AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 5ರಂದು ಕೆಎಸ್​​ಆರ್​​ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು (KSRTC, BMTC ಸೇರಿದಂತೆ) ಆಗಸ್ಟ್ 5 ರಂದು ಮುಷ್ಕರಕ್ಕೆ ನಿರ್ಧರಿಸಿವೆ. 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಮಾಡದ ಹಿನ್ನಲೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.

ಆಗಸ್ಟ್​ 5ರಂದು ಕೆಎಸ್​​ಆರ್​​ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ
ಸಾರಿಗೆ ಮುಷ್ಕರ
ಕಿರಣ್​ ಸೂರ್ಯ
| Edited By: |

Updated on:Jul 16, 2025 | 8:59 AM

Share

ಬೆಂಗಳೂರು, ಜುಲೈ 16: ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ (strike) ಕರೆ ನೀಡಿದೆ. ಕೆಎಸ್​ಆರ್​ಟಿಸಿ (KSRTC), ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಕಳಿಸಿದ್ದೇವೆ: ಅನಂತ ಸುಬ್ಬರಾವ್​​

ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್​​ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಂಗಳವಾರ ಇ-ಮೇಲ್​ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: KSRTC Bus Ticket Price: ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ

ಇದನ್ನೂ ಓದಿ
Image
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
Image
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
Image
ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ
Image
ಉಚಿತ ಯೋಜನೆಯಿಂದ ಕಂಗೆಟ್ಟಿತಾ ಸರ್ಕಾರ?; 2000 ಕೋಟಿ ಸಾಲ ಪಡೆಯಲು ಒಪ್ಪಿಗೆ

4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಜುಲೈ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಈ ಸಭೆಯಲ್ಲಿ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಮತ್ತು ವೇತನ ಹೆಚ್ಚಳ ಬಗ್ಗೆ ಒಂದು ವಾರದೊಳಗೆ ಸಭೆ ಮಾಡುವುದಾಗಿ ಹೇಳಿದ್ದರು. ಆದರೆ 11 ದಿನ ಕಳೆದರೂ ಯಾವುದೇ ಸಭೆ ಕರೆಯಲಾಗಿಲ್ಲ. ಹೀಗಾಗಿ 4 ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 am, Wed, 16 July 25

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!