AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ಗೆ ಜಮೀನು ಹಸ್ತಾಂತರಕ್ಕೆ ತಡೆ, ಸದನದಲ್ಲಿ ಮಾಹಿತಿ ನೀಡಿದ ಕೃಷ್ಣಬೈರೇಗೌಡ

ಆರ್.ಎಸ್.ಎಸ್ ಗೆ ನೀಡಿದ್ದ ಜಾಗಕ್ಕೆ ಕಾಂಗ್ರೆಸ್ ಸರ್ಕಾರ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಶಾಸಕ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಉತ್ತಿರಿಸುವ ಮೂ;ಲಕ ಸ್ಪಷ್ಟಪಡಿಸಿದ್ದಾರೆ.

ಆರ್​ಎಸ್​ಎಸ್​ಗೆ ಜಮೀನು ಹಸ್ತಾಂತರಕ್ಕೆ ತಡೆ, ಸದನದಲ್ಲಿ ಮಾಹಿತಿ ನೀಡಿದ ಕೃಷ್ಣಬೈರೇಗೌಡ
ಕೃಷ್ಣಬೈರೇಗೌಡ
ಪ್ರಸನ್ನ ಗಾಂವ್ಕರ್​
| Edited By: |

Updated on:Jul 14, 2023 | 11:40 AM

Share

ಬೆಂಗಳೂರು, ಜುಲೈ 14: ಆರ್​ಆರ್​ಎಸ್​ಗೆ (Rashtriya Swayamsevak Sangh) ಕಾಂಗ್ರೆಸ್​  (Congress) ಸರ್ಕಾರ ಬಿಗ್ ಶಾಕ್ ನೀಡಿದೆ. ಜನಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿ ಹಸ್ತಾಂತರಕ್ಕೆ ಸಿದ್ದರಾಮಯ್ಯ ಸರ್ಕಾರ ತಡೆಹಿಡಿದಿದೆ. ಬೆಂಗಳೂರಿನ ತಾವರಕೆರೆಯ ಕುರುಬರಹಳ್ಳಿಯಲ್ಲಿರುವ 35.33 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್​ಗೆ ಈ ಹಿಂದೆ ಬಿಜೆಪಿ ಸರ್ಕಾರ ಮಂಜೂರು ಮಾಡಿತ್ತು. ಆದ್ರೆ, ಇದೀಗ ಕಾಂಗ್ರೆಸ್​ ಸರ್ಕಾರ ತಡೆ ಹಿಡಿದಿದೆ. ಈ ಬಗ್ಗೆ ಇಂದು (ಜುಲೈ 14) ಸದನದಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಲಿಖಿತ ಉತ್ತರ ನೀಡಿದರು.

ಇದನ್ನೂ ಓದಿ: ನೆಮ್ಮದಿ, ಶಾಂತಿ ಕೆಡಿಸಿದ್ರೆ ಆರ್​ಎಸ್​ಎಸ್​, ಭಜರಂಗದಳ ಯಾವ ಸಂಘಟನೆಯೆಂದು ನೋಡದೇ ಕ್ರಮ ಕೈಗೊಳ್ಳುತ್ತೇವೆ -ಪ್ರಿಯಾಂಕ್ ಖರ್ಗೆ

ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಎಷ್ಟು ಸರ್ಕಾರಿ ಜಮೀನನ್ನು ಸಂಘ-ಸಂಸ್ಥೆಗಳಿಗೆ ಇಲಾಖೆಗಳಿಗೆ ಮತ್ತು ವಿವಿಧ ಉದ್ದೇಶಗಳಿಗೆ ನೀಡಲಾಗಿದೆ ಎಂದು ಸೋಮಶೇಖರ್​ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೃಷ್ಣ ಬೈರೇಗೌಡ, ಜನಸೇವಾ ಟ್ರಸ್ಟ್​ಗೆ ನೀಡಲಾಗಿದ್ದ 35 ಎಕರೆ 33 ಗುಂಟೆ ಭೂಮಿಯನ್ನು ತಡೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್​ ಸರ್ಕಾರ ಬಂದ ಒಂದೇ ವಾರಕ್ಕೆ ಭೂಮಿ ಹಸ್ತಾಂತರಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಅಲ್ಲದೇ ಇದೀಗ ಬಿಜೆಪಿಯ ಮಂಜೂರಾತಿಗೆ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದ್ದು, ಇದೀಗ ಈ ಬಗ್ಗೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಲಿಖಿತ ಮಾಹಿತಿ ನೀಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಇದು ಈಗ ತಾನೇ ಆರಂಭವಾಗಿದ್ದು, ಈ ಸರ್ಕಾರ ಯಾವ ಹಾದಿಯಲ್ಲಿ ನಡೆಯುತ್ತೆ ಎಂದು ಗೊತ್ತಾಗುತ್ತಿದೆ. ನ್ಯಾಯಬದ್ಧವಾಗಿ ಜನಸೇವಾ ವಿದ್ಯಾಕೇಂದ್ರ ಕೆಲಸ ಮಾಡುತ್ತಿದೆ. ನಾನು ಕೂಡ ಜನಸೇವಾ ವಿದ್ಯಾಕೇಂದ್ರದಲ್ಲಿ ಶಿಕ್ಷಣ ಪಡೆದವನು. ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ ಎಂದರು.

ಹಿಂದಿನ ಸರ್ಕಾರದ ಯೋಜನೆಗಳನ್ನು ತಡೆ ಹಿಡಿಯುತ್ತಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ 6 ಸಾವಿರ ರೂ. ನೀಡುತ್ತಿದೆ. ರಾಜ್ಯದಲ್ಲಿ ಸಿಎಂ ಆಗಿದ್ದಾಗ ಬಿಎಸ್​ವೈ 4 ಸಾವಿರ ರೂ. ಕೊಡುತ್ತಿದ್ದರು. ಕಾಂಗ್ರೆಸ್ ಸರ್ಕಾರ ಈಗ ರೈತರ ಯೋಜನೆಗೂ ಕಲ್ಲು ಹಾಕಿದೆ. ಬೊಮ್ಮಾಯಿ ಸರ್ಕಾರ ತಂದಿದ್ದ ರೈತ ವಿದ್ಯಾನಿಧಿ ನಿಲ್ಲಿಸಲಾಗಿದೆ ಎಂದು ಕಿಡಿಕಾರಿದರು.

ಕಳೆದ ಸೆಪ್ಟೆಂಬರ್​ನಲ್ಲಿ ಓ ಗೋಮಾಣ ಭೂಮಿಯನ್ನು ಅಂದಿನ ಬಿಜೆಪಿ ಸರ್ಕಾರ ಜನಸೇವಾ ಟ್ರಸ್ಟ್​ಗೆ ಮಂಜೂರು ಮಾಡಿತ್ತು. 2023ರ ಮೇನಲ್ಲಿ ಜಿಲ್ಲಾಧಿಕಾರಿ ಸಹ ಜನಸೇವಾ ಟ್ರಸ್ಟ್​ಗೆ ಜಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದರು. ಆದ್ರೆ,ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರಿವಹಿಸಿಕೊಂಡ ನಂತರ ಈ ಜಮೀನು ಹಸ್ತಾಂತರಕ್ಕೆ ತಡೆ ಹಿಡಿಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಲ್ಲದೇ ಮಂಜುರಾತಿ ಆದೇಶ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದರು. ಇದಕ್ಕೆ ಬಿಜೆಪಿ ನಾಯಕರು ಹಾಗೂ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಸಿದ್ದರಾಮಯ್ಯನವರು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:17 am, Fri, 14 July 23

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ