AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಭಾಪತಿ ಹೊರಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್​​ ಸಿದ್ಧತೆ: ಇಂದೇ ನಿಲುವಳಿ ನೋಟಿಸ್​​?

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಗೊಂದಲ ಮತ್ತಷ್ಟು ತೀವ್ರಗೊಂಡಿದ್ದು, ಕಾಂಗ್ರೆಸ್ ಸರ್ಕಾರ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಿದ್ಧತೆ ನಡೆಸಿದೆ. ಈ ನಡುವೆ ಸಿಎಂ ಡಿಕೆಶಿಯನ್ನು ಹೊರಟ್ಟಿ ಭೇಟಿಯಾಗಿದ್ದು, ಅವರು ಅವಿಶ್ವಾಸ ನಿರ್ಣಯ ಮಂಡಿಸಿದ್ರೆ ಮಂಡಿಸಲಿ. ಕಾನೂನು ಪ್ರಕಾರ ಏನು ಬೇಕಾದರೂ ಮಾಡಲಿ ಎಂದಿದ್ದಾರೆ.

ಸಭಾಪತಿ ಹೊರಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್​​ ಸಿದ್ಧತೆ: ಇಂದೇ ನಿಲುವಳಿ ನೋಟಿಸ್​​?
ಸಭಾಪತಿ ಹೊರಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್​​ ಸಿದ್ಧತೆImage Credit source: IamMGoudar X Account
ಪ್ರಸನ್ನ ಗಾಂವ್ಕರ್​
| Edited By: |

Updated on: Aug 07, 2026 | 11:58 AM

Share

ಮುಖ್ಯಾಂಶಗಳು

  • ಪರಿಷತ್​​ ಸಭಾಪತಿ ವಿಚಾರದಲ್ಲಿ ರಾಜಕೀಯ ಹೈಡ್ರಾಮಾ
  • ರಾಜೀನಾಮೆ ಬಗ್ಗೆ ಅಡ್ಡಗೋಡೆ ಮೇಲೆ ದೀಪವಿಟ್ಟ ಹೊರಟ್ಟಿ
  • ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್​​ನಿಂದ ಸಿದ್ಧತೆ

ಬೆಂಗಳೂರು, ಆಗಸ್ಟ್​​ 07: ಕರ್ನಾಟಕ ವಿಧಾನ ಪರಿಷತ್​​ ಸಭಾಪತಿ ವಿಚಾರದಲ್ಲಿ ರಾಜಕೀಯ ಹೈಡ್ರಾಮಾಗಳು ಮುಂದುವರಿದಿವೆ. ಇಂದು ಕಾಂಗ್ರೆಸ್​​ ಅವಿಶ್ವಾಸ ನಿರ್ಣಯ ನಿಲುವಳಿ ನೋಟಿಸ್ ನೀಡುವ ಸಾಧ್ಯತೆ ಹಿನ್ನೆಲೆ ಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ನೀಡಿದ್ದಾರೆ. ತಮ್ಮ ಸ್ಥಾನಕ್ಕೆ ಆಗಸ್ಟ್​​ 14ರಂದು ರಾಜೀನಾಮೆ ನೀಡೋದಾಗಿ ಹೇಳಿದ್ದ ಹೊರಟ್ಟಿ, ಇದೀಗ ರಾಜೀನಾಮೆಗೆ ಸಮಯಾವಕಾಶ ಬೇಕು ಎಂದಿದ್ದಾರೆ ಎನ್ನಲಾಗಿದೆ. ಇನ್ನು ಡಿಕೆಶಿ ಭೇಟಿ ಬಳಿಕ ಅಸಮಾಧಾನದಿಂದಲೇ ಸಿಎಂ ನಿವಾಸದಿಂದ ಹೊರಟ್ಟಿ ಹೊರ ಬಂದ ದೃಶ್ಯಗಳು ಕೂಡ ಕಂಡುಬಂದಿವೆ.

‘ಏನು ಹೇಳಿದ್ದೇನೋ ಅದಕ್ಕೆ ಬದ್ಧನಿದ್ದೇನೆ’

ಇನ್ನು ಸಿಎಂ ಡಿಕೆಶಿ ಭೇಟಿ ವಿಚಾರ ಸಂಬಂಧ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದು, ಮೊನ್ನೆ ನಾನು ಏನು ಹೇಳಿದ್ದೇನೋ ಅದಕ್ಕೆ ಬದ್ಧನಿದ್ದೇನೆ. ಅವರು ಅವಿಶ್ವಾಸ ನಿರ್ಣಯ ಮಂಡಿಸಿದ್ರೆ ಮಂಡಿಸಲಿ. ಕಾನೂನು ಪ್ರಕಾರ ಏನು ಬೇಕಾದರೂ ಮಾಡಲಿ ಎಂದು ಬೆಂಗಳೂರಿನ ಸದಾಶಿವನಗರದ ಸಿಎಂ ಡಿಕೆಶಿ ನಿವಾಸದ ಬಳಿ ಹೇಳಿದ್ದಾರೆ.

ಇದನ್ನೂ ಓದಿ: ಸಭಾಪತಿ ಹುದ್ದೆ ತೊರೆಯಲು ಮುಂದಾದ ಬಸವರಾಜ ಹೊರಟ್ಟಿ: ಆಗಸ್ಟ್ 14ರಂದು ರಾಜೀನಾಮೆಗೆ ನಿರ್ಧಾರ

ಕಾಂಗ್ರೆಸ್​​ ಮುಂದಿನ ನಡೆ ಏನು?

ರಾಜೀನಾಮೆ ಬಗ್ಗೆ ಹೊರಟ್ಟಿ ಅಡ್ಡಗೋಡೆ ಮೇಲೆ ದೀಪವಿಟ್ಟಿರುವ ಕಾರಣ, ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಬಸವರಾಜ ಹೊರಟ್ಟಿ ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದು, ಬಿಜೆಪಿ ನಾಯಕರ ಜೊತೆಗೆ ಚರ್ಚಿಸಿ ಎಲ್ಲವನ್ನೂ ನಿರ್ಣಯಿಸುತ್ತಿದ್ದಾರೆ. ಅಲ್ಲದೆ ಸಭಾಪತಿ ಹೊರಟ್ಟಿ ಅವಧಿಯಲ್ಲಿ ಅಕ್ರಮ ನೇಮಕಾತಿ ಆಗಿದ್ದು, ಪರಿಷತ್​ನ 8 ಸಿಬ್ಬಂದಿ ನೇಮಕದ ಅಕ್ರಮದಲ್ಲಿ ಹೊರಟ್ಟಿ ಪಾತ್ರವಿದೆ ಎಂಬ 2 ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಂಡು ಅವಿಶ್ವಾಸ ನಿರ್ಣಯ ಮಂಡನೆಗೆ ಆಡಳಿತ ಪಕ್ಷ ಸಿದ್ಧತೆ ನಡೆಸಿದೆ. ಅವಿಶ್ವಾಸ ನಿರ್ಣಯ ನಿಲುವಳಿ ನೋಟಿಸ್​ಗೆ ಅದಾಯಲೇ ಐವನ್ ಡಿಸೋಜಾ ತಯಾರಿ ಕೂಡ ನಡೆಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ