AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಟೆಸ್ಟ್ ಕಡ್ಡಾಯ, ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ; ರಾಜ್ಯ ಸರ್ಕಾರ ಆದೇಶ

ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ತಿಳಿಸಿದೆ.

ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಟೆಸ್ಟ್ ಕಡ್ಡಾಯ, ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ; ರಾಜ್ಯ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Sep 02, 2021 | 9:00 AM

Share

ಬೆಂಗಳೂರು: ಕೊರೊನಾ (Coronavirus) ವೈರಸ್​ನ ಹೊಸ ರೂಪಾಂತರಿ ತಳಿ ಪತ್ತೆಯಾಗುತ್ತಿರುವ ಹಿನ್ನೆಲೆ ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ (RTPCR) ಟೆಸ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ರಾಜ್ಯದ ರಾಜಧಾನಿಗೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರ ಕಠಿಣ ನಿಯಮ ಜಾರಿಗೆ ತಂದಿದೆ. ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ತಿಳಿಸಿದೆ. ಆರ್​ಟಿಪಿಸಿಆರ್ ವರದಿ ಬರುವವರೆಗೆ ಏರ್​ಪೋರ್ಟ್​ನಲ್ಲಿರಬೇಕು. ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ ತೆರಳಲು ಅವಕಾಶವಿರುತ್ತದೆ.

ಈ ಮೊದಲು ಯುಕೆ, ಯುರೋಪ್, ಮಿಡಲ್ ಈಸ್ಟ್, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ನಿಂದ ಬರುವ ಪ್ರಯಾಣಿಕರಿಗೆ ಕೊವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿತ್ತು. ಪ್ರಸ್ತುತ ಬಾಂಗ್ಲಾದೇಶ, ಚೀನಾ, ಮೌರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆಯಿಂದ ಬರುವ ಪ್ರಯಾಣಿಕರಿಗೂ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಟೆಸ್ಟ್ ರಿಪೋರ್ಟ್ ನೆಗೆಟಿವ್ ಬರುವ ತನಕ ಏರ್​ಪೋರ್ಟ್​ನಿಂದ ಹೊರ ಹೋಗಲು ಅವಕಾಶವನ್ನು ಆರೋಗ್ಯ ಇಲಾಖೆ ನಿಷೇಧಿಸಿದೆ.

ಕೇರಳದಲ್ಲಿ ಹೆಚ್ಚಾಯ್ತು ಕೊರೊನಾ ಕೇಸ್ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯಕ್ಕೆ ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿದೆ. ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ ಸ್ಪಾಟ್ ಟೆಸ್ಟ್​ನಲ್ಲಿ ಪಾಸಿಟಿವ್ ಇರುವುದು ಪತ್ತೆಯಾಗುತ್ತಿದೆ. ನಕಲಿ ಸರ್ಟಿಫಿಕೇಟ್ ತರುತ್ತಿರುವುದು ಪತ್ತೆಯಾಗಿದ್ದು, ಮತ್ತಷ್ಟು ಕಠಿಣ ನಿಯಮಗಳನ್ನು ವಿಧಿಸಲು ಆರೋಗ್ಯ ಇಲಾಖೆ  ಮುಂದಾಗಿದೆ. ಕೇರಳದಿಂದ ರಾಜ್ಯಕ್ಕೆ ಆಗಮಿಸುವ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಕೊವಿಡ್ ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. 72 ಗಂಟೆಯೊಳಗಿನ ರಿಪೋರ್ಟ್ ಇದ್ದರಷ್ಟೆ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುವುದು. ರಿಪೋರ್ಟ್ ಜತೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿದೆ. ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆಗೆ ಆಯಾ ಕಾಲೇಜು, ಸಂಸ್ಥೆಗಳು ಕೈಗೊಳ್ಳುವಂತೆ ಆದೇಶ ನೀಡಲಾಗಿದೆ.

ಇದನ್ನೂ ಓದಿ

ಈ ಜನರಿಗೆ ಗಮ್ಯದ ಬಗ್ಗೆ ಖಾತರಿಯಿಲ್ಲ, ಜೀವ ಉಳಿದರೆ ಸಾಕೆಂಬ ಭಾವದೊಂದಿಗೆ ಸುಮ್ಮನೆ ನಡೆದು ಹೋಗುತ್ತಿದ್ದಾರೆ

ಐಟಿ ಪ್ರಾಜೆಕ್ಟ್​ ಕೊಡಿಸುತ್ತೇನೆಂದು 50 ಲಕ್ಷಕ್ಕೂ ಹೆಚ್ಚು ಹಣ ಪಡೆದು ಅಕ್ಕ ತಮ್ಮನಿಂದ ಮೋಸ; ತಮ್ಮನ ಬಂಧನ, ಅಕ್ಕನಿಗಾಗಿ ತಲಾಶ್

(Karnataka government has mandated the RTPCR test for travelers coming from out of country)

Published On - 8:53 am, Thu, 2 September 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು