AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ವಿಮ್ಸ್ ಪ್ರಕರಣ: ಸಚಿವ ಕೆ ಸುಧಾಕರ್ ರಾಜಿನಾಮೆಗೆ ವಿಪಕ್ಷಗಳ ಒತ್ತಾಯ; ಸಿಎಂ ಬೊಮ್ಮಾಯಿ ಆಕ್ರೋಶ

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತಗೊಂಡು, ಮೂವರು ರೋಗಿಗಳು ಸಾವನ್ನಪ್ಪಿದ್ದು, ಘಟನೆಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕಾರಣ, ಕೂಡಲೇ ರಾಜೀನಾಮೆ ನೀಡಬೇಕೆಂಬ ವಿಪಕ್ಷಗಳ ಒತ್ತಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಳ್ಳಿಹಾಕಿದ್ದಾರೆ.

ಬಳ್ಳಾರಿ ವಿಮ್ಸ್ ಪ್ರಕರಣ: ಸಚಿವ ಕೆ ಸುಧಾಕರ್ ರಾಜಿನಾಮೆಗೆ ವಿಪಕ್ಷಗಳ ಒತ್ತಾಯ; ಸಿಎಂ ಬೊಮ್ಮಾಯಿ ಆಕ್ರೋಶ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Sep 18, 2022 | 4:50 PM

Share

ಬೆಂಗಳೂರು: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದ (electricity failure) ವೆಂಟಿಲೇಟರ್ (Ventilator) ಸ್ಥಗಿತಗೊಂಡು, ಮೂವರು ರೋಗಿಗಳು ಸಾವನ್ನಪ್ಪಿದ್ದು, ಘಟನೆಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕಾರಣ, ಕೂಡಲೇ ರಾಜೀನಾಮೆ ನೀಡಬೇಕೆಂಬ ವಿಪಕ್ಷಗಳ ಒತ್ತಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಳ್ಳಿಹಾಕಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಮಿಂಟ್​ ವರದಿ ಮಾಡಿದೆ.

ಪ್ರತಿಪಕ್ಷಗಳು ವಿಮ್ಸ್ ಆಸ್ಪತ್ರೆಯಲ್ಲಿ ಆದ ಅವಘಡಕ್ಕೆ ಡಾ.ಸುಧಾಕರ್ ಕಾರಣ ಎಂದು ಆರೋಪಿಸಿದ್ದವು. ಇದಕ್ಕೆ ಉತ್ತರಿಸಿದ ಸಿಎಂ ಬೊಮ್ಮಾಯಿ ಸುಧಾಕರ್ ರಾಜೀನಾಮೆ ಕೇಳುವುದು ಪ್ರತಿಪಕ್ಷಗಳ ಕೆಲಸ. ಕಾಂಗ್ರೆಸ್ ಪ್ರತಿಯೊಂದು ವಿಷಯದಲ್ಲೂ ರಾಜಕೀಯ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದೆ ಎಂದು ಕಿಡಿಕಾರಿದಾರು.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಕರ್ನಾಟಕ ಖಾಸಗಿ ಆಸ್ಪತ್ರೆಗಳ ಮಸೂದೆಯನ್ನು ಮಂಡಿಸಿದಾಗ ವೈದ್ಯರು 5 ದಿನಗಳ ಮುಷ್ಕರ ನಡೆಸಿದರು. ಆಗ 80 ಜನ ಸಾವನ್ನಪ್ಪಿದ್ದರು. ಕಾಂಗ್ರೆಸ್ ಸರ್ಕಾರ ನೈತಿಕ ಹೊಣೆ ಹೊತ್ತುಕೊಂಡಿದೆಯೇ? ಆ ಸಮಯದಲ್ಲಿ ಯಾರಾದರೂ ರಾಜೀನಾಮೆ ನೀಡಿದ್ದೀರಾ? ಆಗಿನ ಆರೋಗ್ಯ ಸಚಿವರು ರಾಜೀನಾಮೆ ನೀಡಿದ್ರಾ? ಪ್ರತಿಯೊಂದು ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ,” ಎಂದು ಸಿಎಂ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಹಿನ್ನೆಲೆ

ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ವಿಮ್ಸ್)ನಲ್ಲಿ ಸೆ. 14ರಂದು ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತಗೊಂಡು, ಮೂವರು ರೋಗಿಗಳು ಸಾವನ್ನಪ್ಪಿದ್ದರು. ಕಿಡ್ನಿ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವೆಂಟಿಲೇಟರ್​ನಲ್ಲಿದ್ದ ಮೌಲಾ ಹುಸೇನ್ (35) ಮತ್ತು ಹಾವು ಕಡಿತಕ್ಕೆ ಒಳಗಾದ ಚೆಟ್ಟೆಮ್ಮ (30) ಸಾವನ್ನಪ್ಪಿದ್ದರು. ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದ ಮತ್ತೊಬ್ಬ ರೋಗಿ ಸಹ ಸಾವನ್ನಪ್ಪಿದ್ದರು. ಐಸಿಯುನಲ್ಲಿದ್ದ 10 ರೋಗಿಗಳ ಪೈಕಿ, ಈ ಮೂವರು ರೋಗಿಗಳು ಅಸುನೀಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ