AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರ

44 ಉಪನ್ಯಾಸಕರು ಕಾರ್ಯಭಾರದ ಕೊರತೆ ಎದುರಿಸುತ್ತಿದ್ದಾರೆ. ಹೀಗಾಗಿ ಕಾರ್ಯಭಾರ ಇರುವ ಕಾಲೇಜಿಗೆ ವರ್ಗಾಯಿಸಲು ತೀರ್ಮಾನ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 05, 2022 | 3:32 PM

Share

ಬೆಂಗಳೂರು: ಕಾರ್ಯಭಾರ ಇಲ್ಲದ ಉಪನ್ಯಾಸಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರ ತೆಗೆದುಕೊಂಡಿದೆ. 44 ಉಪನ್ಯಾಸಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಏಪ್ರಿಲ್ 8 ರಂದು ಕೌನ್ಸೆಲಿಂಗ್ ನಡೆಸುವ ಶಿಕ್ಷಣ ಇಲಾಖೆ 44 ಉಪನ್ಯಾಸಕರ ವರ್ಗಾವಣೆಗೆ ನಿರ್ಧರಿಸಿದೆ. ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯಭಾರದ ಕೊರತೆ ಇದೆ. 44 ಉಪನ್ಯಾಸಕರು ಕಾರ್ಯಭಾರದ ಕೊರತೆ ಎದುರಿಸುತ್ತಿದ್ದಾರೆ. ಹೀಗಾಗಿ ಕಾರ್ಯಭಾರ ಇರುವ ಕಾಲೇಜಿಗೆ ವರ್ಗಾಯಿಸಲು ತೀರ್ಮಾನ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಇಲಾಖೆಯಿಂದ ಸುತ್ತೋಲೆ ಮೂಲಕ ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರು ಪ್ರಕಟ ಮಾಡಲಾಗಿದೆ. ಇಲಾಖೆಯ ಇಎಂಐಎಸ್ ತಂತ್ರಾಂಶದಲ್ಲಿ ಲಭ್ಯವಿರುವ ಅಭ್ಯರ್ಥಿಗಳ ಸೇವಾ ವಿವರ ಪರಿಗಣಿಸಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ಬದಲಾವಣೆ/ ಆಕ್ಷೇಪಣೆ ಇದ್ದಲ್ಲಿ ಏಪ್ರಿಲ್ 6 ರ ಒಳಗೆ ಇಲಾಖೆಯ ಇ-ಮೇಲ್ dce.postshifting2022@gmail.com ಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಏಪ್ರಿಲ್ 7 ರಂದು ಹುದ್ದೆ ಸ್ಥಳಾಂತರ ಮತ್ತು ಹೆಚ್ಚುವರಿ ಕಾರ್ಯಭಾರ ಲಭ್ಯವಿರುವ ಕಾಲೇಜುಗಳ ಅಂತಿಮ ಪಟ್ಟಿ ಪ್ರಕಟ ಮಾಡಲಾಗುತ್ತದೆ. ಏಪ್ರಿಲ್ 8 ರಂದು ವರ್ಗಾವಣೆಗೆ ಕೌನ್ಸೆಲಿಂಗ್ ನಡೆಸಲಾಗುತ್ತದೆ. ನಿಯಮಗಳ ಪ್ರಕಾರ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲೆ, ವಾಣಿಜ್ಯ ಮತ್ತು ಭಾಷಾ ವಿಷಯಗಳ ಬೋಧಕರಿಗೆ ವಾರಕ್ಕೆ 16 ಗಂಟೆ ಮತ್ತು ಪ್ರಾಯೋಗಿಕ ತರಗತಿಗಳಿರುವ ವಿಷಯಗಳ ಬೋಧಕರಿಗೆ ಇರಬೇಕಿರುವ 20 ಗಂಟೆಗಳ ಕಾರ್ಯಭಾರ ಇರಲಿದೆ. ವರ್ಗಾವಣೆ ಪ್ರಕ್ರಿಯೆಯಲ್ಲಿ ಸಾಧ್ಯವಾದಷ್ಟೂ ಮಟ್ಟಿಗೆ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿರುವ ವಲಯದೊಳಗೇ ವರ್ಗಾವಣೆ ಮಾಡಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ: ತಹಶೀಲ್ದಾರ್ ವರ್ಗಾವಣೆ ವಿಚಾರ; ಆರ್ ಅಶೋಕ್ ಮತ್ತು ಅಶ್ವತ್ಥ್ ನಾರಾಯಣ ಮಧ್ಯೆ ಶೀತಲಸಮರ

ಇದನ್ನೂ ಓದಿ: SSLC ಪರೀಕ್ಷೆಗೆ ನೇಮಕಗೊಂಡಿದ್ದ ಮುಖ್ಯ ಶಿಕ್ಷಕ ಹೃದಯಾಘಾತದಿಂದ ಸಾವು

Published On - 3:29 pm, Tue, 5 April 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ