ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ತಂಬಾಕು, ಸಿಗರೇಟು ಜಾಹೀರಾತು: ಮುಖ್ಯಮಂತ್ರಿ ಕಚೇರಿಯಿಂದ ಬಂತು ಖಡಕ್ ಸೂಚನೆ

ಕರ್ನಾಟಕ ಸರ್ಕಾರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು ಮತ್ತು ಮದ್ಯದ ಜಾಹೀರಾತುಗಳನ್ನು ತೆರೆವುಗೊಳಿಸಲು ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಿದೆ. ಸಾರ್ವಜನಿಕರೊಬ್ಬರು ಎಕ್ಸ್ ಮೂಲಕ ಮಾಡಿದ ಮನವಿ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈಗಾಗಲೇ ನೋಟಿಸ್‌ ನೀಡುವ ಮೂಲಕ ಜಾಹೀರಾತುಗಳನ್ನು ತೆರವುಗೊಳಿಸಲಾಗಿದೆ.

ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ತಂಬಾಕು, ಸಿಗರೇಟು ಜಾಹೀರಾತು: ಮುಖ್ಯಮಂತ್ರಿ ಕಚೇರಿಯಿಂದ ಬಂತು ಖಡಕ್ ಸೂಚನೆ
ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ತಂಬಾಕು, ಸಿಗರೇಟು ಜಾಹೀರಾತು: ಮುಖ್ಯಮಂತ್ರಿ ಕಚೇರಿಯಿಂದ ಬಂತು ಖಡಕ್ ಸೂಚನೆ

Updated on: Apr 18, 2025 | 9:17 AM

ಬೆಂಗಳೂರು, ಏಪ್ರಿಲ್​ 18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ (Bus) ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್​ ಕೂಡ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಸರ್ಕಾರಕ್ಕೆ ಓರ್ವ ವ್ಯಕ್ತಿ ಮನವಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ‘ಎಕ್ಸ್‌ʼ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ
ವೀಕೆಂಡ್ ಕಬ್ಬನ್ ಪಾರ್ಕ್​ಗೆ ಹೋಗುವವರಿಗೆ ಸಂಚಾರ ಪೊಲೀಸರಿಂದ ಗುಡ್ ನ್ಯೂಸ್
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಶನಿವಾರ, ಭಾನುವಾರ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!

ಮುಖ್ಯಮಂತ್ರಿ ಕಚೇರಿ ಟ್ವೀಟ್​

ಕೂಡಲೇ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸಂಬಂಧಪಟ್ಟ ಪರವಾನಗಿದಾರರಿಗೆ ನೋಟಿಸ್‌ ನೀಡಿದ್ದಾರೆ. ಜೊತೆಗೆ ಬಸ್‌ಗಳಲ್ಲಿ ಅಳವಡಿಸಲಾಗಿದ್ದ ಕೂಲ್‌ ಲಿಪ್‌ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: Bengaluru Traffic Advisory: ಶನಿವಾರ, ಭಾನುವಾರ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ

ಇನ್ನು ಮುಂದೆ ಇಂತಹ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೂಡ್ಲು-ಹರಳೂರು ರಸ್ತೆ ಡಾಂಬರೀಕರಣ ಮಾಡಲಾಗುವುದು: ಸ್ಪಂದಿಸಿದ ಸರ್ಕಾರ

ಇದೇ ರೀತಿಯಾಗಿ ಇತ್ತೀಚೆಗೆ ವ್ಯಕ್ತಿಯೊಬ್ಬರು ಕೂಡ್ಲು-ಹರಳೂರು ರಸ್ತೆ ದುರಸ್ತಿ ಬಗ್ಗೆ ಟ್ವೀಟ್ ಮೂಲಕ ಮನವಿ ಮಾಡಿದ್ದರು. ಈ ಬಗ್ಗೆ ಕೂಡ ಸ್ಪಂದಿಸಿರುವ ಸರ್ಕಾರ, ಕೂಡ್ಲು-ಹರಳೂರು ಮುಖ್ಯರಸ್ತೆ ಬೊಮ್ಮನಹಳ್ಳಿ ವಲಯ ವ್ಯಾಪ್ತಿಗೆ ಒಳಪಡುತ್ತಿದ್ದು, ಈ ರಸ್ತೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 110 ಹಳ್ಳಿಗಳಿಗೆ ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕಾಮಗಾರಿ ನಡೆಯುತ್ತಿದೆ.

ಕೂಡ್ಲು-ಹರಳೂರು ಮುಖ್ಯರಸ್ತೆ ಕೂಡ್ಲು ವಾರ್ಡ್​​ ಆಫೀಸ್​ನಿಂದ ಕೆಸಿಡಿಸಿ ಮುಖಾಂತರ ಬಿರ್ಲ್ಲಾ ಸರ್ಕಲ್​ ವರೆಗೆ ರಸ್ತೆ ಡಾಂಬರಿಕರಣಕ್ಕಾಗಿ ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಕಾಮಗಾರಿಯನ್ನು ಕೈಗೊಳ್ಳಲು ಗುತ್ತಿಗೆದಾರರಿಗೆ ಆದೇಶ ನೀಡಲಾಗಿದೆ.

ಇದನ್ನೂ ಓದಿ: Cubbon Park: ವೀಕೆಂಡ್ ಕಬ್ಬನ್ ಪಾರ್ಕ್​ಗೆ ಹೋಗುವವರಿಗೆ ಟ್ರಾಫಿಕ್ ಪೊಲೀಸರಿಂದ ಗುಡ್ ನ್ಯೂಸ್

BWSSB ವತಿಯಿಂದ ಒಳಚರಂಡಿ ಮಾರ್ಗಗಳನ್ನು ಅಳವಡಿಸುತ್ತಿರುವುದರಿಂದ ರಸ್ತೆ ಡಾಂಬರೀಕರಣ ಪೂರ್ಣಗೊಳಿಸಲು ವಿಳಂಬವಾಗುತ್ತಿದೆ. ಹಾಗಾಗಿ BWSSB ಕಾಮಗಾರಿ ಪೂರ್ಣಗೊಂಡ ನಂತರ ಕೊಡ್ಲು-ಹರಳೂರು ಮುಖ್ಯರಸ್ತೆ ಡಾಂಬರೀಕರಣಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:39 am, Fri, 18 April 25