AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಇ ಅಧ್ಯಕ್ಷ ಶೇಖ್ ಖಲೀಫಾ ನಿಧನ; ಕರ್ನಾಟಕದಲ್ಲಿ ಒಂದು ದಿನದ ಶೋಕಾಚರಣೆ ಘೋಷಣೆ

ರಾಜ್ಯದಲ್ಲೂ ಒಂದು ದಿನದ ಶೋಕಾಚರಣೆ ಘೋಷಣೆ ಮಾಡಿ, ಕರ್ನಾಟಕ ಸರ್ಕಾರ (Karnataka Government) ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರುತ್ತದೆ.

ಯುಎಇ ಅಧ್ಯಕ್ಷ ಶೇಖ್ ಖಲೀಫಾ ನಿಧನ; ಕರ್ನಾಟಕದಲ್ಲಿ ಒಂದು ದಿನದ ಶೋಕಾಚರಣೆ ಘೋಷಣೆ
ಯುಎಇ ಅಧ್ಯಕ್ಷ ಶೇಖ್ ಖಲೀಫಾ
TV9 Web
| Edited By: sandhya thejappa|

Updated on:May 14, 2022 | 10:48 AM

Share

ಬೆಂಗಳೂರು: ಯುಎಇ ಅಧ್ಯಕ್ಷ ಹಾಗೂ ಅಬುಧಾಬಿಯ ಆಡಳಿತಗಾರರಾದ ಶೇಖ್ ಖಲೀಫಾ (Sheikh Khalifa) ನಿನ್ನೆ (ಮೇ 13) ನಿಧನರಾಗಿದ್ದಾರೆ. ಇವರ ನಿಧನದ ಹಿನ್ನೆಲೆ ದೇಶಾದ್ಯಂತ ಒಂದು ದಿನದ ಶೋಕಾಚರಣೆ (Mourning) ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲೂ ಒಂದು ದಿನದ ಶೋಕಾಚರಣೆ ಘೋಷಣೆ ಮಾಡಿ, ಕರ್ನಾಟಕ ಸರ್ಕಾರ (Karnataka Government) ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರುತ್ತದೆ. ಜೊತೆಗೆ, ರಾಜ್ಯದಲ್ಲಿ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಯಾವುದು ನಡೆಯೋಲ್ಲ.

ಶೇಖ್ ಖಲೀಫಾ ಅವರಿಗೆ 73 ವರ್ಷ ವಯಸ್ಸಾಗಿತ್ತು. ಇವರು ಯುಎಇ ಅಧ್ಯಕ್ಷ, ಅಬುಧಾಬಿಯ ಆಡಳಿತಗಾರರಾಗಿ ನವೆಂಬರ್ 3, 2004 ರಿಂದ ಸೇವೆ ಸಲ್ಲಿಸುತ್ತಿದ್ದರು. ಶೇಖ್ ಖಲೀಫಾ ತಮ್ಮ ತಂದೆ ದಿವಂಗತ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದರು. ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರು 1971 ರಲ್ಲಿ ಒಕ್ಕೂಟದಿಂದ ಯುಎಇಯ ಮೊದಲ ಅಧ್ಯಕ್ಷರಾಗಿ ನವೆಂಬರ್ 2, 2004 ರಂದು ನಿಧನರಾಗುವವರೆಗೆ ಸೇವೆ ಸಲ್ಲಿಸಿದರು.

1948 ರಲ್ಲಿ ಜನಿಸಿದ ಶೇಖ್ ಖಲೀಫಾ ಯುಎಇಯ ಎರಡನೇ ಅಧ್ಯಕ್ಷ ಮತ್ತು ಅಬುಧಾಬಿ ಎಮಿರೇಟ್‌ನ 16 ನೇ ಆಡಳಿತಗಾರರಾಗಿದ್ದರು. ಅವರು ಶೇಖ್ ಜಾಯೆದ್ ಅವರ ಹಿರಿಮಗ. ಯುಎಇ ಅಧ್ಯಕ್ಷರಾದಾಗಿನಿಂದ ಶೇಖ್ ಖಲೀಫಾ ಅವರು ಫೆಡರಲ್ ಸರ್ಕಾರ ಮತ್ತು ಅಬುಧಾಬಿ ಸರ್ಕಾರದ ಪ್ರಮುಖ ಪುನರ್ರಚನೆಯ ಮುಂದಾಳತ್ವ ವಹಿಸಿದ್ದಾರೆ. ಅವರ ಆಳ್ವಿಕೆಯಲ್ಲಿ, ಯುಎಇ ಹೆಚ್ಚಿನ ವೇಗದಲ್ಲಿ ಅಭಿವೃದ್ಧಿಗೆ ಸಾಕ್ಷಿಯಾಯಿತು.

ಇದನ್ನೂ ಓದಿ
Image
Wheat Export Ban: ಗೋಧಿ ದರ ಇಳಿಕೆಗೆ ಪ್ಲ್ಯಾನ್: ರಫ್ತು ನಿಷೇಧಿಸಿದ ಭಾರತ
Image
ಕೋವಿಡ್-19ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಫ್ರಿ ಅಡ್ಮಿಷನ್: ಕೆವಿಎಸ್​ನಿಂದ ಮಹತ್ವದ ನಿರ್ಧಾರ
Image
ಜಾಮಿಯಾ ಮಸೀದಿಯಲ್ಲಿ ಆಂಜನೇಯನ ಪೂಜೆಗೆ ಅವಕಾಶ ನೀಡುವಂತೆ ಹಿಂದೂ ಕಾರ್ಯಕರ್ತರಿಂದ ಮಂಡ್ಯ ಜಿಲ್ಲಾಧಿಕಾರಿಗೆ ದೂರು
Image
ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಸ್ಫೋಟಕ‌ ಸತ್ಯ ಬಾಯ್ಬಿಟ್ಟ ಬಂಧಿತ ಆರೋಪಿ ನಾಗೇಶ್, ಅಷ್ಟಕ್ಕೂ ಆತ ಹೇಳಿದ್ದೇನು?

ಶೇಖ್ ಖಲೀಫಾ ಬಿನ್ ಜಾಯೆದ್ ಅವರ ನಿಧನದ ಬಗ್ಗೆ ತಿಳಿದು ನನಗೆ ಅತೀವ ದುಃಖವಾಗಿದೆ. ಅವರು ಒಬ್ಬ ಮಹಾನ್ ರಾಜನೀತಿಜ್ಞ ಮತ್ತು ದಾರ್ಶನಿಕ ನಾಯಕರಾಗಿದ್ದರು, ಅವರ ನೇತೃತ್ವದಡಿಯಲ್ಲಿ ಭಾರತ-ಯುಎಇ ಸಂಬಂಧಗಳು ಸಮೃದ್ಧವಾಗಿವೆ. ಭಾರತದ ಜನರ ಹೃತ್ಪೂರ್ವಕ ಸಂತಾಪಗಳು ಯುಎಇ ಜನರೊಂದಿಗೆ ಇವೆ. ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Published On - 10:39 am, Sat, 14 May 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು