Bengaluru News: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಬ್ರೇಕ್: ಪರಪ್ಪನ ಅಗ್ರಹಾರದಲ್ಲಿ ಕಠಿಣ ಜಾಮರ್‌ ಅಳವಡಿಕೆ

ತಿಹಾರ್ ಜೈಲಿನ ಮಾದರಿಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ (THCB) ಅಳವಡಿಸುವ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.

Bengaluru News: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಬ್ರೇಕ್: ಪರಪ್ಪನ ಅಗ್ರಹಾರದಲ್ಲಿ ಕಠಿಣ ಜಾಮರ್‌ ಅಳವಡಿಕೆ
ಪರಪ್ಪನ ಅಗ್ರಹಾರ

Updated on: Jun 10, 2023 | 6:36 AM

ಬೆಂಗಳೂರು: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಇನ್ಮುಂದೆ ಬ್ರೇಕ್ ಬೀಳಲಿದೆ. ತಿಹಾರ್ ಜೈಲಿನ (Tihar Jail) ಮಾದರಿಯಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ (THCB) ಅಳವಡಿಸುವ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಅಪರಾಧ ಪ್ರಕರಣಗಳ ಹಿನ್ನೆಲೆಯುಳ್ಳವರು, ವಿಚಾರಣಾಧೀನ ಖೈದಿಗಳು ಜೈಲಿನಿಂದಲೇ ಮೊಬೈಲ್ (Mobile) ಮೂಲಕ ಸಂಪರ್ಕಿಸಿ ಡೀಲ್ ನಡೆಸ್ತಿದ್ದ ಆರೋಪ, ಬೆದರಿಕೆ ವೊಡ್ಡುತ್ತಿದ್ದ ಪ್ರಕರಣಗಳು ದಾಖಲಾಗಿತ್ತಿದ್ದವು. ಇದನ್ನು ತಡೆಯುವ ದೃಷ್ಠಿಯಿಂದ ಜೈಲಿನಿಂದ ಯಾವುದೇ ಮೊಬೈಲ್ ಕರೆಗಳು ಹೋಗದಂತೆ ನಿರ್ಬಂಧಿಸಲು ಟಿಹೆಚ್​​ಸಿಬಿ ಟವರ್ ಸಿಗ್ನಲ್​​ಗಳನ್ನು ಅಳವಡಿಸಲಾಗುತ್ತಿದೆ.

ಪರಪ್ಪನ ಅಗ್ರಹಾರ ಕಾರಾಗೃಹ ಆವರಣದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ 3 ಟವರ್​​​ಗಳನ್ನು ಸ್ಥಾಪಿಸಲಾಗುತ್ತದೆ. ಇವು ಮೊಬೈಲ್ ಜಾಮರ್​ಗಳಿಗಿಂತಲೂ ಸುಧಾರಿತ ಟೆಕ್ನಾಲಜಿ ವ್ಯವಸ್ಥೆ ಹೊಂದಿವೆ. ವಿವಿಧ ಮೊಬೈಲ್ ನೆಟ್​ವರ್ಕ್ ಕಂಪನಿಗಳ ಆಂಟೇನಾ ಅಳವಡಿಸಲಾಗುತ್ತದೆ. ಈ ಮೂಲಕ ಮೊಬೈಲ್ ಗಳ ಸಂಪರ್ಕ ಕಡಿತಗೊಳ್ಳುತ್ತದೆ. ಲ್ಯಾಂಡ್ ಲೈನ್ ಮೂಲಕ ಮಾತ್ರ ದೂರವಾಣಿ ಸಂಪರ್ಕ ಇರುತ್ತದೆ.

ಇದನ್ನೂ ಓದಿ: ಅತ್ಯಾಚಾರ, ಮತಾಂತರ ಆರೋಪದ ಮೇಲೆ ಬಾಯ್ ಫ್ರೆಂಡ್ ಅನ್ನು ಜೈಲಿಗೆ ಕಳಿಸಿದ ಮಹಿಳೆ; ‘ದಿ ಕೇರಳ ಸ್ಟೋರಿ’ ವೀಕ್ಷಿಸಿದ ನಂತರ ದೂರು ದಾಖಲು

ಕಳೆದ ವರ್ಷ ಜನವರಿಯಲ್ಲಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕರೆ ಮಾಡಿ ಬೆದರಿಕೆಯೊಡ್ಡಲಾಗಿತ್ತು. ಈ ಬಳಿಕ ಪೊಲೀಸರ ದಾಳಿ ವೇಳೆ ಮೊಬೈಲ್ ಪೋನ್​​ಗಳು, ಸಿಮ್​ಗಳು ಪತ್ತೆಯಾಗುತ್ತಿದ್ದವು. ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ ಅಳವಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ