AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರಿಗೆ ಹೆಚ್ಚುವರಿ 2000 ಪೊಲೀಸ್ ಬಲ; ಸರ್ಕಾರಕ್ಕೆ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಧನ್ಯವಾದ

ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿಗೆ 2000 ಪೊಲೀಸರನ್ನು ಬೆಂಗಳೂರು ನಗರಕ್ಕೆ ನಿಯೋಜಿಸಿ ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

Bengaluru: ಬೆಂಗಳೂರಿಗೆ ಹೆಚ್ಚುವರಿ 2000 ಪೊಲೀಸ್ ಬಲ; ಸರ್ಕಾರಕ್ಕೆ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಧನ್ಯವಾದ
ಪೊಲೀಸ್​
TV9 Web
| Edited By: |

Updated on:Feb 20, 2023 | 8:11 AM

Share

ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿಗೆ 2000 ಪೊಲೀಸರನ್ನು ಬೆಂಗಳೂರು (Bengaluru) ನಗರಕ್ಕೆ ನಿಯೋಜಿಸಿ  ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಣಯಕ್ಕೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ (Bengaluru Police Commissioner Pratap Reddy) ಧನ್ಯವಾದ ಹೇಳಿದ್ದಾರೆ. ಹೆಚ್ಚಿನ ಪೊಲೀಸ್​ರ ನಿಯೋಜನೆಯಿಂದ ಅನುಕೂಲವಾಗಲಿದ್ದು, ಹೆಚ್ಚಿನ ಕಾರ್ಯಕ್ಷಮತೆಯಿಂದ ನಗರದಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.

ಹೆಚ್ಚಿಗೆ 2000 ಪೊಲೀಸರನ್ನು ನಿಯೋಜನೆ ಮಾಡುವುದರಿಂದ ಬೆಂಗಳೂರು ಪೊಲೀಸ್​ ಇಲಾಖೆಯಲ್ಲಿ ಶೇ 11 ಪ್ರತಿಶತದಷ್ಟು ಪೊಲೀಸ್​ ಸಿಬ್ಬಂದಿ ಸಂಖ್ಯೆ ಏರಿಕೆಯಾಗುತ್ತದೆ ಎಂದು ಕಮಿಷನರ್​ ಪ್ರತಾಪ್​ ರೆಡ್ಡಿ ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇನ್ನು ಸಿಲಿಕಾನ್​ ಸಿಟಿಯಲ್ಲಿನ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು, ರಾಜ್ಯ ಸರ್ಕಾರ ಹೆಚ್ಚಿಗೆ 20 ಪೊಲೀಸ್​ ಠಾಣೆಗಳನ್ನು ನಗರದಲ್ಲಿ ತೆರೆಯಲು ಮುಂದಾಗಿದೆ. ಈ ಸಂಬಂಧ ರಾಜ್ಯ ಬಜೆಟ್​ನಲ್ಲಿ ಹಣವನ್ನು ಮೀಸಲಿಡಲಾಗಿದೆ.

ಬೆಂಗಳೂರು ದಿನ ದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು, ಪ್ರತಿದಿನ 5000 ಹೊಸ ವಾಹನಗಳು ರಸ್ತೆಗಿಳಿಯುತ್ತವೆ. ಇನ್ನು ಪ್ರತಿದಿನ 10 ಲಕ್ಷ ಜನರು ರಸ್ತೆಯಲ್ಲಿ ಸಂಚರಿಸುತ್ತಾರೆ. ಹೀಗಾಗಿ ಹೆಚ್ಚಿನ ಸಂಚಾರಿ ಪೊಲೀಸ್​ ಠಾಣೆಗಳು ಮತ್ತು ಪೊಲೀಸರ ಅವಶ್ಯಕತೆ ಇದೆ. ಹೀಗಾಗಿ ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ನಗರಕ್ಕೆ 5 ಹೊಸ ಟ್ರಾಫಿಕ್​ ಪೊಲೀಸ್​ ಠಾಣೆಗಳನ್ನು ಮಂಜೂರು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 am, Mon, 20 February 23

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ