AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಖ್ಯೆಯಲ್ಲಿ ಮತ್ತೆ ಏರಿಕೆ: ರಾಜ್ಯದಲ್ಲಿ ಹೊಸದಾಗಿ 2 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆ, ನಾಲ್ವರ ಸಾವು

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಬೆಂಗಳೂರು, ಕಲಬುರಗಿ, ಕೊಪ್ಪಳ, ರಾಯಚೂರಲ್ಲಿ ತಲಾ ಒಬ್ಬರು ಕೊರೊನಾಗೆ ಸಾವನ್ನಪ್ಪಿದ್ದಾರೆ.

ಕೊರೊನಾ ಸಂಖ್ಯೆಯಲ್ಲಿ ಮತ್ತೆ ಏರಿಕೆ: ರಾಜ್ಯದಲ್ಲಿ ಹೊಸದಾಗಿ 2 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆ, ನಾಲ್ವರ ಸಾವು
ಕೊರೊನಾ
TV9 Web
| Updated By: ಆಯೇಷಾ ಬಾನು|

Updated on:Jul 29, 2022 | 10:09 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ(Coronavirus) ಪ್ರಕರಣಗಳು ಹಾವು ಏಣಿ ಆಟ ಆಡುತ್ತಿದೆ. ಕೆಲ ದಿನಗಳಿಂದ ಏರಿಕೆ ಕಂಡಿದ್ದ ಕೊರೊನಾ ನಿನ್ನೆ ಕಮ್ಮಿಯಾಗಿತ್ತು. ಆದ್ರೆ ಇಂದು ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಹಾಗೂ ಕೊರೊನಾ ಸಾವುಗಳ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ ಹೊಸದಾಗಿ 2,130 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿಂದು 1,615 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಬೆಂಗಳೂರು, ಕಲಬುರಗಿ, ಕೊಪ್ಪಳ, ರಾಯಚೂರಲ್ಲಿ ತಲಾ ಒಬ್ಬರು ಕೊರೊನಾಗೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 9,866 ಇದೆ. ಹಾಗೂ ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇಕಡಾ 6.51ರಷ್ಟಿದೆ.

ಒಂದೇ ಸಿರಿಂಜ್ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ, ಇದರಲ್ಲಿ ನನ್ನ ತಪ್ಪೇನಿದೆ ಎಂದ ಆರೋಗ್ಯ ಕಾರ್ಯಕರ್ತ

ಒಂದೇ ಸಿರಿಂಜ್ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿರುವ ಘಟನೆ ಮಧ್ಯಪ್ರದೇಶದ ಸಾಗರ್ನಲ್ಲಿ ವರದಿಯಾಗಿದೆ. ಅಧಿಕಾರಿಗಳು ಕೇವಲ ಒಂದೇ ಸಿರಿಂಜ್ ಕಳುಹಿಸಿದ್ದಾರೆ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಸಿರಿಂಜ್ನಲ್ಲಿ ಲಸಿಕೆ ಹಾಕಲು ಇಲಾಖೆಯ ಮುಖ್ಯಸ್ಥರು ಹೇಳಿದ್ದಾರೆ ಇದರಲ್ಲಿ ನನ್ನ ತಪ್ಪೇನಿದೆ ಎಂದು ಆರೋಗ್ಯ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

1990ರ ದಶಕದಿಂದಲೂ ಎಚ್‌ಐವಿ ಹರಡಲು ಆರಂಭಿಸಿದಾಗಿನಿಂದ ಒಬ್ಬರಿಗೆ ಒಂದು ಸಿರಿಂಜ್ನಂತೆ ಬಳಕೆ ಮಾಡಬೇಕು, ಒಂದೇ ಸಿರಿಂಜ್ ಇಬ್ಬರಿಗೆ ಬಳಕೆ ಮಾಡಬಾರದು ಎನ್ನುವ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.

ಆದರೆ ಈ ವ್ಯಕ್ತಿ 30 ವಿದ್ಯಾರ್ಥಿಗಳಿಗೆ ಒಂದೇ ಸಿರಿಂಜ್ನಲ್ಲಿ ಲಸಿಕೆ ನೀಡಿದ್ದಾರೆ. ಒಂದು ಸಿರಿಂಜ್ ಅನ್ನು ಹಲವಾರು ಜನರಿಗೆ ಚುಚ್ಚುಮದ್ದು ಮಾಡಲು ಬಳಸಬಾರದು ಎಂದು ನಿಮಗೆ ತಿಳಿದಿದೆಯೇ ಎಂದು ಕೇಳಿದಾಗ ನನಗೆ ಅದು ತಿಳಿದಿದೆ.

ಅದಕ್ಕಾಗಿಯೇ ನಾನು ಕೇವಲ ಒಂದು ಸಿರಿಂಜ್ ಅನ್ನು ಬಳಸಬೇಕೇ ಎಂದು ಅಧಿಕಾರಿಯನ್ನು ಕೇಳಿದೆ ಮತ್ತು ಅವರು ಹೌದು ಎಂದು ಹೇಳಿದರು. ಇದರಲ್ಲಿ ನನ್ನ ತಪ್ಪೇನಿದೆ ಅವರು ಹೇಳಿದ್ದನ್ನು ನಾನು ಮಾಡಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

Published On - 10:09 pm, Fri, 29 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!