AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಬ್ರೇಕ್: ಪರಪ್ಪನ ಅಗ್ರಹಾರದಲ್ಲಿ ಕಠಿಣ ಜಾಮರ್‌ ಅಳವಡಿಕೆ

ತಿಹಾರ್ ಜೈಲಿನ ಮಾದರಿಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ (THCB) ಅಳವಡಿಸುವ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.

Bengaluru News: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಬ್ರೇಕ್: ಪರಪ್ಪನ ಅಗ್ರಹಾರದಲ್ಲಿ ಕಠಿಣ ಜಾಮರ್‌ ಅಳವಡಿಕೆ
ಪರಪ್ಪನ ಅಗ್ರಹಾರ
Follow us
ವಿವೇಕ ಬಿರಾದಾರ
|

Updated on: Jun 10, 2023 | 6:36 AM

ಬೆಂಗಳೂರು: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಇನ್ಮುಂದೆ ಬ್ರೇಕ್ ಬೀಳಲಿದೆ. ತಿಹಾರ್ ಜೈಲಿನ (Tihar Jail) ಮಾದರಿಯಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ (THCB) ಅಳವಡಿಸುವ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಅಪರಾಧ ಪ್ರಕರಣಗಳ ಹಿನ್ನೆಲೆಯುಳ್ಳವರು, ವಿಚಾರಣಾಧೀನ ಖೈದಿಗಳು ಜೈಲಿನಿಂದಲೇ ಮೊಬೈಲ್ (Mobile) ಮೂಲಕ ಸಂಪರ್ಕಿಸಿ ಡೀಲ್ ನಡೆಸ್ತಿದ್ದ ಆರೋಪ, ಬೆದರಿಕೆ ವೊಡ್ಡುತ್ತಿದ್ದ ಪ್ರಕರಣಗಳು ದಾಖಲಾಗಿತ್ತಿದ್ದವು. ಇದನ್ನು ತಡೆಯುವ ದೃಷ್ಠಿಯಿಂದ ಜೈಲಿನಿಂದ ಯಾವುದೇ ಮೊಬೈಲ್ ಕರೆಗಳು ಹೋಗದಂತೆ ನಿರ್ಬಂಧಿಸಲು ಟಿಹೆಚ್​​ಸಿಬಿ ಟವರ್ ಸಿಗ್ನಲ್​​ಗಳನ್ನು ಅಳವಡಿಸಲಾಗುತ್ತಿದೆ.

ಪರಪ್ಪನ ಅಗ್ರಹಾರ ಕಾರಾಗೃಹ ಆವರಣದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ 3 ಟವರ್​​​ಗಳನ್ನು ಸ್ಥಾಪಿಸಲಾಗುತ್ತದೆ. ಇವು ಮೊಬೈಲ್ ಜಾಮರ್​ಗಳಿಗಿಂತಲೂ ಸುಧಾರಿತ ಟೆಕ್ನಾಲಜಿ ವ್ಯವಸ್ಥೆ ಹೊಂದಿವೆ. ವಿವಿಧ ಮೊಬೈಲ್ ನೆಟ್​ವರ್ಕ್ ಕಂಪನಿಗಳ ಆಂಟೇನಾ ಅಳವಡಿಸಲಾಗುತ್ತದೆ. ಈ ಮೂಲಕ ಮೊಬೈಲ್ ಗಳ ಸಂಪರ್ಕ ಕಡಿತಗೊಳ್ಳುತ್ತದೆ. ಲ್ಯಾಂಡ್ ಲೈನ್ ಮೂಲಕ ಮಾತ್ರ ದೂರವಾಣಿ ಸಂಪರ್ಕ ಇರುತ್ತದೆ.

ಇದನ್ನೂ ಓದಿ: ಅತ್ಯಾಚಾರ, ಮತಾಂತರ ಆರೋಪದ ಮೇಲೆ ಬಾಯ್ ಫ್ರೆಂಡ್ ಅನ್ನು ಜೈಲಿಗೆ ಕಳಿಸಿದ ಮಹಿಳೆ; ‘ದಿ ಕೇರಳ ಸ್ಟೋರಿ’ ವೀಕ್ಷಿಸಿದ ನಂತರ ದೂರು ದಾಖಲು

ಕಳೆದ ವರ್ಷ ಜನವರಿಯಲ್ಲಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕರೆ ಮಾಡಿ ಬೆದರಿಕೆಯೊಡ್ಡಲಾಗಿತ್ತು. ಈ ಬಳಿಕ ಪೊಲೀಸರ ದಾಳಿ ವೇಳೆ ಮೊಬೈಲ್ ಪೋನ್​​ಗಳು, ಸಿಮ್​ಗಳು ಪತ್ತೆಯಾಗುತ್ತಿದ್ದವು. ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ ಅಳವಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ