AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಟೆಸ್ಟ್ ಕಡ್ಡಾಯ, ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ; ರಾಜ್ಯ ಸರ್ಕಾರ ಆದೇಶ

ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ತಿಳಿಸಿದೆ.

ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಟೆಸ್ಟ್ ಕಡ್ಡಾಯ, ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ; ರಾಜ್ಯ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Updated By: sandhya thejappa|

Updated on:Sep 02, 2021 | 9:00 AM

Share

ಬೆಂಗಳೂರು: ಕೊರೊನಾ (Coronavirus) ವೈರಸ್​ನ ಹೊಸ ರೂಪಾಂತರಿ ತಳಿ ಪತ್ತೆಯಾಗುತ್ತಿರುವ ಹಿನ್ನೆಲೆ ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ (RTPCR) ಟೆಸ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ರಾಜ್ಯದ ರಾಜಧಾನಿಗೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರ ಕಠಿಣ ನಿಯಮ ಜಾರಿಗೆ ತಂದಿದೆ. ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ತಿಳಿಸಿದೆ. ಆರ್​ಟಿಪಿಸಿಆರ್ ವರದಿ ಬರುವವರೆಗೆ ಏರ್​ಪೋರ್ಟ್​ನಲ್ಲಿರಬೇಕು. ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ ತೆರಳಲು ಅವಕಾಶವಿರುತ್ತದೆ.

ಈ ಮೊದಲು ಯುಕೆ, ಯುರೋಪ್, ಮಿಡಲ್ ಈಸ್ಟ್, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ನಿಂದ ಬರುವ ಪ್ರಯಾಣಿಕರಿಗೆ ಕೊವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿತ್ತು. ಪ್ರಸ್ತುತ ಬಾಂಗ್ಲಾದೇಶ, ಚೀನಾ, ಮೌರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆಯಿಂದ ಬರುವ ಪ್ರಯಾಣಿಕರಿಗೂ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಟೆಸ್ಟ್ ರಿಪೋರ್ಟ್ ನೆಗೆಟಿವ್ ಬರುವ ತನಕ ಏರ್​ಪೋರ್ಟ್​ನಿಂದ ಹೊರ ಹೋಗಲು ಅವಕಾಶವನ್ನು ಆರೋಗ್ಯ ಇಲಾಖೆ ನಿಷೇಧಿಸಿದೆ.

ಕೇರಳದಲ್ಲಿ ಹೆಚ್ಚಾಯ್ತು ಕೊರೊನಾ ಕೇಸ್ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯಕ್ಕೆ ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿದೆ. ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ ಸ್ಪಾಟ್ ಟೆಸ್ಟ್​ನಲ್ಲಿ ಪಾಸಿಟಿವ್ ಇರುವುದು ಪತ್ತೆಯಾಗುತ್ತಿದೆ. ನಕಲಿ ಸರ್ಟಿಫಿಕೇಟ್ ತರುತ್ತಿರುವುದು ಪತ್ತೆಯಾಗಿದ್ದು, ಮತ್ತಷ್ಟು ಕಠಿಣ ನಿಯಮಗಳನ್ನು ವಿಧಿಸಲು ಆರೋಗ್ಯ ಇಲಾಖೆ  ಮುಂದಾಗಿದೆ. ಕೇರಳದಿಂದ ರಾಜ್ಯಕ್ಕೆ ಆಗಮಿಸುವ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಕೊವಿಡ್ ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. 72 ಗಂಟೆಯೊಳಗಿನ ರಿಪೋರ್ಟ್ ಇದ್ದರಷ್ಟೆ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುವುದು. ರಿಪೋರ್ಟ್ ಜತೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿದೆ. ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆಗೆ ಆಯಾ ಕಾಲೇಜು, ಸಂಸ್ಥೆಗಳು ಕೈಗೊಳ್ಳುವಂತೆ ಆದೇಶ ನೀಡಲಾಗಿದೆ.

ಇದನ್ನೂ ಓದಿ

ಈ ಜನರಿಗೆ ಗಮ್ಯದ ಬಗ್ಗೆ ಖಾತರಿಯಿಲ್ಲ, ಜೀವ ಉಳಿದರೆ ಸಾಕೆಂಬ ಭಾವದೊಂದಿಗೆ ಸುಮ್ಮನೆ ನಡೆದು ಹೋಗುತ್ತಿದ್ದಾರೆ

ಐಟಿ ಪ್ರಾಜೆಕ್ಟ್​ ಕೊಡಿಸುತ್ತೇನೆಂದು 50 ಲಕ್ಷಕ್ಕೂ ಹೆಚ್ಚು ಹಣ ಪಡೆದು ಅಕ್ಕ ತಮ್ಮನಿಂದ ಮೋಸ; ತಮ್ಮನ ಬಂಧನ, ಅಕ್ಕನಿಗಾಗಿ ತಲಾಶ್

(Karnataka government has mandated the RTPCR test for travelers coming from out of country)

Published On - 8:53 am, Thu, 2 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ