, ಪೂರ್ಣಿಮಾ, ಬಿ.ವೈ.ವಿಜಯೇಂದ್ರ, ತಿಪ್ಪಾರೆಡ್ಡಿ ಮತ್ತು ರಾಜೂಗೌಡರದ್ದು. ಮತ್ತೊಮ್ಮೆ ಸಚಿವ ಸ್ಥಾನಕ್ಕೆ ಏರಲು ರಮೇಶ್ ಜಾರಕಿಹೊಳಿ ಕೂಡ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ

ಮೊದಲ ದಿನ ಕೆಲಸಕ್ಕೆ ಹೋದ ನರ್ಸ್​ ಮರುದಿನ ಹಾಸ್ಪಿಟಲ್​​ನಲ್ಲಿ ಶವವಾಗಿ ಪತ್ತೆ; ರೇಪ್​ ಆ್ಯಂಡ್​ ಮರ್ಡರ್​ ಎಂದು ದೂರು ಕೊಟ್ಟ ಕುಟುಂಬ

ಭಾರತೀಯ ಸೇನೆಯ 2ನೇ ಅತ್ಯುನ್ನತ ಸ್ಥಾನಕ್ಕೇರಿದ ಬಿಎಸ್ ರಾಜು; ಹುಟ್ಟೂರು ಚಿಕ್ಕಮಗಳೂರಿನಲ್ಲಿ ಸಂಭ್ರಮಾಚರಣೆ

Published On - 11:10 am, Sun, 1 May 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ