Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಬಿಬಿಎಂಪಿ ಪುನರ್ ರಚನೆಗೆ ಸಮಿತಿ ಪನರ್​ ರಚಿಸಿದ ಕರ್ನಾಟಕ ಸರ್ಕಾರ

ಬಿಬಿಎಂಪಿ ಪಾಲಿಕೆ ಆಡಳಿತದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪಾಲಿಕೆಯನ್ನು ವಿಭಜಿಸಲು ಕರ್ನಾಟಕ ಸರ್ಕಾರ ಮುಂದಾಗಿದ್ದು, ಇದಕ್ಕೂ ಮುನ್ನ ತಜ್ಞರ ಸಮಿತಿ ರಚನೆ ಮಾಡಿದೆ.

BBMP: ಬಿಬಿಎಂಪಿ ಪುನರ್ ರಚನೆಗೆ ಸಮಿತಿ ಪನರ್​ ರಚಿಸಿದ ಕರ್ನಾಟಕ ಸರ್ಕಾರ
ಬಿಬಿಎಂಪಿ ಪುನರ್ ರಚನೆಗೆ ಸಮಿತಿ ರಚಿಸಿದ ಕರ್ನಾಟಕ ಸರ್ಕಾರ
Follow us
Rakesh Nayak Manchi
|

Updated on:Jun 12, 2023 | 10:47 PM

ಬೆಂಗಳೂರು: ಬಿಬಿಎಂಪಿ (BBMP) ಆಡಳಿತದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪಾಲಿಕೆಯನ್ನು ವಿಭಜಿಸಲು ಕರ್ನಾಟಕ ಸರ್ಕಾರ (Karnataka Govt) ಮುಂದಾಗಿದ್ದು, ಇದಕ್ಕೂ ಮುನ್ನ ಇದ್ದ ತಜ್ಞರ ಸಮಿತಿಯನ್ನು ಪುನರ್ ರಚನೆ ಮಾಡಿ ಆದೇಶಿಸಿದೆ. ಅಲ್ಲದೆ, ನಿಗದಿತ ಸಮಯದಲ್ಲಿ ವರದಿ ತರಿಸಿಕೊಂಡು ಅದರ ಆಧಾರದ ಮೇಲೆ ಪಾಲಿಕೆಯನ್ನು ಪುನರ್ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಆದೇಶದ ಪ್ರಕಾರ, ಬಿಬಿಎಂಪಿ ಪಾಲಿಕೆ ಆಡಳಿತದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪಾಲಿಕೆಯನ್ನು ವಿಭಜಿಸುವುದು ಸೂಕ್ತ ಎಂದು ಪರಿಗಣಿಸಲಾಗಿದೆ. ಈ ರೀತಿ ವಿಭಜಿಸುವ ಮುನ್ನ ತಜ್ಞರ ಸಮಿತಿ ನೇಮಿಸಿ ಸಮಿತಿಯಿಂದ ನಿಗಧಿತ ಕಾಲಮಿತಿಯೊಳಗೆ ವರದಿ ತರಿಸಿಕೊಂಡು ಪಾಲಿಕೆಯನ್ನು ವಿಭಜನೆ ಮಾಡುವ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರವು ತೀರ್ಮಾನಿಸಿದೆ.

ಇದನ್ನೂ ಓದಿ: BBMP Elections: ಬಿಬಿಎಂಪಿ ವಾರ್ಡ್ ವಿಂಗಡನೆ ಕುರಿತ ಅಂತಿಮ​​ ವರದಿ ಸಿದ್ಧ, ಲೋಕಸಭೆಗೂ ಮುನ್ನ ಬಿಬಿಎಂಪಿ ಎಲೆಕ್ಷನ್​ಗೆ ಪ್ಲ್ಯಾನ್

ನಿವೃತ್ತ ಐಎಎಸ್ ಅಧಿಕಾರಿ ಬಿಎಸ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಈ ಹಿಂದೆ ರಚಿಸಲಾಗಿತ್ತು. ಇದಕ್ಕೆ ಮುಂದುವರೆದಂತೆ, ಪ್ರಸ್ತುತ ಪಾಲಿಕೆಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಬಿಎಸ್​ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಈಗ ಪುನರ್ ರಚಿಸಲು ಸರ್ಕಾರವು ತೀರ್ಮಾನಿಸಿದೆ. ಅದರಂತೆ ಪಾಟೀಲ್ ಅಧ್ಯಕ್ಷತೆಯ ಸಮಿತಿಯಲ್ಲಿ ಬಿಬಿಎಂಪಿ ನಿವೃತ್ತ ಆಯುಕ್ತ ಸಿದ್ದಯ್ಯ ಮತ್ತು ಹಿಂದಿನ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್​ ಸದಸ್ಯ ರವಿಚಂದರ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಸಮಿತಿಯು ಬಿಬಿಎಂಪಿ ಪುನರ್ ರಚನೆ ಸಂಬಂಧ ಅಧ್ಯಯನ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಪಾಲಿಕೆ ವಿಶೇಷ ಆಯುಕ್ತರು (ಆಡಳಿತ) ಸಮಿತಿಗೆ ಬೇಕಾದ ಅಗತ್ಯ ಮಾಹಿತಿಯನ್ನು ಒದಗಿಸಬೇಕು ಮತ್ತು ತತ್ಸಬಂಧ ಕರೆಯಬೇಕಾಗಿರುವ ಸಭೆಗಳ ಬಗ್ಗೆ ಸೂಕ್ತವಾಗಿ ಸಮನ್ವಯ ಕಾರ್ಯ ನಿರ್ವಹಿಸಬೇಕು. ಸಮಿತಿಗೆ ಉತ್ತಮ ಕಚೇರಿ, ಕೊಠಡಿ, ಅಗ್ಯತ್ಯ ಸಿಬ್ಬಂದಿ, ಪೀಠೋಪಕರಣಗಳು, ವಾಹನ ಸೌಲಭ್ಯ ಸೇರಿದಂತೆ ಇನ್ನಿತರ ಅವಶ್ಯ ಸೌಲಭ್ಯ ಒದಗಿಸುವಂತೆ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್​ಎಸ್​ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Mon, 12 June 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು