AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

ಖಾತೆ ಹಂಚಿಕೆ ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಹೈಕಮಾಂಡ್ ದೇವನಹಳ್ಳಿಯಲ್ಲಿ ಮಹತ್ವದ ಸಭೆ ನಡೆಸಿದೆ. ರಾಮಲಿಂಗಾ ರೆಡ್ಡಿ, ಕೆ.ಹೆಚ್. ಮುನಿಯಪ್ಪರ ಬಂಡಾಯದಿಂದ ಉಂಟಾದ ಬಿಕ್ಕಟ್ಟು ಪರಿಹರಿಸಲು ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸುರ್ಜೇವಾಲ ಭಾಗವಹಿಸಿದ್ದಾರೆ. ಮುನಿಯಪ್ಪ ಆಹಾರ ಖಾತೆಯನ್ನು ನಿರಾಕರಿಸಿ, ಕೃಷಿ/ಸಮಾಜ ಕಲ್ಯಾಣ ಇಲಾಖೆ ಬಯಸಿದ್ದಾರೆ. ಹೈಕಮಾಂಡ್ ಡ್ಯಾಮೇಜ್ ಕಂಟ್ರೋಲ್ ಸೂತ್ರ ಸಿದ್ಧಪಡಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಮುಂದಿನ ಚಿತ್ರಣ ಸ್ಪಷ್ಟವಾಗಲಿದೆ.

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ
ದೇವನಹಳ್ಳಿ ಹೈಕಮಾಂಡ್ ಸಭೆ
ನವೀನ್ ಕುಮಾರ್ ಟಿ
| Edited By: |

Updated on: Jun 05, 2026 | 1:05 PM

Share

ದೇವನಹಳ್ಳಿ, ಜೂ.5: ಖಾತೆ ಹಂಚಿಕೆಯ ಬೆನ್ನಲ್ಲೇ ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಹಾಗೂ ಕೆ.ಎಚ್. ಮುನಿಯಪ್ಪ ಅವರು ಬಂಡಾಯದ ಬಾವುಟ ಹಾರಿಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ನೂತನ ಸರ್ಕಾರಕ್ಕೆ ಎದುರಾಗಿರುವ ಈ ದೊಡ್ಡ ಕಂಟಕವನ್ನು ನಿವಾರಿಸಲು ಹಾಗೂ ‘ಡ್ಯಾಮೇಜ್ ಕಂಟ್ರೋಲ್’ ಮಾಡಲು ಮಹತ್ವದ ಮೀಟಿಂಗ್​ನ್ನು ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ವಿಐಪಿ ಲಾಂಜ್ ಹಾಗೂ ಪಕ್ಕದಲ್ಲೇ ಇರುವ ಐಷಾರಾಮಿ ತಾಜ್ ಹೋಟೆಲ್‌ನಲ್ಲಿ ಈ ಹೈವೋಲ್ಟೇಜ್ ಸಭೆ ನಡೆಸುತ್ತಿದ್ದಾರೆ.

ರಾಜ್ಯ ನಾಯಕರ ಅಸಮಾಧಾನ ಶಮನಗೊಳಿಸಲು ಎಐಸಿಸಿ ಮುಖಂಡ ರಾಹುಲ್ ಗಾಂಧಿ, ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ಸಭೆ ನಡೆಸುತ್ತಿದ್ದಾರೆ. ಈಗಾಗಲೇ ಉಂಟಾಗಿರುವ ಗೊಂದಲದ ತೀವ್ರತೆಯನ್ನು ಅರಿತು ಹೈಕಮಾಂಡ್ ನಾಯಕರು, ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ತುರ್ತಾಗಿ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡಿದ್ದಾರೆ.

ಕೆಂಪೇಗೌಡ ಏರ್‌ಪೋರ್ಟ್‌ನ ವಿಐಪಿ ಲಾಂಜ್‌ನಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರನ್ನು ಭೇಟಿಯಾಗಿ ತಮ್ಮ ಖಾತೆ ಬದಲಾವಣೆ ಕುರಿತು ಮಾತುಕತೆ ನಡೆಸಿದರು. ಇದರ ಬೆನ್ನಲ್ಲೇ, ತಾಜ್ ಹೋಟೆಲ್‌ನಲ್ಲಿ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸುಮಾರು 40 ನಿಮಿಷಗಳ ಕಾಲ ಹಿರಿಯ ನಾಯಕರ ಮಹತ್ವದ ಸಭೆ ನಿಗದಿಯಾಗಿದೆ. 8 ಬಾರಿ ಗೆದ್ದಿದ್ದರೂ ಹಿರಿತನಕ್ಕೆ ಗೌರವ ಸಿಕ್ಕಿಲ್ಲ ಹಾಗೂ ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆ ಬೇಕು ಎಂಬ ತಮ್ಮ ಬೇಡಿಕೆಯನ್ನು ಮುನಿಯಪ್ಪ ಅವರು ವರಿಷ್ಠರ ಮುಂದೆ ಇಟ್ಟಿದ್ದಾರೆ ಎನ್ನಲಾಗಿದೆ. ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಿರ್ಧಾರ ಹಾಗೂ ಮುನಿಯಪ್ಪ ಅವರ ಅಸಮಾಧಾನ ಎರಡನ್ನೂ ಒಟ್ಟಿಗೆ ಶಮನಗೊಳಿಸಲು ಹೈಕಮಾಂಡ್ ಸೂತ್ರವೊಂದನ್ನು ಸಿದ್ಧಪಡಿಸುತ್ತಿದ್ದು, ಈ ಹೈವೋಲ್ಟೇಜ್ ಸಭೆಯ ನಂತರ ರಾಜ್ಯ ರಾಜಕಾರಣದ ಮುಂದಿನ ಚಿತ್ರಣ ಸ್ಪಷ್ಟವಾಗಲಿದೆ.

‘ನಾನು ಚಾರ್ಜ್ ತೆಗೆದುಕೊಳ್ಳಲ್ಲ’ ಎಂದು ಹಠ ಹಿಡಿದ ಕೆ.ಎಚ್. ಮುನಿಯಪ್ಪ

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಈಗ ಮತ್ತಷ್ಟು ಜ್ವಾಲೆಯಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಪ್ರಕಟಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಭಾರಿ ಆಘಾತ ಎದುರಾಗಿದ್ದು, ಮತ್ತೊಬ್ಬ ಪ್ರಭಾವಿ ನಾಯಕ ಕೆ.ಎಚ್. ಮುನಿಯಪ್ಪ ಅವರು ಸರ್ಕಾರದ ವಿರುದ್ಧ ನೇರ ಬಂಡಾಯ ಸಾರಿದ್ದಾರೆ. ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಅವರು, “ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ ಎಂದು ಜಿದ್ದಿಗೆ ಬಿದ್ದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ

ಕಾಂಗ್ರೆಸ್ ಹೈಕಮಾಂಡ್‌ಗೆ ಮುನಿಯಪ್ಪ ಕೊಟ್ಟ ‘2028’ರ ವಾರ್ನಿಂಗ್

ರಾಜ್ಯ ಕಾಂಗ್ರೆಸ್ ಸಂಪುಟದಲ್ಲಿ ಖಾತೆ ಹಂಚಿಕೆಯ ಕಿಚ್ಚು ಈಗ ಹೈಕಮಾಂಡ್ ನಾಯಕರ ವಿರುದ್ಧದ ಬಹಿರಂಗ ಆಕ್ರೋಶವಾಗಿ ಮಾರ್ಪಟ್ಟಿದೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಬೆನ್ನಲ್ಲೇ ತೀವ್ರ ಅಸಮಾಧಾನಗೊಂಡಿರುವ ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು, ಪಕ್ಷದ ರಾಷ್ಟ್ರೀಯ ನಾಯಕರ ವಿರುದ್ಧವೇ ನೇರ ವಾಗ್ದಾಳಿ ನಡೆಸಿದ್ದಾರೆ. ನಾನು ಈಗಾಗಲೇ 8 ಬಾರಿ ಗೆದ್ದಿರುವ ಹಿರಿಯ ರಾಜಕಾರಣಿ. ಆದರೆ ಖಾತೆ ಹಂಚಿಕೆ ಮಾಡುವಾಗ ನಮ್ಮ ಸೀನಿಯಾರಿಟಿಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಪಕ್ಷದಲ್ಲಿ ಎಲ್ಲ ನಾಯಕರನ್ನೂ ಸಮತೋಲನವಾಗಿ ನೋಡಬೇಕಿತ್ತು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದಲ್ಲಿ ಎಲ್ಲರನ್ನೂ ಒಂದೇ ಕಣ್ಣಿನಿಂದ ನೋಡಬೇಕು” ಎಂದು ಮುನಿಯಪ್ಪ ಅವರು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?