AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಇಂದಿರಾ ಕ್ಯಾಂಟೀನ್​ಗಳಲ್ಲಿ ಇನ್ಮುಂದೆ ಸಿಗಲಿವೆ ನಂದಿನಿ ಉತ್ಪನ್ನಗಳು

ಕೆಲ ದಿನಗಳ ಹಿಂದಷ್ಟೇ ಇಂದಿರಾ ಕ್ಯಾಂಟೀನ್​ನಲ್ಲಿ ವೆರೈಟಿ ವೆರೈಟಿ ಫುಡ್​ ನೀಡಲು ಹೊಸ ಮೆನು ಬಿಡುಗಡೆ ಮಾಡಲಾಗಿದ್ದು ಇದೀಗ ಬೆಂಗಳೂರಿನ ಇಂದಿರಾ ಕ್ಯಾಂಟೀನ್​ನಲ್ಲಿ ನಂದಿನಿ ಉತ್ಪನ್ನಗಳನ್ನೂ ನೀಡಲು ಚಿಂತನೆ ನಡೆದಿದೆ.

ಆಯೇಷಾ ಬಾನು
|

Updated on:Jun 22, 2023 | 12:38 PM

Share

ಬೆಂಗಳೂರು: ಸಿದ್ದರಾಮಯ್ಯ(Siddaramaiah) ಈ ಹಿಂದೆ ಸಿಎಂ ಆಗಿದ್ದಾಗ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್(Indira Canteen) ಆರಂಭಿಸಿದ್ರು. ಆದ್ರೆ ಬಿಜೆಪಿ ಸರ್ಕಾರ(BJP) ಅಸ್ತಿತ್ವಕ್ಕೆ ಬಂದ ಮೇಲೆ ಈ ಕ್ಯಾಂಟೀನ್‌ಗಳು ಹಂತಹಂತವಾಗಿ ಮೂಲೆ ಗುಂಪಾಗಿದ್ದವು. ಇದನ್ನೆಲ್ಲಾ ಗಮನಿಸುತ್ತಲೇ ಇದ್ದ ಸಿದ್ದರಾಮಯ್ಯ ಈಗ ಮತ್ತೊಮ್ಮೆ ಸಿಎಂ ಆಗಿದ್ದು ತಮ್ಮ ಕನಸಿನ ಕೂಸಿನ ಯೋಜನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಇಂದಿರಾ ಕ್ಯಾಂಟೀನ್​ನಲ್ಲಿ ವೆರೈಟಿ ವೆರೈಟಿ ಫುಡ್​ ನೀಡಲು ಹೊಸ ಮೆನು ಬಿಡುಗಡೆ ಮಾಡಲಾಗಿದ್ದು ಇದೀಗ ಬೆಂಗಳೂರಿನ ಇಂದಿರಾ ಕ್ಯಾಂಟೀನ್​ನಲ್ಲಿ ನಂದಿನಿ ಉತ್ಪನ್ನಗಳನ್ನೂ(Nandini Products) ನೀಡಲು ಚಿಂತನೆ ನಡೆದಿದೆ.

ಕ್ವಾಲಿಟಿ ಹಾಗು ಕ್ವಾಂಟಿಟಿ ವಿಚಾರವಾಗಿ ಮೊದಲಿನಿಂದಲೂ ಅನೇಕ ದೂರುಗಳು ಬರ್ತಿದ್ರಿಂದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಕ್ವಾಲಿಟಿಯಲ್ಲಿ ಕಾಂಪ್ರಮೈಸ್ ಆಗದಂತೆ ಸೂಚಿಸಿದ್ದರು. ಹಾಗೂ ರಾಗಿ ಮುದ್ದೆ, ಸೊಪ್ಪು ಸಾರು ಸೇರಿದಂತೆ ರುಚಿಕರವಾದ ಹೊಸ ಮೆನುವನ್ನು ಬಿಡುಗಡೆ ಮಾಡಲಾಗಿತ್ತು. ಈಗ ಸಿಲಿಕಾನ್ ಸಿಟಿಯಲ್ಲಿ ಇಂದಿರಾ ಕ್ಯಾಂಟೀನ್​ಗಳು ಮತಷ್ಟು ಹೈಟೆಕ್ ರೂಪ ಪಡೆಯಲ್ಲಿವೆ.

ಇದನ್ನೂ ಓದಿ: ಇನ್ಮಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಸಿಗಲಿದೆ ವೆರೈಟಿ ಊಟ: ಇಲ್ಲಿದೆ ಹೊಸ ಮೆನು

ಇನ್ನುಮುಂದೆ ಬೆಂಗಳೂರಿನ ಇಂದಿರಾ ಕ್ಯಾಂಟೀನ್​ಗೆ ಹೋದ್ರೆ ಊಟದ ಜೊತೆ ನಂದಿನಿ ಐಸ್ ಕ್ರೀಮ್, ಚಾಕಲೇಟ್, ಬಿಸ್ಕೇಟ್, ಹಾಲು, ಮೊಸರು, ತುಪ್ಪಾ ಕೂಡಾ ಸಿಗುತ್ತೆ. ಈ ಬಗ್ಗೆ KMF ಹಾಗೂ ರಾಜ್ಯ ಸರ್ಕಾರ ಮಹತ್ವದ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿದ್ದ 198 ಇಂದಿರಾ ಕ್ಯಾಂಟೀನ್​ಗಳ ಸಂಖ್ಯೆಯನ್ನ 250ಕ್ಕೆ ಏರಿಕೆ ಮಾಡಲು ಸಿಎಂ ಮುಂದಾಗಿದ್ದು ಇದರ ಜೊತೆ ನಂದಿನಿ ವ್ಯಾಪಾರ ವಹಿವಾಟು ಹೆಚ್ಚಿಸಲು ಇಂದಿರಾ ಕ್ಯಾಂಟೀನ್​ಗಳಲ್ಲಿಯೇ ಸರ್ಕಾರ ಹಾಗೂ KMF ಸಹಯೋಗದಲ್ಲಿ ನಂದಿನಿ ಮಳಿಗೆ ತೆರಯಲು ಚಿಂತನೆ ನಡೆದಿದೆ. ನಂದಿನಿ ಬೊಕ್ಕಸ ತುಂಬಲು ಸರ್ಕಾರ ಹಾಗೂ ನೂತನ ಕೆಎಮ್​ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಸ್ಟರ್ ಪ್ಲಾನ್ ಮಾಡಿದ್ದು ನಂದಿನಿ ಬ್ಯಾಂಡ್ ಹೆಚ್ಚಿಸಲು ಮುಂದಾಗಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:28 am, Thu, 22 June 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ