AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಮುಟ್ಟಿಸಿದ ಸರ್ಕಾರ: ಶೀಘ್ರವೇ ಕೆಂಪೇಗೌಡ ಏರ್​ಪೋರ್ಟ್​ಗೆ ಮೆಟ್ರೋನಲ್ಲಿ ಓಡಾಡುವ ಅದೃಷ್ಟ ಕೂಡಿಬರಲಿದೆ!

ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ ಮಾರ್ಗ. ನಗರದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಬೇಕು ಅಂದರೆ ಗಂಟೆಗಟ್ಟಲೆ ಟ್ರಾಫಿಕ್ ನಲ್ಲಿ ಪರದಾಡಬೇಕಿತ್ತು, ಇದಕ್ಕೆ ಬ್ರೇಕ್ ಹಾಕಲು ಬಿಎಂಆರ್ಸಿಎಲ್ ಬ್ಲೂ ಲೈನ್ ಮೆಟ್ರೋ ಓಪನ್ ಮಾಡಲು ಮುಂದಾಗಿದ್ದು,ಬರೋಬ್ಬರಿ ಹದಿನೈದು ಸಾವಿರ ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗ್ತಿದೆ‌. ಆದರೆ ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದು, ಇದಕ್ಕೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದೆ.

ಬಿಸಿಮುಟ್ಟಿಸಿದ ಸರ್ಕಾರ: ಶೀಘ್ರವೇ ಕೆಂಪೇಗೌಡ ಏರ್​ಪೋರ್ಟ್​ಗೆ ಮೆಟ್ರೋನಲ್ಲಿ ಓಡಾಡುವ ಅದೃಷ್ಟ ಕೂಡಿಬರಲಿದೆ!
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on:Dec 16, 2024 | 10:35 PM

Share

ಬೆಂಗಳೂರು, (ಡಿಸೆಂಬರ್ 16): ಬೆಂಗಳೂರಿನ ಸಿಲ್ಕ್ ಬೋರ್ಡ್ ಟು ಕೆ.ಆರ್ ಪುರ, ಕೆ.ಆರ್ ಪುರ ಟು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಈ ಮಾರ್ಗದಲ್ಲಿ ಈಗಾಗಲೇ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಗಾರಿ ಅಂದುಕೊಂಡಷ್ಟು ವೇಗದಲ್ಲಿ ಕೆಲಸ ನಡೆಯುತ್ತಿರಲಿಲ್ಲ. ಇದಕ್ಕೆ ಇದೀಗ ರಾಜ್ಯ ಸರ್ಕಾರ ವೇಗ ನೀಡಲುಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ್ದು, 2026 ಜೂನ್ ನೊಳಗೆ ಕಾಮಗಾರಿ ಮುಗಿದು ಮೆಟ್ರೋ ರೈಲು ಸಂಚಾರ ಮಾಡಬೇಕೆಂದು ಖಡಕ್​ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಅಧಿಕಾರಿಗಳು ಕಾಮಗಾರಿಯನ್ನು ವೇಗವಾಗಿ ಮುಗಿಸಲು ಮುಂದಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಏರ್​ಪೋರ್ಟ್​ ಮಾರ್ಗದಲ್ಲಿ ಓಡಾಡುತ್ತಿರುವವರಿಗೆ ಬೇಗ ಮೆಟ್ರೋನಲ್ಲಿ ಸಂಚರಿಸುವ ಕಾಲ ಕೂಡಿಬರಲಿದೆ.

ಇನ್ನೂ ಸಿಲ್ಕ್ ಬೋರ್ಡ್ ಟು ಕೆ.ಆರ್ ಪುರ, ಟು ಏರ್​ಪೋರ್ಟ್​ ಮೆಟ್ರೋ 58.19 ಕಿಮೀ ವಿಸ್ತೀರ್ಣವಿದ್ದು,ಈ ಮಾರ್ಗದಲ್ಲಿ ಮೂವತ್ತು ಮೆಟ್ರೋ ಸ್ಟೇಷನ್ ಗಳಿರಲಿವೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಕೆ.ಆರ್ ಪುರ 19.75 ಕಿಮೀ 13 ಸ್ಟೇಷನ್ ಗಳು. ಕೆ.ಆರ್ ಪುರ ಟು ಏರ್​ಪೋರ್ಟ್​ 38.44 ಕಿಮೀ 17 ಮೆಟ್ರೋ ಸ್ಟೇಷನ್ ಗಳಿರಲಿವೆ.

ಇದನ್ನೂ ಓದಿ: ಚಾಲಕ ರಹಿತ ನಮ್ಮ ಮೆಟ್ರೋ ಆರಂಭಕ್ಕೂ ಮುನ್ನವೇ ಬಂತು ನೂರಾರು ಕೋಟಿ ರೂ. ಆದಾಯ..!

ನೀಲಿ ಮಾರ್ಗವನ್ನು ಬರೋಬ್ಬರಿ 14,788 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗ್ತಿದೆ‌. ‌ಏರ್ಪೋರ್ಟ್ ನಲ್ಲಿ ಟರ್ಮಿನಲ್ 1 ಮತ್ತು 2 ನಡುವೆ ಮೆಟ್ರೋ ಸ್ಟೇಷನ್ ನಿರ್ಮಾಣವಾಗಲಿದೆ. ‌ಎರಡು ಟರ್ಮಿನಲ್ ಗೆ ಬರುವ ಮತ್ತು ಹೋಗುವಾಗ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಕೆಂಪೇಗೌಡ ಏರ್ಪೋರ್ಟ್ ಎರಡು ಟರ್ಮಿನಲ್ ಗಳ ಮಧ್ಯದಲ್ಲಿ ಮೆಟ್ರೋ ಸ್ಟೇಷನ್ ನಿರ್ಮಾಣ ಮಾಡಲಾಗುತ್ತಿದೆ. ಎರಡು ಟರ್ಮಿನಲ್ ಗಳಿಗೆ ಸಂಪರ್ಕ ಕಲ್ಪಿಸಲು ಫ್ಲೈ ಓವರ್ ಮತ್ತು ಎಸ್ಕಲೇಟರ್ ಮಾಡಲಾಗುತ್ತದೆ. ‌

ಒಟ್ಟಿನಲ್ಲಿ ಬೆಂಗಳೂರು ನಗರದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗಬೇಕು ಅಂದರೆ ಕ್ಯಾಬ್ ನಲ್ಲಿ ಸಾವಿರಾರು ರುಪಾಯಿ ಹಣ ನೀಡಬೇಕು. ಇನ್ನು ಹಣ ನೀಡಿದ್ರು ಗಂಟೆಗಟ್ಟಲೆ ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡಬೇಕಿತ್ತು. ಆದ್ರೆ, ಬ್ಲೂ ಲೈನ್ ಮೆಟ್ರೋ ಸಂಚಾರ ಆರಂಭದಿಂದ ಎಲ್ಲಾ ಸಮಸ್ಯೆಗಳಿಗೂ ಮುಕ್ತಿ ಸಿಗುವುದರಂತೂ ಗ್ಯಾರಂಟಿ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:34 pm, Mon, 16 December 24

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್