AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ-ಡಿಕೆಶಿ ನಡುವೆ ಸಿಎಂ ಕುರ್ಚಿ ಫೈಟ್​: ಸೋಶಿಯಲ್​ ಮೀಡಿಯಾದಲ್ಲಿ ಮೀಮ್ಸ್​ಗಳದ್ದೇ ಹವಾ!

ಕರ್ನಾಟಕದಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಫೈಟ್ ತಾರಕಕ್ಕೇರಿದೆ. ಇಬ್ಬರ ಬೆಂಬಲಿಗರು, ಸ್ವಾಮೀಜಿಗಳು ಮತ್ತು ಜಾತಿ ಸಂಘಟನೆಗಳು ಸಹ ತಮ್ಮ ನಾಯಕರ ಪರ ಧ್ವನಿ ಎತ್ತುತ್ತಿವೆ. ಈ ರಾಜಕೀಯ ತಿಕ್ಕಾಟ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಮೀಮ್ಸ್ ರೂಪದಲ್ಲಿ ಹರಿದಾಡುತ್ತಿದೆ. ಒಂದಕ್ಕಿಂದ ಒಂದು ಭಿನ್ನ ವಿಡಿಯೋಗಳು ಕಾಣಸಿಗುತ್ತಿವೆ.

ಸಿದ್ದರಾಮಯ್ಯ-ಡಿಕೆಶಿ ನಡುವೆ ಸಿಎಂ ಕುರ್ಚಿ ಫೈಟ್​: ಸೋಶಿಯಲ್​ ಮೀಡಿಯಾದಲ್ಲಿ ಮೀಮ್ಸ್​ಗಳದ್ದೇ ಹವಾ!
ಸಿದ್ದರಾಮಯ್ಯ Vs ಡಿಕೆಶಿ
ಪ್ರಸನ್ನ ಹೆಗಡೆ
|

Updated on:Nov 28, 2025 | 6:59 PM

Share

ಬೆಂಗಳೂರು, ನವೆಂಬರ್​​ 28: ಸಿಎಂ ಸ್ಥಾನದ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಇಬ್ಬರು ನಾಯಕರ ಬೆಂಬಲಿಗರು ಸೇರಿ ಸ್ವಾಮೀಜಿಗಳೂ ಅಖಾಡಕ್ಕಿಳಿದಿದ್ದಾರೆ. ಜಾತಿವಾರು ಸಂಘ ಸಂಸ್ಥೆಗಳೂ ತಮ್ಮ ನಾಯಕರ ಪರ ಧ್ವನಿ ಎತ್ತುತ್ತಿವೆ. ಈ ಎಲ್ಲದರ ನಡುವೆ ರಾಜ್ಯ ಕಾಂಗ್ರೆಸ್​​ ನಾಯಕರ ನಡುವಿನ ಪಟ್ಟದ ಫೈಟ್​​ ಸಾಮಾಜಿಕ ಜಾಲತಾಣಗಳಲ್ಲಿ ಹಲ್ ​ಚಲ್​​ ಎಬ್ಬಿಸಿದೆ. ಈ ಕುರಿತು ನೂರಾರು ಮೀಮ್ಸ್​​ಗಗಳು ಹರಿದಾಡತೊಡಗಿವೆ. ಅಂತಹ ವಿಡಿಯೋಗಳ ಪೈಕಿ ಒಂದರಲ್ಲಿ ಈ ಕುರ್ಚಿ ಗುದ್ದಾಟವನ್ನು ಬಹಳ ವ್ಯಂಗ್ಯವಾಗಿ ಬಿಂಬಿಸಲಾಗಿದೆ.

ಮೀಮ್ಸ್​​ನಲ್ಲಿ ಏನಿದೆ?

ಅಣ್ಣಾ, ಎರಡೂವರೆ ವರ್ಷ ಮುಗಿದರೂ ಇವರು ನಿನಗೆ ಕುರ್ಚಿ ಬಿಡುವ ತರ ಕಾಣುತ್ತಿಲ್ಲ. ನಾನೇ ಹೋಗಿ ಆ ಸಿಎಂ ಕುರ್ಚಿಯನ್ನು ಎತ್ತುಕೊಂಡು ಬರುತ್ತೇನೆ ಎಂದು ಡಿ.ಕೆ. ಸುರೇಶ್​​ ಹೇಳುತ್ತಾರೆ. ಇದಕ್ಕೆ ಡಿ.ಕೆ. ಶಿವಕುಮಾರ್​​ ಕೂಡ ಆಯ್ತು ಎನ್ನುತ್ತಾರೆ. ಆದರೆ ಇವರ ನಡುವಿನ ಸಂಭಾಷಣೆಯನ್ನು ಕೇಳಿಸಿಕೊಳ್ಳುವ ಸಚಿವ ಜಮೀರ್​​ ಅಹ್ಮದ್​​ ಖಾನ್​​, ನಮ್ಮ ಸಿದ್ದರಾಮಯ್ಯ ಅವರ ಕುರ್ಚಿಗೆ ಕಣ್ಣು ಹಾಕ್ತೀರ ಎಂದು ತಮ್ಮಲ್ಲೇ ಹೇಳಿಕೊಳ್ಳುತ್ತಾರೆ. ಜೊತೆಗೆ ಸಿಎಂ ಕುರ್ಚಿಗೆ ಗಮ್​​ ಹಾಕಿ, ಈಗ ಹೇಗೆ ಕುರ್ಚಿ ಕಿತ್ಕೋತೀರಾ ನೋಡುತ್ತೇನೆ. ರಾಹುಲ್​​ ಸಾಬ್​​ ಬಂದರೂ ಕುರ್ಚಿ ಬಿಡಲ್ಲ ಎನ್ನುತ್ತಾರೆ. ಬಳಿಕ ಆ ಕುರ್ಚಿ ಮೇಲೆ ಬಂದು ಕುಳಿತುಕೊಳ್ಳುವ ಸಿದ್ದರಾಮಯ್ಯ, ಜಮೀರ್​ ಏನೋ ಅಂಟುಕೊಂಡ ರೀತಿ ಆಗುತ್ತಿದೆಯಲ್ಲ ಎನ್ನುತ್ತಾರೆ. ಇದಕ್ಕೆ ಉತ್ತರಿಸುವ ಜಮೀರ್​​, ಮುಖ್ಯಮಂತ್ರಿ ಕುರ್ಚಿ ಅಲ್ವಾ ಸರ್​​. ಅದಕ್ಕೂ ನಿಮ್ಮ ಬಿಟ್ಟಿರಲು ಆಗ್ತಿಲ್ಲ ಅನ್ನಿಸುತ್ತೆ ಎಂದು ಹೇಳುತ್ತಾರೆ. ಈ ವೇಳೆಗೆ ಅಲ್ಲಿಗೆ ಡಿಕೆ ಸಹೋದರರು ಬರಲಿದ್ದು, ಡಿಕೆಶಿ ಸಿದ್ದರಾಮಯ್ಯನವರೇ ಎನ್ನುತ್ತಾರೆ. ಆಗ ಬನ್ನಿ ಬನ್ನಿ ಎನ್ನುತ್ತಾ ಸಿದ್ದರಾಮಯ್ಯ ಕುರ್ಚಿಯಿಂದ ಎದ್ದೇಳುವಾಗ, ಕುರ್ಚಿಯೂ ಅವರ ಜೊತೆಗೇ ಬರುತ್ತೆ. ಈ ದೃಶ್ಯವನ್ನು ಕಂಡು ಡಿಕೆಶಿ ಸಹೋದರರು ಗಾಬರಿಯಾದರೆ, ಜಮೀರ್​​ ಮಾತ್ರ ಹಸನ್ಮುಖಿಯಾಗಿರುತ್ತಾರೆ.

ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತ ತಲುಪಿದ ಸಿಎಂ ಕುರ್ಚಿ ಕದನ: ಪದತ್ಯಾಗನಾ? ಪಟ್ಟಾಭಿಷೇಕನಾ?

ಇದೊಂದು ಮಾತ್ರವಲ್ಲದೆ ಇಂತಹ ಹಲವಾರು ಮೀಮ್ಸ್​ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗ್ತಿವೆ. ಮತ್ತೊಂದು ವಿಡಿಯೋದಲ್ಲಿ ಅಧಿಕಾರಕ್ಕಾಗಿ ಕತ್ತಿ ಹಿಡಿದು ಹೋರಾಡುವ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರನ್ನ ರಾಹುಲ್​ ಗಾಂಧಿ ಸಮಾಧಾನ ಮಾಡುವ ರೀತಿಯಲ್ಲಿ ಬಿಂಬಿಸಲಾಗಿದೆ. ಸಿನಿಮಾ ದೃಶ್ಯವನ್ನು ಬಳಸಿಕೊಂಡು ಆ ಪಾತ್ರಗಳಿಗೆ ಇವರ ಹೆಸರನ್ನು ಉಲ್ಲೇಖಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:53 pm, Fri, 28 November 25

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?