AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಇ ಅಧ್ಯಕ್ಷ ಶೇಖ್ ಖಲೀಫಾ ನಿಧನ; ಕರ್ನಾಟಕದಲ್ಲಿ ಒಂದು ದಿನದ ಶೋಕಾಚರಣೆ ಘೋಷಣೆ

ರಾಜ್ಯದಲ್ಲೂ ಒಂದು ದಿನದ ಶೋಕಾಚರಣೆ ಘೋಷಣೆ ಮಾಡಿ, ಕರ್ನಾಟಕ ಸರ್ಕಾರ (Karnataka Government) ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರುತ್ತದೆ.

ಯುಎಇ ಅಧ್ಯಕ್ಷ ಶೇಖ್ ಖಲೀಫಾ ನಿಧನ; ಕರ್ನಾಟಕದಲ್ಲಿ ಒಂದು ದಿನದ ಶೋಕಾಚರಣೆ ಘೋಷಣೆ
ಯುಎಇ ಅಧ್ಯಕ್ಷ ಶೇಖ್ ಖಲೀಫಾ
TV9 Web
| Updated By: sandhya thejappa|

Updated on:May 14, 2022 | 10:48 AM

Share

ಬೆಂಗಳೂರು: ಯುಎಇ ಅಧ್ಯಕ್ಷ ಹಾಗೂ ಅಬುಧಾಬಿಯ ಆಡಳಿತಗಾರರಾದ ಶೇಖ್ ಖಲೀಫಾ (Sheikh Khalifa) ನಿನ್ನೆ (ಮೇ 13) ನಿಧನರಾಗಿದ್ದಾರೆ. ಇವರ ನಿಧನದ ಹಿನ್ನೆಲೆ ದೇಶಾದ್ಯಂತ ಒಂದು ದಿನದ ಶೋಕಾಚರಣೆ (Mourning) ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲೂ ಒಂದು ದಿನದ ಶೋಕಾಚರಣೆ ಘೋಷಣೆ ಮಾಡಿ, ಕರ್ನಾಟಕ ಸರ್ಕಾರ (Karnataka Government) ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರುತ್ತದೆ. ಜೊತೆಗೆ, ರಾಜ್ಯದಲ್ಲಿ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಯಾವುದು ನಡೆಯೋಲ್ಲ.

ಶೇಖ್ ಖಲೀಫಾ ಅವರಿಗೆ 73 ವರ್ಷ ವಯಸ್ಸಾಗಿತ್ತು. ಇವರು ಯುಎಇ ಅಧ್ಯಕ್ಷ, ಅಬುಧಾಬಿಯ ಆಡಳಿತಗಾರರಾಗಿ ನವೆಂಬರ್ 3, 2004 ರಿಂದ ಸೇವೆ ಸಲ್ಲಿಸುತ್ತಿದ್ದರು. ಶೇಖ್ ಖಲೀಫಾ ತಮ್ಮ ತಂದೆ ದಿವಂಗತ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದರು. ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರು 1971 ರಲ್ಲಿ ಒಕ್ಕೂಟದಿಂದ ಯುಎಇಯ ಮೊದಲ ಅಧ್ಯಕ್ಷರಾಗಿ ನವೆಂಬರ್ 2, 2004 ರಂದು ನಿಧನರಾಗುವವರೆಗೆ ಸೇವೆ ಸಲ್ಲಿಸಿದರು.

1948 ರಲ್ಲಿ ಜನಿಸಿದ ಶೇಖ್ ಖಲೀಫಾ ಯುಎಇಯ ಎರಡನೇ ಅಧ್ಯಕ್ಷ ಮತ್ತು ಅಬುಧಾಬಿ ಎಮಿರೇಟ್‌ನ 16 ನೇ ಆಡಳಿತಗಾರರಾಗಿದ್ದರು. ಅವರು ಶೇಖ್ ಜಾಯೆದ್ ಅವರ ಹಿರಿಮಗ. ಯುಎಇ ಅಧ್ಯಕ್ಷರಾದಾಗಿನಿಂದ ಶೇಖ್ ಖಲೀಫಾ ಅವರು ಫೆಡರಲ್ ಸರ್ಕಾರ ಮತ್ತು ಅಬುಧಾಬಿ ಸರ್ಕಾರದ ಪ್ರಮುಖ ಪುನರ್ರಚನೆಯ ಮುಂದಾಳತ್ವ ವಹಿಸಿದ್ದಾರೆ. ಅವರ ಆಳ್ವಿಕೆಯಲ್ಲಿ, ಯುಎಇ ಹೆಚ್ಚಿನ ವೇಗದಲ್ಲಿ ಅಭಿವೃದ್ಧಿಗೆ ಸಾಕ್ಷಿಯಾಯಿತು.

ಇದನ್ನೂ ಓದಿ
Image
Wheat Export Ban: ಗೋಧಿ ದರ ಇಳಿಕೆಗೆ ಪ್ಲ್ಯಾನ್: ರಫ್ತು ನಿಷೇಧಿಸಿದ ಭಾರತ
Image
ಕೋವಿಡ್-19ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಫ್ರಿ ಅಡ್ಮಿಷನ್: ಕೆವಿಎಸ್​ನಿಂದ ಮಹತ್ವದ ನಿರ್ಧಾರ
Image
ಜಾಮಿಯಾ ಮಸೀದಿಯಲ್ಲಿ ಆಂಜನೇಯನ ಪೂಜೆಗೆ ಅವಕಾಶ ನೀಡುವಂತೆ ಹಿಂದೂ ಕಾರ್ಯಕರ್ತರಿಂದ ಮಂಡ್ಯ ಜಿಲ್ಲಾಧಿಕಾರಿಗೆ ದೂರು
Image
ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಸ್ಫೋಟಕ‌ ಸತ್ಯ ಬಾಯ್ಬಿಟ್ಟ ಬಂಧಿತ ಆರೋಪಿ ನಾಗೇಶ್, ಅಷ್ಟಕ್ಕೂ ಆತ ಹೇಳಿದ್ದೇನು?

ಶೇಖ್ ಖಲೀಫಾ ಬಿನ್ ಜಾಯೆದ್ ಅವರ ನಿಧನದ ಬಗ್ಗೆ ತಿಳಿದು ನನಗೆ ಅತೀವ ದುಃಖವಾಗಿದೆ. ಅವರು ಒಬ್ಬ ಮಹಾನ್ ರಾಜನೀತಿಜ್ಞ ಮತ್ತು ದಾರ್ಶನಿಕ ನಾಯಕರಾಗಿದ್ದರು, ಅವರ ನೇತೃತ್ವದಡಿಯಲ್ಲಿ ಭಾರತ-ಯುಎಇ ಸಂಬಂಧಗಳು ಸಮೃದ್ಧವಾಗಿವೆ. ಭಾರತದ ಜನರ ಹೃತ್ಪೂರ್ವಕ ಸಂತಾಪಗಳು ಯುಎಇ ಜನರೊಂದಿಗೆ ಇವೆ. ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Published On - 10:39 am, Sat, 14 May 22

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್