AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Canteen: ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್​ನಲ್ಲಿ ರಾಗಿ ಮುದ್ದೆ, ರೋಟಿ-ಕರಿ ಭಾಗ್ಯ

ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್ ಬಾಗಿಲು ತೆರೆಯಲಿದೆ. ಅಲ್ಲದೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಕ್ಯಾಂಟೀನ್ ಮೆನುವಿನಲ್ಲಿ ಇನ್ನಷ್ಟು ಖಾದ್ಯಗಳನ್ನು ಸೇರಿಸಲು ಚಿಂತನೆ ನಡೆಸಿದೆ.

Indira Canteen: ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್​ನಲ್ಲಿ ರಾಗಿ ಮುದ್ದೆ, ರೋಟಿ-ಕರಿ ಭಾಗ್ಯ
ಇಂದಿರಾ ಕ್ಯಾಂಟೀನ್​ (ಸಂಗ್ರಹ ಚಿತ್ರ)
ರಮೇಶ್ ಬಿ. ಜವಳಗೇರಾ
|

Updated on:May 25, 2023 | 1:37 PM

Share

ಬೆಂಗಳೂರು: ಬಡವರಿಗೆ ಅತೀ ಕಡಿಮೆ ಬೆಲೆಯಲ್ಲಿ ಅನ್ನ ನೀಡುವ ರಾಜ್ಯದ ‘ಇಂದಿರಾ ಕ್ಯಾಂಟೀನ್​ಗೆ (Indira Canteen) ಕಾಂಗ್ರೆಸ್ ಸರ್ಕಾರ ಮರುಜೀವ ನೀಡಿದೆ. ಈ ಹಿಂದೆ ಬಿಜೆಪಿ ಸೆರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್​ ಅನ್ನು ಕಡೆಗಣಿಸಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕ್ಯಾಂಟೀನ್‌ಗಳಿಗೆ ಮತ್ತ ಮರುಜೀವ ಸಿಕ್ಕಿದ್ದು, ಈಗಾಗಲೇ ಬಿಬಿಎಂಪಿಯಿಂದ ಅಗತ್ಯ ಸಿದ್ಧತೆಗಳು ಆರಂಭವಾಗಿವೆ. ಇನ್ನು ಹೊಸ ಊಟದ ಮೆನುನೊಂದಿಗೆ ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್ ಬಾಗಿಲು ತೆರೆಯಲಿದೆ. ಹೌದು..​ ಕ್ಯಾಂಟಿನ್​ನಲ್ಲಿ ರಾಗಿ ಮುದ್ದೆ, ರೋಟಿ ಕರಿ ನೀಡಲು ಚಿಂತನೆ ನಡೆಸಿದೆ. ಹೀಗಾಗಿ ಅಗ್ಗದ ದರದಲ್ಲಿ ನಗರದ ಜನತೆಗೆ ಆಹಾರಗಳನ್ನು ಒದಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ ನಲ್ಲಿ ಇನ್ನು ಮುಂದೆ ಗ್ರಾಹಕರು ವೈವಿಧ್ಯ ಆಹಾರಗಳನ್ನು ಸವಿಯಬಹುದು.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ ಸರ್ಕಾರ ಸೂಚನೆ: ಮತ್ತೆ ತೆರೆಯಲಿದೆ ಬಡಜನರ ಸ್ಟಾರ್ ಹೋಟೆಲ್ ಬಾಗಿಲು

ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನದಲ್ಲಿ, ಕಾಂಗ್ರೆಸ್ ಸರ್ಕಾರವು ಕ್ಯಾಂಟಿನ್​ನಲ್ಲಿ ರಾಗಿ ಮುದ್ದೆ, ರೋಟಿ ಕರಿ ನೀಡಲು ಚಿಂತನೆ ನಡೆಸಿದೆ. ಈ ಹಿಂದೆ ಬೆಳಗ್ಗೆ ಉಪಹಾರಕ್ಕೆ ಇಡ್ಲಿ, ಉಪ್ಪಿಟ್ಟು, ರೈಸ್ ಬಾತ್ ನೀಡಲಾಗುತ್ತಿದ್ದು, ಮಧ್ಯಾಹ್ನದ ಊಟಕ್ಕೆ ಅನ್ನ ಸಾಂಬರ್, ಮೊಸರನ್ನ ಇತ್ತು. ಇನ್ಮುಂದೆ ಇಂದಿರಾ ಕ್ಯಾಂಟೀನ್ ಕ್ಯಾಂಟೀನ್ ನಲ್ಲಿ ಮೆನುಗಳ ಸಂಖ್ಯೆ ಏರಿಕೆಯಾಗಲಿದೆ. ಮೆನುವಿನಲ್ಲಿ ರಾಗಿ ಮುದ್ದೆ, ರೋಟಿ ಕರಿ ಇರಲಿದೆ.

ಇಂದಿರಾ ಕ್ಯಾಂಟೀನ್​ನಲ್ಲಿ ರಾಗಿ ಮುದ್ದೆ ನೀಡಬೇಕು ಎಂದು ಅನೇಕರ ಬೇಡಿಕೆ ಆಗಿತ್ತು. ಅದರಂತೆ ಕೊನೆಗೂ ಸಿದ್ದರಾಮಯ್ಯನವರ ಸರ್ಕಾರ ಜನರ ಬೇಡಿಕೆ ಈಡೇರಿಸಲು ಮುಂದಾಗಿದ್ದು, ಕ್ಯಾಂಟೀನ್​ನಲ್ಲಿ ರಾಗಿ ಮುದ್ದೆ, ಸೊಪ್ಪಿನ ಸಾರು ನೀಡಲು ಚಿಂತನೆ ನಡೆಸಿದೆ. ಹಾಲಿ ಕ್ಯಾಂಟೀನ್‌ಗಳ ಪುನಾರಂಭ ಜೊತೆಗೆ 243 ವಾರ್ಡ್‌ಗಳಿಗೂ ಕ್ಯಾಂಟೀನ್ ವಿಸ್ತರಣೆಗೆ ಸರ್ಕಾರ ಸಿದ್ಧತೆ ನಡೆಸಿದೆ. ಅಲ್ಲದೇ ಆಹಾರದ ಪ್ರಮಾಣ (ಕ್ವಾಂಟಿಟಿ), ಗುಣಮಟ್ಟ ಹೆಚ್ಚಿಸಲಿದೆ. ಇದರಿಂದ ಬೆಲೆ ಸಹ 5-10 ರೂಪಾಯಿ ಹೆಚ್ಚಾಗಬಹುದು ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಈ ಹಿಂದೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರಲ್ಲಿ ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಒಟ್ಟು 247 ಇಂದಿರಾ ಕ್ಯಾಂಟೀನ್​ಗಳನ್ನು ಆರಂಭಿಸಿತ್ತು. ಹಲವು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ಯಶಸ್ವಿಯಾಗಿತ್ತು. 5 ರೂ.ಗೆ ಉಪಹಾರ, 10 ರೂ.ಗೆ ಊಟವನ್ನು ನೀಡಲಾಗುತ್ತಿತ್ತು. ಆದ್ರೆ, ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇಂದೀರಾ ಕ್ಯಾಂಟೀನ್​ಗಳಿಗೆ ಬೀಗ ಬಿದ್ದಿತ್ತು. ಇದೀಗ ಮತ್ತೆ ಇಂದಿರಾ ಕ್ಯಾಂಟೀನ್ ಬಾಗಿಲು ತೆರೆಯಲಿದೆ.

Published On - 1:34 pm, Thu, 25 May 23

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್