AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮಧ್ಯರಾತ್ರಿ 1ಗಂಟೆ ವರೆಗೂ ಮದ್ಯ ಮಾರಾಟಕ್ಕೆ ಅವಕಾಶ, ಆದರೆ ಈ ವ್ಯಾಪ್ತಿಯಲ್ಲಿ ಮಾತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಧ್ಯರಾತ್ರಿ 1ಗಂಟೆ ವರೆಗೂ ನೈಟ್ ಲೈಫ್ ವಿಸ್ತರಣೆಗೆ ಅವಕಾಶ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಬಾರ್‌, ಹೋಟೆಲ್‌, ಕ್ಲಬ್‌, ಸ್ಟಾರ್‌ ಹೋಟೆಲ್‌ಗಳು ಮತ್ತು ಬೋರ್ಡಿಂಗ್‌ ಹೌಸ್‌ಗಳಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

Bengaluru: ಮಧ್ಯರಾತ್ರಿ 1ಗಂಟೆ ವರೆಗೂ ಮದ್ಯ ಮಾರಾಟಕ್ಕೆ ಅವಕಾಶ, ಆದರೆ ಈ ವ್ಯಾಪ್ತಿಯಲ್ಲಿ ಮಾತ್ರ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Aug 07, 2024 | 9:26 AM

Share

ಬೆಂಗಳೂರು, ಆಗಸ್ಟ್.07: ರಾಜ್ಯ ಅಬಕಾರಿ ಇಲಾಖೆಯಲ್ಲಿ ಬಹಳಷ್ಟು ಬೆಳವಣಿಗೆಗಳಾಗುತ್ತಿವೆ. ಇತ್ತೀಚೆಗೆ ಸ್ಕಾಚ್​​​ಗಳ ಬೆಲೆಯಲ್ಲಿ ಭಾರಿ ಇಳಿಕೆ‌ ಮಾಡುವ ಬಗ್ಗೆ ಅಬಕಾರಿ ಇಲಾಖೆ ಮಾಹಿತಿ ನೀಡಿತ್ತು. ಇದೀಗ ಮದ್ಯ ಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಬರುವ ಬಾರ್‌, ಹೋಟೆಲ್‌, ಕ್ಲಬ್‌, ಸ್ಟಾರ್‌ ಹೋಟೆಲ್‌ಗಳು ಮತ್ತು ಬೋರ್ಡಿಂಗ್‌ ಹೌಸ್‌ಗಳಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ (Karnataka Government) ಅವಕಾಶ ನೀಡಿದೆ.

ವ್ಯಾಪಾರ, ವಾಹಿವಾಟು ಸುಧಾರಿಸುವ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯ ಬಾರ್, ಕ್ಲಬ್ ಸೇರಿದಂತೆ ಇತರ ವ್ಯಾಪಾರ ಸಂಸ್ಥೆಗಳಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ತೆರೆದಿರಲು ಅನುಮತಿ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲಿ ನಡೆದ 2024–25ನೇ ಸಾಲಿನ ಬಜೆಟ್‌ ಭಾಷಣೆಯಲ್ಲಿ ಈ ಬಗ್ಗೆ ಘೋಷಿಸಿದ್ದರು. ಅದರಂತೆ ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ನಿರ್ಬಂಧವನ್ನು ವಿಸ್ತರಿಸಲಾಗಿದೆ ಎಂದು ಜುಲೈ 29ರಂದೇ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಗುಡ್, ಬ್ಯಾಡ್ ನ್ಯೂಸ್: ಇಳಿಕೆಯಾಗಲಿದೆ ಪ್ರೀಮಿಯಂ ಸ್ಕಾಚ್ ದರ, ದುಬಾರಿಯಾಗಲಿದೆ ಬಡವರ ಮದ್ಯ

ಬಿಬಿಎಂಪಿ ಮಿತಿಯಲ್ಲಿರುವ ಮದ್ಯ ವ್ಯಾಪಾರ ಸಂಸ್ಥೆಗಳಿಗೆ ಮಾತ್ರ ಈ ಆದೇಶ ಅನ್ವಯಿಸಲಿದೆ. ಈ ನಿರ್ಧಾರ ರಾಜ್ಯ ಸರ್ಕಾರಕ್ಕೆ ತನ್ನ ಆದಾಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಗರದ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿರುವ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘ (BBHA), ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ.

ಇನ್ನು ಬಿಬಿಎಚ್‌ಎ ಅಧ್ಯಕ್ಷ ಪಿಸಿ ರಾವ್ ಮಾತನಾಡಿ, ವ್ಯಾಪಾರ ಸಮಯವನ್ನು 1 ಗಂಟೆಗೆ ವಿಸ್ತರಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದರಿಂದ ಬೆಂಗಳೂರಿನ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ. ಈ ನಿರ್ಧಾರದಿಂದ ಹೆಚ್ಚಿನ ಉದ್ಯೋಗ ಸೃಷ್ಟಿಗೂ ಕಾರಣವಾಗಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್‌ಗಳು ಮಧ್ಯರಾತ್ರಿ 1 ಗಂಟೆಯವರೆಗೆ ತೆರೆದಿರಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಆದರೆ, ಕೆಲವು ನೆಟ್ಟಿಗರು ಈ ನಿರ್ಧಾರವನ್ನು ವಿರೋಧಿಸಿದ್ದಾರೆ. ಇದು ನಗರದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:16 am, Wed, 7 August 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ