AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 5ರಂದು ಕೆಎಸ್​​ಆರ್​​ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು (KSRTC, BMTC ಸೇರಿದಂತೆ) ಆಗಸ್ಟ್ 5 ರಂದು ಮುಷ್ಕರಕ್ಕೆ ನಿರ್ಧರಿಸಿವೆ. 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಮಾಡದ ಹಿನ್ನಲೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.

ಆಗಸ್ಟ್​ 5ರಂದು ಕೆಎಸ್​​ಆರ್​​ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ
ಸಾರಿಗೆ ಮುಷ್ಕರ
ಕಿರಣ್​ ಸೂರ್ಯ
| Edited By: |

Updated on:Jul 16, 2025 | 8:59 AM

Share

ಬೆಂಗಳೂರು, ಜುಲೈ 16: ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ (strike) ಕರೆ ನೀಡಿದೆ. ಕೆಎಸ್​ಆರ್​ಟಿಸಿ (KSRTC), ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಕಳಿಸಿದ್ದೇವೆ: ಅನಂತ ಸುಬ್ಬರಾವ್​​

ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್​​ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಂಗಳವಾರ ಇ-ಮೇಲ್​ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: KSRTC Bus Ticket Price: ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ

ಇದನ್ನೂ ಓದಿ
Image
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
Image
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
Image
ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ
Image
ಉಚಿತ ಯೋಜನೆಯಿಂದ ಕಂಗೆಟ್ಟಿತಾ ಸರ್ಕಾರ?; 2000 ಕೋಟಿ ಸಾಲ ಪಡೆಯಲು ಒಪ್ಪಿಗೆ

4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಜುಲೈ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಈ ಸಭೆಯಲ್ಲಿ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಮತ್ತು ವೇತನ ಹೆಚ್ಚಳ ಬಗ್ಗೆ ಒಂದು ವಾರದೊಳಗೆ ಸಭೆ ಮಾಡುವುದಾಗಿ ಹೇಳಿದ್ದರು. ಆದರೆ 11 ದಿನ ಕಳೆದರೂ ಯಾವುದೇ ಸಭೆ ಕರೆಯಲಾಗಿಲ್ಲ. ಹೀಗಾಗಿ 4 ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 am, Wed, 16 July 25

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ