Online Job Fraud: ಆನ್​​ಲೈನ್ ಜಾಬ್ ವಂಚನೆಯಲ್ಲಿಯೂ ಬೆಂಗಳೂರೇ ಕರ್ನಾಟಕ ರಾಜಧಾನಿ!

ಐಟಿ ಹಬ್ ಎಂದೇ ಖ್ಯಾತಿವೆತ್ತ ಬೆಂಗಳೂರಿಗೆ ಇದೀಗ ಆನ್​ಲೈನ್ ಜಾಬ್ ವಂಚನೆ ಪ್ರಕರಣಗಳ ರಾಜಧಾನಿ ಎಂಬ ಹಣೆಪಟ್ಟಿಯೂ ತಗಲಿದೆ. ಇದಕ್ಕೆ ಕಾರಣ ನಗರದಲ್ಲಿ ಹೆಚ್ಚುತ್ತಿರುವ ಆನ್​ಲೈನ್ ವಂಚನೆ ಪ್ರಕರಣಗಳು. ರಾಜ್ಯ ಅಪರಾಧ ದಾಖಲೆಗಳ ಬ್ಯೂರೋದ ಅಂಕಿಅಂಶಗಳಿಂದ ಬೆಂಗಳೂರಿನ ಆನ್​ಲೈನ್ ವಂಚನೆ ಪ್ರಕರಣಗಳ ಬಗ್ಗೆ ತಿಳಿದುಬಂದ ಮಾಹಿತಿ ಇಲ್ಲಿದೆ.

Online Job Fraud: ಆನ್​​ಲೈನ್ ಜಾಬ್ ವಂಚನೆಯಲ್ಲಿಯೂ ಬೆಂಗಳೂರೇ ಕರ್ನಾಟಕ ರಾಜಧಾನಿ!
ಆನ್​​ಲೈನ್ ಜಾಬ್ ವಂಚನೆಯಲ್ಲಿಯೂ ಬೆಂಗಳೂರೇ ಕರ್ನಾಟಕ ರಾಜಧಾನಿ! (ಸಾಂದರ್ಭಿಕ ಚಿತ್ರ)
Follow us
|

Updated on:Jun 24, 2024 | 9:24 AM

ಬೆಂಗಳೂರು, ಜೂನ್ 24: ಕರ್ನಾಟಕದಲ್ಲಿ (Karnataka) 2020 ರಿಂದ ವರದಿಯಾದ ಆನ್‌ಲೈನ್ ಉದ್ಯೋಗ ವಂಚನೆಗಳಲ್ಲಿ (Online Job Fraud) ಸುಮಾರು ಶೇ 73 ರಷ್ಟು ಬೆಂಗಳೂರಿನಲ್ಲೇ ನಡೆದಿವೆ. ಇಂಥ ಆನ್​ಲೈನ್​ ಉದ್ಯೋಗ ವಂಚನೆಗೆ ಒಳಗಾದವರಲ್ಲಿ ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳು ಶೇ 20-30 ರಷ್ಟಿದ್ದರೆ ಉಳಿದವರು ನಿರುದ್ಯೋಗಿಗಳು ಮತ್ತು ಪವೀಧರರು ಎಂಬುದು ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ (SCRB) ದತ್ತಾಂಶಗಳಿಂದ ತಿಳಿದುಬಂದಿದೆ.

ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ ಆನ್‌ಲೈನ್ ಉದ್ಯೋಗ ವಂಚನೆಗಳು ನಿರಂತರವಾಗಿ ಹೆಚ್ಚಿವೆ. 2020 ರ ಜನವರಿ 1 ಮತ್ತು 2024 ರ ಮೇ 25 ರ ನಡುವೆ ಒಟ್ಟು 9,479 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 6,905 ಪ್ರಕರಣಗಳು ಬೆಂಗಳೂರು ನಗರದಲ್ಲೇ ವರದಿಯಾಗಿವೆ ಎಂಬುದು ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿಅಂಶಗಳಿಂದ ಗೊತ್ತಾಗಿದೆ.

ಕಳೆದ ವರ್ಷ 4,098 ಪ್ರಕರಣಗಳು ವರದಿಯಾಗಿದ್ದು, ಈ ವರ್ಷ (ಮೇ 25 ರವರೆಗೆ) ಸಂಖ್ಯೆ ಈಗಾಗಲೇ ಕಳೆದ ವರ್ಷದ ಅರ್ಧಕ್ಕಿಂತಲೂ ಹೆಚ್ಚು (2,185) ವರದಿಯಾಗಿವೆ ಎಂದು ಎಸ್​​​ಸಿಆರ್​ಬಿ ದತ್ತಾಂಶ ಉಲ್ಲೇಖಿಸಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಈ ವರ್ಷ ಒಟ್ಟು ಪ್ರಕರಣಗಳು 5,000 ದಾಟಬಹುದು ಎಂದು ತನಿಖಾಧಿಕಾರಿಗಳು ಅಂದಾಜಿಸಿದ್ದಾರೆ. ಆದರೆ ಹೆಚ್ಚಿದ ಜಾಗೃತಿಯಿಂದಾಗಿ ಆನ್​ಲೈನ್ ಉದ್ಯೋಗ ವಂಚನೆ ಘಟನೆಗಳಿಗೆ ಕಡಿವಾಣ ಬೀಳುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರುವುದಾಗಿ ವರದಿ ಉಲ್ಲೇಖಿಸಿದೆ.

ಆನ್‌ಲೈನ್ ಉದ್ಯೋಗ ವಂಚನೆಗಳು ಸಾಂಪ್ರದಾಯಿಕ ಉದ್ಯೋಗ ವಂಚನೆ ಕೃತ್ಯಗಳ ವಿಸ್ತೃತ ರೂಪವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜಾಹೀರಾತುಗಳನ್ನು ಅಂಟಿಸುವ ಮೂಲಕ ಹಣವನ್ನು ಕಸಿದುಕೊಳ್ಳಲಾಗತ್ತಿದೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಎಂಎ ಸಲೀಂ ತಿಳಿಸಿದ್ದಾರೆ.

ಉದ್ಯೋಗಗಳನ್ನು ಹುಡುಕುತ್ತಿರುವ ನಿರುದ್ಯೋಗಿಗಳು ಮತ್ತು ಹೊಸ ಪದವೀಧರರನ್ನೇ ವಂಚಕರು ಗುರಿಯಾಗಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಪ್ರತಿದಿನ 10 ರಿಂದ 20 ಆನ್‌ಲೈನ್ ವಂಚನೆ ಪ್ರಕರಣಗಳು ವರದಿಯಾಗುತ್ತಿದ್ದು, ಇದರಲ್ಲಿ 5-7 ಉದ್ಯೋಗ ವಂಚನೆಗಳಾಗಿವೆ ಎಂದು ವೈಟ್‌ಫೀಲ್ಡ್‌ನ ಟೆಕ್ ಹಬ್‌ನ ಉಸ್ತುವಾರಿ ವಹಿಸಿರುವ ಉಪ ಪೊಲೀಸ್ ಆಯುಕ್ತ ಶಿವಕುಮಾರ ಗುಣಾರೆ ಮಾಹಿತಿ ನೀಡಿದ್ದಾರೆ. ಕಡಿಮೆ-ವೇತನ ಪಡೆಯುವವರು, ಮನೆಯಿಂದ ಕೆಲಸ ಮಾಡುವ ಟೆಕ್ಕಿಗಳು ಅಥವಾ ಉದ್ಯೋಗದಿಂದ ವಜಾಗೊಂಡವರು ಸಹ ಆನ್‌ಲೈನ್ ಜಾಬ್ ವಂಚನೆಗಳಿಗೆ ಬಲಿಯಾಗುತ್ತಾರೆ. ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಹಿನ್ನೆಲೆಯ ಟೆಕ್ಕಿಗಳು ಹೆಚ್ಚು ಗಳಿಸಬೇಕೆಂಬ ಹಂಬಲದಲ್ಲಿ ವಂಚನೆಗೆ ಒಳಗಾಗುತ್ತಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ವಂಚಕರು ವೈಯಕ್ತಿಕ ಮಾಹಿತಿ ಕಲೆ ಹಾಕುವುದು ಹೇಗೆ?

ಬ್ಯಾಂಕ್‌ಗಳು, ಅಂಚೆ ಕಚೇರಿಗಳು ಇತ್ಯಾದಿಗಳಿಂದ ವೈಯಕ್ತಿಕ ಮಾಹಿತಿ ಸಂಗ್ರಹಿಸುವ ಮೂಲಕ ಸಂಭಾವ್ಯ ಸಂತ್ರಸ್ತರನ್ನು ಗುರುತಿಸಲು ವಂಚಕರು ಕೆಲವು ಜನರನ್ನು ನೇಮಿಸಿಕೊಳ್ಳುತ್ತಾರೆ ಎಂಬುದು ಬೆಂಗಳೂರು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿಗೆ ಚಾಲಕರ ಕೊರತೆ, 7 ವರ್ಷಗಳಿಂದ ಆಗಿಲ್ಲ ನೇಮಕಾತಿ: ಶಕ್ತಿ ಯೋಜನೆ ಜಾರಿಗೊಳಿಸುವ ಸಂಸ್ಥೆಗೇ ಇಲ್ಲ ಶಕ್ತಿ!

ಅನೇಕ ಸಂದರ್ಭಗಳಲ್ಲಿ, ವಂಚಕರು ನೇಮಕ ಮಾಡಿದ ವ್ಯಕ್ತಿಗಳು ಬ್ಯಾಂಕ್‌ಗಳಿಂದ ಸಾಧ್ಯವಾದಷ್ಟು ಮಾಹಿತಿಯನ್ನು ಕಲೆಹಾಕಲು ಮತ್ತು ಕಾಲ್ ಸೆಂಟರ್‌ಗಳಿಗೆ ರವಾನಿಸಲು ತಿಂಗಳುಗಟ್ಟಲೆ ಕೆಲಸ ಮಾಡುತ್ತಾರೆ. ಇಂಥ ತಂಡದ ಕೆಲವು ಸದಸ್ಯರು ಕ್ಯಾಬಿಗಳಾಗಿ ಕೆಲಸ ಮಾಡುತ್ತಾರೆ ಮತ್ತು ತಮ್ಮ ಪ್ರಯಾಣಿಕರ ಫೋನ್ ಸಂಖ್ಯೆಗಳನ್ನು ವಂಚಕರಿಗೆ ಒದಗಿಸುತ್ತಾರೆ ಎಂಬುದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:01 am, Mon, 24 June 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ