AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ತಾತ್ಕಾಲಿಕ ಬ್ರೇಕ್​ ನೀಡಿದ ರಾಜ್ಯ ಸರ್ಕಾರ

ಬಯೋಮೆಟ್ರಿಕ್ ಹಾಜರಾತಿ ಬದಲಾಗಿ ಹಾಜರಾತಿ ಪುಸ್ತಕದಲ್ಲಿ ಹಾಜರಾತಿಯನ್ನು ಹಾಕುವಂತೆ ಅದನ್ನು ಆಯಾಯ ಇಲಾಖೆಯ ನೋಡಲ್ ಅಧಿಕಾರಿಗಳು ಪರಿಶೀಲಿಸುವಂತೆ ಸೂಚಿಸಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ತಾತ್ಕಾಲಿಕ ಬ್ರೇಕ್​ ನೀಡಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jan 11, 2022 | 12:47 PM

Share

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮಕ್ಕಳಲ್ಲಿ ಯುವಕರಲ್ಲಿ ಹೆಚ್ಚಾಗುತ್ತಿರುವ ಕೊರೊನಾದಿಂದ ಆತಂಕ ದ್ವಿಗುಣಗೊಂಡಿದೆ. ಅಲ್ಲದೆ ರಾಜ್ಯದ ಸಿಎಂ, ಸಚಿವರು ಸೇರಿದಂತೆ ಅನೇಕರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಸದ್ಯ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲು ಸರ್ಕಾರ ಮುಂದಾಗಿದೆ.

ಮೊಟ್ಟ ಮೊದಲ ಬಾರಿಗೆ ಎಸ್.ಎಂ. ಕೃಷ್ಣ ಕಾಲದಲ್ಲಿ ಬಯೋಮೆಟ್ರಿಕ್ ಹಾಜರಾತಿ ವಿಧಾನ ಬಂತು. ಬಳಿಕ ಇದನ್ನು ಎಲ್ಲಾ ಕಡೆ ಜಾರಿ ಮಾಡಲಾಯಿತು. ಈಗ ಸರ್ಕಾರದಲ್ಲಿ ಬಯೋಮೆಟ್ರಿಕ್ ಪದ್ಧತಿ ಮಾತ್ರ ಇದೆ. ರಾಜ್ಯದ ಹಲವಾರು ಕಡೆ ಕೊರೊನಾ ಮತ್ತು ಒಮಿಕ್ರಾನ್ ಆತಂಕ ಹೆಚ್ಚಾಗಿದೆ. ಜೊತೆಗೆ ಸೋಂಕಿತರು ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವಾಲಯ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದ ಅಧಿಕಾರಿ ಮತ್ತು ಸಿಬ್ಬಂದಿಗಳು ಬಯೋಮೆಟ್ರಿಕ್ ಹಾಜರಾತಿಯನ್ನು ನಮೂದಿಸುವುದಕ್ಕೆ ಮುಂದಿನ ಆದೇಶದವರೆಗೂ ವಿನಾಯಿತಿ ನೀಡಲಾಗಿದೆ ಎಂದು ಸರ್ಕಾರ ಸುತ್ತೋಲೆ ಕಳಿಸಿದೆ.

ಬಯೋಮೆಟ್ರಿಕ್ ಹಾಜರಾತಿ ಬದಲಾಗಿ ಹಾಜರಾತಿ ಪುಸ್ತಕದಲ್ಲಿ ಹಾಜರಾತಿಯನ್ನು ಹಾಕುವಂತೆ ಅದನ್ನು ಆಯಾಯ ಇಲಾಖೆಯ ನೋಡಲ್ ಅಧಿಕಾರಿಗಳು ಪರಿಶೀಲಿಸುವಂತೆ ಸೂಚಿಸಲಾಗಿದೆ. ಇನ್ನು ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ಕೂಡ ಇದೇ ರೀತಿ ಬಯೋಮೆಟ್ರಿಕ್ ಹಾಜರಾತಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಸೂಚನೆ ನೀಡಿತ್ತು. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜೀತೇಂದ್ರ ಸಿಂಗ್, ಟ್ವೀಟ್ ಮೂಲಕ ಸರ್ಕಾರಿ ನೌಕರರಿಗೆ ಉದ್ಯೋಗಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ: ಒಮಿಕ್ರಾನ್​ ಸೋಂಕಿಗೆ ಮಾರ್ಚ್​​ನಲ್ಲಿ ಸಿದ್ಧವಾಗಲಿದೆ ಲಸಿಕೆ; ಫೈಜರ್​ ಕಂಪನಿ ಸಿಇಒ ಭರವಸೆ, ಮಾಡೆರ್ನಾದಿಂದಲೂ ನಡೆಯುತ್ತಿದೆ ಪ್ರಯತ್ನ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ