AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಬಿಬಿಎಂಪಿ ಪುನರ್ ರಚನೆಗೆ ಸಮಿತಿ ಪನರ್​ ರಚಿಸಿದ ಕರ್ನಾಟಕ ಸರ್ಕಾರ

ಬಿಬಿಎಂಪಿ ಪಾಲಿಕೆ ಆಡಳಿತದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪಾಲಿಕೆಯನ್ನು ವಿಭಜಿಸಲು ಕರ್ನಾಟಕ ಸರ್ಕಾರ ಮುಂದಾಗಿದ್ದು, ಇದಕ್ಕೂ ಮುನ್ನ ತಜ್ಞರ ಸಮಿತಿ ರಚನೆ ಮಾಡಿದೆ.

BBMP: ಬಿಬಿಎಂಪಿ ಪುನರ್ ರಚನೆಗೆ ಸಮಿತಿ ಪನರ್​ ರಚಿಸಿದ ಕರ್ನಾಟಕ ಸರ್ಕಾರ
ಬಿಬಿಎಂಪಿ ಪುನರ್ ರಚನೆಗೆ ಸಮಿತಿ ರಚಿಸಿದ ಕರ್ನಾಟಕ ಸರ್ಕಾರ
Rakesh Nayak Manchi
|

Updated on:Jun 12, 2023 | 10:47 PM

Share

ಬೆಂಗಳೂರು: ಬಿಬಿಎಂಪಿ (BBMP) ಆಡಳಿತದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪಾಲಿಕೆಯನ್ನು ವಿಭಜಿಸಲು ಕರ್ನಾಟಕ ಸರ್ಕಾರ (Karnataka Govt) ಮುಂದಾಗಿದ್ದು, ಇದಕ್ಕೂ ಮುನ್ನ ಇದ್ದ ತಜ್ಞರ ಸಮಿತಿಯನ್ನು ಪುನರ್ ರಚನೆ ಮಾಡಿ ಆದೇಶಿಸಿದೆ. ಅಲ್ಲದೆ, ನಿಗದಿತ ಸಮಯದಲ್ಲಿ ವರದಿ ತರಿಸಿಕೊಂಡು ಅದರ ಆಧಾರದ ಮೇಲೆ ಪಾಲಿಕೆಯನ್ನು ಪುನರ್ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಆದೇಶದ ಪ್ರಕಾರ, ಬಿಬಿಎಂಪಿ ಪಾಲಿಕೆ ಆಡಳಿತದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪಾಲಿಕೆಯನ್ನು ವಿಭಜಿಸುವುದು ಸೂಕ್ತ ಎಂದು ಪರಿಗಣಿಸಲಾಗಿದೆ. ಈ ರೀತಿ ವಿಭಜಿಸುವ ಮುನ್ನ ತಜ್ಞರ ಸಮಿತಿ ನೇಮಿಸಿ ಸಮಿತಿಯಿಂದ ನಿಗಧಿತ ಕಾಲಮಿತಿಯೊಳಗೆ ವರದಿ ತರಿಸಿಕೊಂಡು ಪಾಲಿಕೆಯನ್ನು ವಿಭಜನೆ ಮಾಡುವ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರವು ತೀರ್ಮಾನಿಸಿದೆ.

ಇದನ್ನೂ ಓದಿ: BBMP Elections: ಬಿಬಿಎಂಪಿ ವಾರ್ಡ್ ವಿಂಗಡನೆ ಕುರಿತ ಅಂತಿಮ​​ ವರದಿ ಸಿದ್ಧ, ಲೋಕಸಭೆಗೂ ಮುನ್ನ ಬಿಬಿಎಂಪಿ ಎಲೆಕ್ಷನ್​ಗೆ ಪ್ಲ್ಯಾನ್

ನಿವೃತ್ತ ಐಎಎಸ್ ಅಧಿಕಾರಿ ಬಿಎಸ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಈ ಹಿಂದೆ ರಚಿಸಲಾಗಿತ್ತು. ಇದಕ್ಕೆ ಮುಂದುವರೆದಂತೆ, ಪ್ರಸ್ತುತ ಪಾಲಿಕೆಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಬಿಎಸ್​ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಈಗ ಪುನರ್ ರಚಿಸಲು ಸರ್ಕಾರವು ತೀರ್ಮಾನಿಸಿದೆ. ಅದರಂತೆ ಪಾಟೀಲ್ ಅಧ್ಯಕ್ಷತೆಯ ಸಮಿತಿಯಲ್ಲಿ ಬಿಬಿಎಂಪಿ ನಿವೃತ್ತ ಆಯುಕ್ತ ಸಿದ್ದಯ್ಯ ಮತ್ತು ಹಿಂದಿನ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್​ ಸದಸ್ಯ ರವಿಚಂದರ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಸಮಿತಿಯು ಬಿಬಿಎಂಪಿ ಪುನರ್ ರಚನೆ ಸಂಬಂಧ ಅಧ್ಯಯನ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಪಾಲಿಕೆ ವಿಶೇಷ ಆಯುಕ್ತರು (ಆಡಳಿತ) ಸಮಿತಿಗೆ ಬೇಕಾದ ಅಗತ್ಯ ಮಾಹಿತಿಯನ್ನು ಒದಗಿಸಬೇಕು ಮತ್ತು ತತ್ಸಬಂಧ ಕರೆಯಬೇಕಾಗಿರುವ ಸಭೆಗಳ ಬಗ್ಗೆ ಸೂಕ್ತವಾಗಿ ಸಮನ್ವಯ ಕಾರ್ಯ ನಿರ್ವಹಿಸಬೇಕು. ಸಮಿತಿಗೆ ಉತ್ತಮ ಕಚೇರಿ, ಕೊಠಡಿ, ಅಗ್ಯತ್ಯ ಸಿಬ್ಬಂದಿ, ಪೀಠೋಪಕರಣಗಳು, ವಾಹನ ಸೌಲಭ್ಯ ಸೇರಿದಂತೆ ಇನ್ನಿತರ ಅವಶ್ಯ ಸೌಲಭ್ಯ ಒದಗಿಸುವಂತೆ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್​ಎಸ್​ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Mon, 12 June 23

Follow Us
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!