AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕರ್ನಾಟಕ ಸರ್ಕಾರ ನಿರ್ಧಾರ

ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಇಂದು ಬೆಳಗ್ಗೆ ಸಭೆ ನಡೆಯುತ್ತದೆ. ಸುಪ್ರೀಂಕೋರ್ಟ್​ನ 2 ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಒಬಿಸಿ ಮೀಸಲಾತಿ ವಿಚಾರವಾಗಿ ‘ಸುಪ್ರೀಂ’ ತೀರ್ಪು ನೀಡಿದೆ.

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕರ್ನಾಟಕ ಸರ್ಕಾರ ನಿರ್ಧಾರ
ಬಸವರಾಜ ಬೊಮ್ಮಾಯಿ
TV9 Web
| Edited By: sandhya thejappa|

Updated on:May 12, 2022 | 11:59 AM

Share

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ (Anti Conversion Bill) ಜಾರಿ ಮಾಡಲಾಗುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ಇಂದು  (ಮೇ 12) ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಜಾರಿಮಾಡಲಾಗುತ್ತದೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದೆ. ಆದರೆ ವಿಧಾನಪರಿಷತ್​​ನಲ್ಲಿ ವಿಧೇಯಕ ಅಂಗೀಕಾರ ಆಗಿರಲಿಲ್ಲ. ಹಾಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.

ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಇಂದು ಬೆಳಗ್ಗೆ ಸಭೆ ನಡೆಯುತ್ತದೆ. ಸುಪ್ರೀಂಕೋರ್ಟ್​ನ 2 ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಒಬಿಸಿ ಮೀಸಲಾತಿ ವಿಚಾರವಾಗಿ ‘ಸುಪ್ರೀಂ’ ತೀರ್ಪು ನೀಡಿದೆ. ಒಬಿಸಿ ಮೀಸಲಾತಿ ವಿಚಾರವಾಗಿ ಕಾನೂನು ತಜ್ಞರು, ಕಾನೂನು ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇವೆ. ವಿಪಕ್ಷ ನಾಯಕರು ಕೂಡ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ಇದುವರೆಗೆ ಸಂವಿಧಾನದ ಅಡಿ ಮೀಸಲಾತಿ ನೀಡುತ್ತಿದ್ದೆವು. ಮುಂದೆಯೂ ಮೀಸಲಾತಿ ನೀಡಿ ಚುನಾವಣೆ ನಡೆಸುತ್ತೇವೆ. ಒಬಿಸಿಗೆ ರಾಜಕೀಯ ಮೀಸಲಾತಿ ಸಂಬಂಧ ಚರ್ಚಿಸುತ್ತೇವೆ. ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ಮಾತನಾಡಿದ ಸಿಎಂ, ಮಧ್ಯಪ್ರದೇಶ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ವಿಚಾರಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಮರುಪರಿಶೀಲನಾ ಅರ್ಜಿ ಮಂಗಳವಾರ ವಿಚಾರಣೆಗೆ ಬರಲಿದೆ ಎಂದರು.

ಇದನ್ನೂ ಓದಿ
Image
ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!
Image
NEET PG 2022: ನೀಟ್ ಪರೀಕ್ಷೆ ಮುಂದೂಡಲು ಆರೋಗ್ಯ ಸಚಿವರಿಗೆ ಐಎಂಎ ಮನವಿ
Image
Sarkaru Vaari Paata Review: ಒಂದೊಳ್ಳೆಯ ಕಥೆಗೆ ಬೇಕಿತ್ತು ಇನ್ನಷ್ಟು ಒಳ್ಳೆಯ ಟ್ರೀಟ್​ಮೆಂಟ್
Image
ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ಸಚಿವ ಸಂಪುಟ ವಿಸ್ತರಣೆ ಬಗ್ಗೆ 2 -3 ದಿನಗಳಲ್ಲಿ ನಿರ್ಧಾರ: ಸಚಿವ ಸಂಪುಟ ವಿಸ್ತರಣೆ ಬಗ್ಗೆ 2 ಅಥವಾ 3 ದಿನಗಳಲ್ಲಿ ಕೇಂದ್ರ ನಾಯಕರು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ತಿಳಿಸಿದ್ದಾರೆ. ಇದೇ ವೇಳೆ ಪುತ್ರ ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು. ಭ್ರಷ್ಟ, ದುರ್ಬಲ ಸರ್ಕಾರವೆಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಎಸ್​ವೈ, ಯಾರು ಭ್ರಷ್ಟರೋ ಅಂಥವರ ಬಾಯಲ್ಲಿ ಈ ಮಾತು ಬರುತ್ತಿದೆ. ಸಿದ್ದರಾಮಯ್ಯ ಕಾಲದಲ್ಲಿ ಏನಾಯ್ತು ಎಂದು ಗೊತ್ತಿದೆ ಎಂದರು.

Published On - 11:46 am, Thu, 12 May 22

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು