‘ಕೈ’ ಮನೆಯಲ್ಲಿ ತಾರಕಕ್ಕೇರಿದ ಅಸಮಾಧಾನ: ವಿಪಕ್ಷದ ಸಾಲಿನಲ್ಲಿ ಆಸನ ಕೇಳಲು ಮುಂದಾದ ಜಯಚಂದ್ರ, ಹೆಚ್​ಡಿಕೆ ನಡೆ ಸ್ಮರಿಸಿದ ಎಸ್​ಆರ್ ಶ್ರೀನಿವಾಸ್​

Karnataka Politics: ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಭುಗಿಲೆದ್ದಿರುವ ಬಂಡಾಯ ಹಾಗೂ ಅಸಮಾಧಾನ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸಿ ಶಾಂತಿ ಸಂಧಾನ ನಡೆಸಲು ಮುಂದಾಗಿದ್ದರೂ, ಹಿರಿಯ ಶಾಸಕರಾದ ಟಿ.ಬಿ. ಜಯಚಂದ್ರ ಹಾಗೂ ಎಸ್.ಆರ್. ಶ್ರೀನಿವಾಸ್ (ಅವರ ನಿರ್ಧಾರಗಳು ಪಕ್ಷದ ವರಿಷ್ಠರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ.

‘ಕೈ’ ಮನೆಯಲ್ಲಿ ತಾರಕಕ್ಕೇರಿದ ಅಸಮಾಧಾನ: ವಿಪಕ್ಷದ ಸಾಲಿನಲ್ಲಿ ಆಸನ ಕೇಳಲು ಮುಂದಾದ ಜಯಚಂದ್ರ, ಹೆಚ್​ಡಿಕೆ ನಡೆ ಸ್ಮರಿಸಿದ ಎಸ್​ಆರ್ ಶ್ರೀನಿವಾಸ್​
ಟಿ.ಬಿ.ಜಯಚಂದ್ರ ಮತ್ತು ಎಸ್​​.ಆರ್​​. ಶ್ರೀನಿವಾಸ್​​
Image Credit source: SR Srinivas Facebook
Edited By:

Updated on: Aug 05, 2026 | 2:04 PM

ಬೆಂಗಳೂರು, ಆಗಸ್ಟ್​​ 05: ಸಚಿವ ಸಂಪುಟ ವಿಸ್ತರಣೆ ಬಳಿಕ ಮಂತ್ರಿಸ್ಥಾನ ವಂಚಿತ ಆಕಾಂಕ್ಷಿ ಶಾಸಕರ ಅಸಮಾಧಾನ ಕಾಂಗ್ರೆಸ್​​​ನಲ್ಲಿ ತಾರಕಕ್ಕೇರಿದೆ. ಪಕ್ಷದ ವರಿಷ್ಠರ ಮನವೊಲಿಕೆ ಯತ್ನದ ಹೊರತಾಗಿಯೂ ಹಲವು ಶಾಸಕರು ಆಕ್ರೋಶ ಮುಂದುವರಿಸಿರೋದು ಪಕ್ಷಕ್ಕೀಗ ತಲೆನೋವಾಗಿ ಮಾರ್ಪಟ್ಟಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನೆಲೆ ಬೆಂಗಳೂರಿನಿತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​​ ಸಿಂಗ್​​ ಸುರ್ಜೆವಾಲಾ ಹೊರಟಿದ್ದು, ಅಸಮಾಧಾನಿತ ಶಾಕರನ್ನು ಭೇಟಿಯಾಗಿ ಅವರು ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ವಿಪಕ್ಷದ ಸಾಲಿನಲ್ಲಿ ಪ್ರತ್ಯೇಕ ಆಸನದ ಬೇಡಿಕೆಗೆ ಜಯಚಂದ್ರ ತೀರ್ಮಾನ

ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ವಂಚಿತರಾದ ಹಿನ್ನೆಲೆ ವಿಧಾನಸಭೆಯಲ್ಲಿ ವಿಪಕ್ಷ ಸಾಲಿನಲ್ಲಿ ಆಸನ ವ್ಯವಸ್ಥೆ ಕಲ್ಪಿಸುವಂತೆ ವಿಧಾನಸಭಾಧ್ಯಕ್ಷರಿಗೆ ಶಿರಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಪತ್ರ ಬರೆಯಲು ಮುಂದಾಗಿದ್ದಾರೆ. ಆಡಳಿತ ಪಕ್ಷದ ಸದಸ್ಯರ ಸಾಲಿನಲ್ಲಿ ಕುಳಿತುಕೊಳ್ಳಲು ಇಚ್ಛೆಯಿಲ್ಲ. ಹೀಗಾಗಿ ವಿರೋಧ ಪಕ್ಷದ ಸಾಲಿನಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಬೇಕು ಎಂಬ ಬಗ್ಗೆ ಆಗ್ರಹವಿರುವ ಪತ್ರವನ್ನು ಜಯಚಂದ್ರ ಸಿದ್ಧಪಡಿಸಿಕೊಂಡಿದ್ದಾರೆ. ಅಲ್ಲಿಂದಲೇ ಸರ್ಕಾರದ ಕಾರ್ಯ ವೈಖರಿ ಗಮನಿಸಿ ಸಲಹೆ, ಮಾರ್ಗದರ್ಶನ ನೀಡುವ ಬಗ್ಗೆಯೂ ಅವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಪ್ರಸ್ತುತ ನೂತನ ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಬೇಕಿರುವ ಹಿನ್ನೆಲೆ, ರಾಜ್ಯಪಾಲರು ಸಿಎಂ ಶಿಫಾರಸಿನ ಮೇರೆಗೆ ಹಂಗಾಮಿ ಸ್ಪೀಕರ್ ಆಗಿ ಟಿ.ಬಿ.ಜಯಚಂದ್ರ ನೇಮಿಸಿ ಅಧಿಸೂಚನೆ ಹೊರಡಿಸಲಾಗಿದೆ. ಆದರೆ ಈ ಜವಾಬ್ದಾರಿಯನ್ನೂ ಅವರು ನಿರಾಕರಿಸಿರುವ ಮಾಹಿತಿ ಇದೆ.

ಇದನ್ನೂ ಓದಿ: ಅಸಮಾಧಾನಿತರ ಕೋಪ ಶಮನಕ್ಕೆ ಮುಂದಾದ ಕಾಂಗ್ರೆಸ್​​: ಶಾಸಕರ ಜೊತೆ ನಾಯಕರ ಚರ್ಚೆ

ಹೆಚ್.ಡಿ.ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ S.R.ಶ್ರೀನಿವಾಸ್​

ಮತ್ತೊಂದೆಡೆ, ನಾನು ಕುಮಾರಸ್ವಾಮಿರನ್ನು ಈಗ ನೆನೆಪು ಮಾಡಿಕೊಳ್ಳಬೇಕು. ನನಗೆ ಸಚಿವ ಸ್ಥಾನ ಸಿಗಲ್ಲ ಎಂದು ಮನೆಯಲ್ಲಿಯೇ ಕುಳಿತಿದ್ದೆ. ಆಗ ಹೆಚ್​ಡಿಕೆ ಅವರೇ ಕರೆ ಮಾಡಿ ಸಚಿವರನ್ನಾಗಿ ಮಾಡಿದ್ರು. ಅದನ್ನು ನಾನು ಯಾವತ್ತೂ ಮರೆಯಲ್ಲ ಎಂದು ಗುಬ್ಬಿ ಶಾಸಕ ಎಸ್​.ಆರ್.ಶ್ರೀನಿವಾಸ್ ಹೇಳಿದ್ದಾರೆ. ಯಾವುದೋ ಒಂದು ವಿಚಾರಕ್ಕೆ ಮಾತ್ರ ಭಿನ್ನಾಭಿಪ್ರಾಯ ಆಗಿತ್ತು. ಉಳಿದಂತೆ ನಮ್ಮಿಬ್ಬರ ನಡುವೆ ಏನೂ ಇಲ್ಲ ಎಂದವರು ಹೇಳಿರೋದು ಅಚ್ಚರಿಗೆ ಕಾರಣವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:41 pm, Wed, 5 August 26

Loading...
Unable to load recommendations.
Follow Us