AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡರಂತೆ ಮೋದಿ ಸಹ ವಿಕಾಸ ಪುರುಷ: ಸಿಎಂ ಬಸವರಾಜ ಬೊಮ್ಮಾಯಿ

ವಿಶ್ವದಲ್ಲಿ ಆರ್ಥಿಕ ಹಿಂಜರಿತದಿಂದ ಹಲವು ಸಮಸ್ಯೆಗಳಾಗಿವೆ. ಆದರೆ ಭಾರತದಲ್ಲಿ ಮೋದಿ ಅವರ ಯೋಗ್ಯ ನಾಯಕತ್ವದಿಂದ ಆರ್ಥಿಕತೆ ಸದೃಢವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೆಂಪೇಗೌಡರಂತೆ ಮೋದಿ ಸಹ ವಿಕಾಸ ಪುರುಷ: ಸಿಎಂ ಬಸವರಾಜ ಬೊಮ್ಮಾಯಿ
Basavaraj Bommai
TV9 Web
| Edited By: |

Updated on: Nov 11, 2022 | 1:14 PM

Share

ವಿಶ್ವದಲ್ಲಿ ಆರ್ಥಿಕ ಹಿಂಜರಿತದಿಂದ ಹಲವು ಸಮಸ್ಯೆಗಳಾಗಿವೆ. ಆದರೆ ಭಾರತದಲ್ಲಿ ಮೋದಿ ಅವರ ಯೋಗ್ಯ ನಾಯಕತ್ವದಿಂದ ಆರ್ಥಿಕತೆ ಸದೃಢವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೆಂಪೇಗೌಡರ ಪ್ರಗತಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಬ್ಬ ವಿಕಾಸ ಪುರುಷನ ಪ್ರತಿಮೆಯನ್ನು ಮತ್ತೊಬ್ಬ ವಿಕಾಸ ಪುರುಷನ ಪ್ರತಿಮೆ ಅನಾವರಣಗೊಳಿಸಿದ್ದು ದೈವೇಚ್ಛೆ. ಮೋದಿ ಅವರು ಕರ್ನಾಟಕಕ್ಕೆ ಸಬ್​ಅರ್ಬನ್ ಟ್ರೇನ್ ಸೇರಿದಂತೆ ಹಲವು ಕೊಡುಗೆ ಕೊಟ್ಟಿದ್ದಾರೆ. ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ.

ಮೋದಿ ಅವರು ಬೆಂಗಳೂರಿನಲ್ಲಿ ಹತ್ತಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ನಾಡಿನ ಶ್ರೇಷ್ಠ ಸಂತರಾದ ಕನಕದಾಸರ ಜನ್ಮದಿನೋತ್ಸವ, ವಾಲ್ಮೀಕಿ ಪ್ರತಿಮೆಗೆ ಗೌರವ ಸಲ್ಲಿಸಿದರು. ಇದು ನಾಡಿಗೆ ಸಲ್ಲಿಸಿರುವ ಗೌರವದ ಪ್ರತೀಕ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 2ನೇ ಟರ್ಮಿನಲ್ ಆರಂಭದ ನಂತರ ಇದು ಭಾರತದ ಅತಿದೊಡ್ಡ ವಿಮಾನ ನಿಲ್ದಾಣವಾಗಿದೆ. ವಂದೇ ಭಾರತ್ ರೈಲಿನ ಮೂಲಕ ಕರ್ನಾಟಕಕ್ಕೆ ಹಲವು ಅನುಕೂಲವಿದೆ.

ವಿಜಯನಗರ ಕಾಲದ ಸುವರ್ಣ ಯುಗದ ದರ್ಶನವನ್ನು ಬೆಂಗಳೂರು ಸುತ್ತಮುತ್ತಲ ಗ್ರಾಮಗಳಿಗೆ ನಾಡಪ್ರಭು ಕೆಂಪೇಗೌಡರ ಮಾಡಿಸಿದರು. ಅವರು ಯೋಜನಾಬದ್ಧ ನಗರ ನಿರ್ಮಿಸಿ, ಪೇಟೆಗಳನ್ನು ಕಟ್ಟಿದರಿಂದ ಜನರಿಗೆ ಸುಖ-ನೆಮ್ಮದಿ ಕಲ್ಪಿಸಿಕೊಟ್ಟರು.

ಕೆಂಪೇಗೌಡರಿಗೆ ಗೌರವ ಸಲ್ಲಿಸುವ ಮೂಲಕ ನಾಡಿನ ಪರಂಪರೆ, ಪ್ರಗತಿಪರ ಚಿಂತನೆಗೆ ಗೌರವ ಕೊಟ್ಟಂತೆ ಆಗಿದೆ. ನಾವೂ ಸಹ ಇಂದು ಸಂಕಲ್ಪ ಮಾಡುತ್ತೇವೆ. ಕೆಂಪೇಗೌಡರ ಚಿಂತನೆ, ವಿಚಾರಧಾರೆಯಂತೆ ನಾಡು ಕಟ್ಟಲು ನಮ್ಮ ಸರ್ಕಾರ ಸಂಕಲ್ಪ ಮಾಡುತ್ತದೆ.

ಕೆಂಪೇಗೌಡರು ವಿಕಾಸ ಪುರುಷ. ಹೀಗಾಗಿಯೇ ಕೆಂಪೇಗೌಡರ ಪ್ರಗತಿಗೆ ‘ಸಮೃದ್ಧಿಯ ಪ್ರತಿಮೆ’ ಎಂದು ಕರೆದಿದ್ದೇವೆ. ಪ್ರಧಾನಿ ಇಂದು ದೇಶದ ಹತ್ತಾರು ಮೂಲಭೂತ ಸಮಸ್ಯೆಗಳನ್ನು ಪರಿಹರಿಸಿ, ಆತ್ಮನಿರ್ಭರ ಭಾರತ ರೂಪಿಸಲು ಯತ್ನಿಸುತ್ತಿದ್ದಾರೆ. ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು