AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 27,156 ಜನರಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 14 ಮಂದಿ ಸಾವು

ಕರ್ನಾಟಕದಲ್ಲಿ ಪ್ರಸ್ತುತ 27,156 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 12.45 ಮತ್ತು ಸೋಂಕಿತರ ಸಾವಿನ ಸರಾಸರಿ ಶೇ 0.05 ಇದೆ.

Covid 19 Karnataka Update: ಕರ್ನಾಟಕದಲ್ಲಿ 27,156 ಜನರಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 14 ಮಂದಿ ಸಾವು
ಸಾಂಕೇತಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 17, 2022 | 9:04 PM

Share

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ (ಜ.17) 27,156 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 14 ಜನರು ಸಾವನ್ನಪ್ಪಿದ್ದಾರೆ, 7827 ಜನರು ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 27,156 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 12.45 ಮತ್ತು ಸೋಂಕಿತರ ಸಾವಿನ ಸರಾಸರಿ ಶೇ 0.05 ಇದೆ. ರಾಜ್ಯದಲ್ಲಿ ಈವರೆಗೆ 32,47,243 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,91,472 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 38,445 ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಎಂದಿನಂತೆ ಗರಿಷ್ಠ ಪ್ರಮಾಣದ ಸೋಂಕಿತರ ಸಂಖ್ಯೆ ವರದಿಯಾಗಿದೆ. ನಗರದ 15,947 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ, 4888 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 1,57,254 ಸಕ್ರಿಯ ಪ್ರಕರಣಗಳಿದ್ದು ಈವರೆಗೆ ಒಟ್ಟು 16,458 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 14,32,754 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,59,041 ಜನರು ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಾಗಲಕೋಟೆ 82, ಬಳ್ಳಾರಿ 560, ಬೆಳಗಾವಿ 294, ಬೆಂಗಳೂರು ಗ್ರಾಮಾಂತರ 538, ಬೆಂಗಳೂರು ನಗರ 15,947, ಬೀದರ್ 75, ಚಾಮರಾಜನಗರ 101, ಚಿಕ್ಕಬಳ್ಳಾಪುರ 209, ಚಿಕ್ಕಮಗಳೂರು 236, ಚಿತ್ರದುರ್ಗ 178, ದಕ್ಷಿನ ಕನ್ನಡ 490, ದಾವಣಗೆರೆ 121, ಧಾರವಾಡ 784, ಗದಗ 71, ಹಾಸನ 1050, ಹಾವೇರಿ 27, ಕಲಬುರಗಿ 479, ಕೊಡಗು 137, ಕೋಲಾರ 463, ಕೊಪ್ಪಳ 89, ಮಮಡ್ಯ 917, ಮೈಸೂರು 1770, ರಾಯಚೂರು 140, ರಾಮನಗರ 96, ಶಿವಮೊಗ್ಗ 364, ತುಮಕೂರು 1147, ಉಡುಪಿ 442, ಉತ್ತರ ಕನ್ನಡ 203, ವಿಜಯಪುರ 128, ಯಾದಗಿರಿ 18.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 5, ದಕ್ಷಿಣ ಕನ್ನಡ 3, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಧಾರವಾಡ, ಕಲಬುರಗಿ, ರಾಮನಗರ, ತುಮಕೂರು ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Corona Review Meeting: ಜನವರಿ 25ರ ಹೊತ್ತಿಗೆ ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ತೀವ್ರ: ಸಚಿವ ಆರ್ ಅಶೋಕ್ ಇದನ್ನೂ ಓದಿ: ಸಚಿವರ ನಡುವೆ ಗೊಂದಲವಿಲ್ಲ, ಮಕ್ಕಳ ಬಗ್ಗೆ ತೀವ್ರ ನಿಗಾ: ಆರೋಗ್ಯ ಸಚಿವ ಸುಧಾಕರ್