AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ 15 ಪರ್ಸೆಂಟ್ ಕಮಿಷನ್ ಆರೋಪ: ಬಿಬಿಎಂಪಿ ಗುತ್ತಿಗೆದಾರರ ಸಂಘದಿಂದ ಟ್ವೀಟ್

ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿ ಅಧಿಕಾರಿಕ್ಕೆ ಬಂದ ಕಾಂಗ್ರೆಸ್ ವಿರುದ್ಧವೇ ಇದೀಗ ಕಮಿಷನ್ ಆರೋಪಗಳು ಕೇಳಿಬರುತ್ತಿವೆ. ಸಚಿವರ ನಂತರ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘ ಕಾಂಗ್ರೆಸ್ ಹೈಕಮಾಂಡ್​ಗೆ ದೂರು ನೀಡಿದೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ 15 ಪರ್ಸೆಂಟ್ ಕಮಿಷನ್ ಆರೋಪ: ಬಿಬಿಎಂಪಿ ಗುತ್ತಿಗೆದಾರರ ಸಂಘದಿಂದ ಟ್ವೀಟ್
ಡಿ ಕೆ ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಹೈಕಮಾಂಡ್​ಗೆ ದೂರು ನೀಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘ
Shivaraj
| Edited By: |

Updated on:Aug 08, 2023 | 9:33 PM

Share

ಬೆಂಗಳೂರು, ಆಗಸ್ಟ್ 8: ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿ ಅಧಿಕಾರಿಕ್ಕೆ ಬಂದ ಕಾಂಗ್ರೆಸ್ (Congress) ವಿರುದ್ಧವೇ ಇದೀಗ ಕಮಿಷನ್ ಆರೋಪಗಳು ಕೇಳಿಬರುತ್ತಿವೆ. ಸಚಿವರ ನಂತರ ಇದೀಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ 10-15 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘವು (BBMP Contractors Association) ಕಾಂಗ್ರೆಸ್ ಹೈಕಮಾಂಡ್​ಗೆ ದೂರು ನೀಡಿದೆ.

40 ಪರ್ಸೆಂಟ್ ಕಮಿಶನ್ ಆರೋಪ ಮುಂದಿಟ್ಟುಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಇದೀಗ ಇದೆ ಕಾಂಗ್ರೆಸ್​ನ ಡಿಸಿಎಂ 10-15 ಪರ್ಸೆಂಟ್ ಕಮಿಶನ್ ಕೇಳುತ್ತಿದ್ದಾರೆ. ದಯವಿಟ್ಟು ನಮ್ಮ ಹಣ ಬಿಡುಗಡೆ ಮಾಡಿ ಎಂದು ಟ್ವೀಟ್ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘವು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟ್ಯಾಗ್ ಮಾಡಿದೆ.

ಇದನ್ನೂ ಓದಿ: ಗುತ್ತಿಗೆದಾರರು ಯಾರಿಗಾದರೂ ದೂರು ನೀಡಲಿ, ನಿಯಮಾವಳಿಯನ್ನು ಬಿಟ್ಟು ಬಿಲ್ ರಿಲೀಸ್ ಮಾಡೋದಿಲ್ಲ: ಡಿಕೆ ಶಿವಕುಮಾರ್, ಡಿಸಿಎಂ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳು ಆಗುತ್ತಿವೆ. ಈಗಲೇ ಸಚಿವರ ವಿರುದ್ಧ ಭ್ರಷ್ಟಾಚಾರದಂತಹ ಗಂಭೀರ ಆರೋಪಗಳು ಕೇಳಿರುತ್ತಿವೆ. ವಿರೋಧ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ, ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಕಮಿಷನ್​ ಆರೋಪಗಳನ್ನು ಮಾಡುತ್ತಿವೆ. ಇದರ ಬೆನಲ್ಲೇ ಉಪಮುಖ್ಯಮಂತ್ರಿ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದೆ.

ಬಾಕಿ ಬಿಲ್ ಪಾವತಿಗಾಗಿ ಗುತ್ತಿಗೆದಾರರಿಂದ 15 ಪರ್ಸೆಂಟ್ ವರೆಗೆ ಕಮಿಷನ್ ನೀಡುವಂತೆ ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ಆರೋಪ ಮಾಡಿದ್ದಾರೆ. ನಾವು ಮಾಡುತ್ತಿರುವ ಆರೋಪ ಸುಳ್ಳು ಎಂದು ಹೇಳುವುದಾದರೆ ಡಿಕೆ ಶಿವಕುಮಾರ್ ಅವರು, ಅವರ ಆರಾಧ್ಯ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಗುತ್ತಿಗೆದಾರರು ಸವಾಲೆಸೆದಿದ್ದಾರೆ.

ಶೇ.15 ಪರ್ಸೆಂಟ್‌ ಕಮಿಷನ್‌ ಕೊಟ್ಟರಷ್ಟೇ ಹಣ ಬಿಡುಗಡೆ ಮಾಡುವ ಡಿಮ್ಯಾಂಡ್ ಇಡಲಾಗಿದೆ ಎಂದು ಈ ಹಿಂದೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದರು. ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುವ ಸಂಬಂಧ ಬಿಬಿಎಂಪಿಯಲ್ಲಿ ಸಭೆಗಳು ನಡೆದಿವೆ. ಶೇ.10 ರಿಂದ ಶೇ.15 ಪರ್ಸೆಂಟ್‌ ಕೊಟ್ಟರೆ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾಗಿ ಕುಮಾರಸ್ವಾಮಿ ಆರೋಪಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Tue, 8 August 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ