AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಗಾರಿ ಪ್ರಗತಿಯೇ ಬೆಂಗಳೂರಿನ ಅಭಿವೃದ್ಧಿ; ಮುಂಗಾರು ಪೂರ್ವ ಸಿದ್ಧತೆ ಪರಿಶೀಲಿಸಿದ ಬಳಿಕ ಡಿಕೆ ಶಿವಕುಮಾರ್ ಹೇಳಿಕೆ

ಡಿಕೆ ಶಿವಕುಮಾರ್ ಅವರು ಗುರುವಾರ ಮುಂಗಾರು ಪೂರ್ವ ಸಿದ್ಧತೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕಾಮಗಾರಿ ಪ್ರಗತಿಯೇ ಬೆಂಗಳೂರಿನ ಅಭಿವೃದ್ಧಿ; ಮುಂಗಾರು ಪೂರ್ವ ಸಿದ್ಧತೆ ಪರಿಶೀಲಿಸಿದ ಬಳಿಕ ಡಿಕೆ ಶಿವಕುಮಾರ್ ಹೇಳಿಕೆ
ಮುಂಗಾರು ಪೂರ್ವ ಸಿದ್ಧತೆ ಪರಿಶೀಲಿಸಿದ ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: Jun 08, 2023 | 2:58 PM

Share

ಬೆಂಗಳೂರು: ಕಾಮಗಾರಿ ಪ್ರಗತಿಯೇ ಬೆಂಗಳೂರಿನ ಅಭಿವೃದ್ಧಿ. ಬೆಂಗಳೂರು ನಗರದ ಬಗ್ಗೆ ಈ ಹಿಂದೆ ಕೆಟ್ಟ ಹೆಸರು ಬಂದಿತ್ತು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ನಗರದ ವಿವಿಧ ಕಡೆಗಳಲ್ಲಿ ಮುಂಗಾರು ಪೂರ್ವ ಸಿದ್ಧತೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ನಂತರ ರಾಮಗೊಂಡನಹಳ್ಳಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕಾಲುವೆ, ಒಳಚರಂಡಿಗಳನ್ನು ಪರಿಶೀಲನೆ ನಡೆಸಿದ್ದೇನೆ. ಮಳೆ ನೀರಿನಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇನೆ ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ಅವರು ಗುರುವಾರ ಮುಂಗಾರು ಪೂರ್ವ ಸಿದ್ಧತೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೂ ಹೊಂದಿರುವ ಶಿವಕುಮಾರ್ ಜತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಇತರ ಅಧಿಕಾರಿಗಳು ಮತ್ತು ಮಹದೇವಪುರ ಶಾಸಕಿ ಮಂಜುಳಾ ಅರವಿಂದ್ ಲಿಂಬಾವಳಿ ಇದ್ದರು.

ಉಪಮುಖ್ಯಮಂತ್ರಿ ಅವರು ಯಮಲೂರಿನಲ್ಲಿ ಒತ್ತುವರಿ ಮತ್ತು ಮಳೆನೀರು ಚರಂಡಿ (ಎಸ್‌ಡಬ್ಲ್ಯೂಡಿ) ಕಾಮಗಾರಿಯನ್ನು ಪರಿಶೀಲಿಸಿದರು. ಎಸ್‌ಡಬ್ಲ್ಯುಡಿ ಅಗಲ ಕಡಿಮೆಯಾದ ಬಗ್ಗೆ ಗಮನಹರಿಸಿ ತಾತ್ಕಾಲಿಕ ಕ್ರಮವಾಗಿ ಕಚ್ಚೆ ಚರಂಡಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ವರ್ಷ ಅತಿವೃಷ್ಟಿಯಿಂದ ಉಂಟಾದ ಪ್ರವಾಹದಿಂದ ಹಾನಿಗೊಳಗಾದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಯಮಲೂರು ಕೂಡ ಒಂದು. ಇಲ್ಲಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್, ಯಮಲೂರಿನ ದಿವ್ಯಶ್ರೀ ಬಳಿ ನಿರ್ಮಾಣವಾಗ್ತಿರೋ ಹೊಸ ರಾಜಕಾಲುವೆ ತಡೆ ಗೋಡೆ ಪರಿಶೀಲಿಸಿದರು.

ನಂತರ ಬೆಳ್ಳಂದೂರು ಕೆರೆಗೆ ಭೇಟಿ ನೀಡಿದರು. ಕೆರೆಯಲ್ಲಿ ಅಧಿಕಾರಿಗಳು ಕಾಮಗಾರಿ ಪ್ರಗತಿ ಕುರಿತು ಶಿವಕುಮಾರ್ ಅವರಿಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Karnataka High Court: ಸಾರ್ವಜನಿಕ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲೇಬೇಕು; ಕರ್ನಾಟಕ ಹೈಕೋರ್ಟ್​​ ತಾಕೀತು

ಬಳಿಕ ಬೆಂಗಳೂರಿನ ಸರ್ಜಾಪುರದ ರೈನ್‌ಬೋ ಡ್ರೈವ್ ಲೇಔಟ್‌ಗೆ ಭೇಟಿ ನೀಡಿದರು. ಕಳೆದ ವರ್ಷ ಮಳೆಗಾಲದಲ್ಲಿ ಹಲವು ಬಾರಿ ಬಡಾವಣೆ ಜಲಾವೃತವಾಗಿತ್ತು. ಶಿವಕುಮಾರ್ ಲೇಔಟ್ ಬಳಿಯ ಚರಂಡಿಗಳನ್ನು ಪರಿಶೀಲಿಸಿ ಅಧಿಕಾರಿಗಳು ಯಾವುದೇ ಅಡೆತಡೆಯಿಲ್ಲದೆ ಕಾಮಗಾರಿಗೆ ಅವಕಾಶ ಕಲ್ಪಿಸುವಂತೆ ನಿವಾಸಿಗಳಿಗೆ ಮನವಿ ಮಾಡಿದರು.

ಮಹದೇವಪುರ ವಲಯದ ಗುಂಜೂರಿಗೆ ಭೇಟಿ ನೀಡಿದ ಸಚಿವರು ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?