AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇಲ್ಲಿಗೆ ಬಂದು ನಿಮಗೆ ಹೇಳಬೇಕಾ? ಬಿಬಿಎಂಪಿ- ಜಲಮಂಡಳಿ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತರಾಟೆ

HSR ಲೇಔಟ್‌ನಲ್ಲಿರುವ STP ಘಟಕ ಪರಿಶೀಲನೆ ವೇಳೆ ಗರಂ ಆದ ಸಿಎಂ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ನಾನು ಇಲ್ಲಿಗೆ ಬಂದು ನಿಮಗೆ ಹೇಳಬೇಕಾ? ಬೇಗ ಬೇಗ ಎಸ್ಟಿಪಿ ನಿರ್ಮಾಣ ಕಾಮಗಾರಿ ಮುಗಿಸಿ...

ನಾನು ಇಲ್ಲಿಗೆ ಬಂದು ನಿಮಗೆ ಹೇಳಬೇಕಾ? ಬಿಬಿಎಂಪಿ- ಜಲಮಂಡಳಿ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತರಾಟೆ
ನಾನು ಇಲ್ಲಿಗೆ ಬಂದು ನಿಮಗೆ ಹೇಳಬೇಕಾ? ಬಿಬಿಎಂಪಿ- ಜಲಮಂಡಳಿ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತರಾಟೆ
TV9 Web
| Edited By: |

Updated on:Oct 18, 2021 | 11:28 AM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಿಟಿ ರೌಂಡ್ಸ್ ಕೈಗೊಂಡಿದ್ದು ಮಳೆ ಹಾನಿ ಸೇರಿದಂತೆ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವೇಳೆ ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

HSR ಲೇಔಟ್‌ನಲ್ಲಿರುವ STP ಘಟಕ ಪರಿಶೀಲನೆ ವೇಳೆ ಗರಂ ಆದ ಸಿಎಂ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ನಾನು ಇಲ್ಲಿಗೆ ಬಂದು ನಿಮಗೆ ಹೇಳಬೇಕಾ? ಬೇಗ ಬೇಗ ಎಸ್ಟಿಪಿ ನಿರ್ಮಾಣ ಕಾಮಗಾರಿ ಮುಗಿಸಿ. ಸ್ಥಳೀಯ ಎಂಜನೀಯರ್ಸ್ ಕೆಲಸ ಮಾಡುತ್ತಿಲ್ಲ ಅಂತಾ ದೂರುಗಳು ಹೆಚ್ಚಾಗುತ್ತಿವೆ. ನಿಮ್ಮ ಕಾರ್ಯವೈಖರಿ ಸರಿಯಿಲ್ಲ. ಇದು ಮುಂದುವರಿದ್ರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ. ಮಳೆ ಹಾನಿ ಸಮಸ್ಯೆಗಳು ಕಡಿಮೆಯಾಗಬೇಕು. ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಅಂತಾ ಸಿಎಂ ಬೊಮ್ಮಾಯಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

HSR ಲೇಔಟ್‌ನಲ್ಲಿರುವ STP ಘಟಕ ಪರಿಶೀಲನೆ ನಡೆಸಿದ ಬಳಿಕ ಸಿಎಂ ಬೊಮ್ಮಾಯಿ ಅಧಿಕಾರಿಗಳು, ಸ್ಥಳೀಯ ನಿವಾಸಿಗಳ ಜೊತೆ ಚರ್ಚೆ ನಡೆಸಿದ್ರು. ಮಳೆ ಹಾನಿಯ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ್ರು. ರಾಜಕಾಲುವೆ ಒತ್ತುವರಿಯಿಂದಾಗಿ ಸಮಸ್ಯೆಯಾಗಿದೆ. ಮಂತ್ರಿ ಸ್ಕ್ವೇರ್ ಡೆವಲಪರ್ಸ್‌ನಿಂದ ಸಮಸ್ಯೆಯಾಗ್ತಿದೆ. BBMP, BWSSB ಮಧ್ಯೆ ಸಮನ್ವಯತೆ ಇಲ್ಲ. ಹೀಗಾಗಿ ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದು ಸಮನ್ವಯತೆಯಿಂದ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿ ಎಂದು ಸಿಎಂಗೆ ಮನವಿ ಮಾಡಿದ್ದರು. ಸ್ಥಳೀಯರ ದೂರಿನಿಂದ ಬೇಜಾರಾದ ಸಿಎಂ ಅಧಿಕಾರಿಗಳಿಗೆ ತರಾಟೆಗೆ ತೆಗದುಕೊಂಡಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಬೆಂಗಳೂರು ಸಿಟಿ ರೌಂಡ್ಸ್; ಮಳೆ ಹಾನಿ, ಕಾಮಗಾರಿಗಳ ಪರಿಶೀಲನೆ

Published On - 11:25 am, Mon, 18 October 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?