AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆವಿನ್ಯೂ ಮನೆಯ ಗೈಡೆನ್ಸ್ ವ್ಯಾಲ್ಯೂ ಶೇ.10ರಷ್ಟು ಕಡಿಮೆ; ಕಂದಾಯ ಸಚಿವ ಆರ್ ಅಶೋಕ್ ಘೋಷಣೆ

ಜಿಪಿಎ, ಅಗ್ರಿಮೆಂಟ್ ಮಾಡಿಕೊಂಡವರಿಗೆ ರಿಜಿಸ್ಟ್ರೇಶನ್ ಮಾಡಿಕೊಳ್ಳಬೇಕು ಅಂತಿದ್ದವರಿಗೆ 10 ಪರ್ಸೆಂಟ್ ಡಿಸ್ಕೌಂಟ್ ಮಾಡಲಾಗಿದೆ. ರಾಜ್ಯಾದ್ಯಂತ ಶೇ.10ರಷ್ಟು ಗೈಡೆನ್ಸ್ ವ್ಯಾಲ್ಯೂ ಡಿಸ್ಕೌಂಟ್ ಕೊಡಲಾಗಿದೆ- ಆರ್ ಅಶೋಕ್

ರೆವಿನ್ಯೂ ಮನೆಯ ಗೈಡೆನ್ಸ್ ವ್ಯಾಲ್ಯೂ ಶೇ.10ರಷ್ಟು ಕಡಿಮೆ; ಕಂದಾಯ ಸಚಿವ ಆರ್ ಅಶೋಕ್ ಘೋಷಣೆ
ಸಚಿವ ಆರ್ ಅಶೋಕ್
TV9 Web
| Updated By: sandhya thejappa|

Updated on:Jan 01, 2022 | 2:15 PM

Share

ಬೆಂಗಳೂರು: ರೆವಿನ್ಯೂ ಮನೆಯ ಗೈಡೆನ್ಸ್ ವ್ಯಾಲ್ಯೂ ಶೇ.10ರಷ್ಟು ಕಡಿಮೆಗೊಳಿಸಿ ಕರ್ನಾಟಕ ಸರ್ಕಾರ ಹೊಸ ವರ್ಷಕ್ಕೆ ಗುಡ್ ನ್ಯೂಸ್ ನೀಡಿದೆ. ಮಾಧ್ಯಮದೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಕಂದಾಯ ಇಲಾಖೆಯಿಂದ ಹೊಸ ವರ್ಷದ ಗಿಫ್ಟ್ ನೀಡಲು ನಿನ್ನೆ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆಸ್ತಿ ವಹಿವಾಟು ರೆವಿನ್ಯೂ ಮನೆಯ ಗೈಡೆನ್ಸ್ ವ್ಯಾಲ್ಯೂ ಶೇ.10ರಷ್ಟು ಕಡಿಮೆ ಮಾಡಲಾಗುತ್ತದೆ. ಕೇವಲ ಮೂರು ತಿಂಗಳು ಮಾತ್ರ ಅವಕಾಶ ನೀಡಲಾಗಿದೆ ಅಂತ ತಿಳಿಸಿದ್ದಾರೆ.

ಜಿಪಿಎ, ಅಗ್ರಿಮೆಂಟ್ ಮಾಡಿಕೊಂಡವರಿಗೆ ರಿಜಿಸ್ಟ್ರೇಶನ್ ಮಾಡಿಕೊಳ್ಳಬೇಕು ಅಂತಿದ್ದವರಿಗೆ 10 ಪರ್ಸೆಂಟ್ ಡಿಸ್ಕೌಂಟ್ ಮಾಡಲಾಗಿದೆ. ರಾಜ್ಯಾದ್ಯಂತ ಶೇ.10ರಷ್ಟು ಗೈಡೆನ್ಸ್ ವ್ಯಾಲ್ಯೂ ಡಿಸ್ಕೌಂಟ್ ಕೊಡಲಾಗಿದೆ. ಜಮೀನು, ಸೈಟು, ಫ್ಲಾಟ್ ಯಾವುದೇ ಖರೀದಿಸಿದರು 10 ಪರ್ಸೆಂಟ್ ಕಡಿಮೆ ಮಾಡಿದ್ದೇವೆ. ಇವತ್ತಿನಿಂದ ಇದು ಅನ್ವಯವಾಗಲಿದೆ ಅಂತ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ.

ಇನ್ನು ಡಿಕೆ ಶಿವಕುಮಾರ್ ಆರೋಪ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ  ಸಚಿವ ಅಶೋಕ್,  ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆರು ವರ್ಷ ಇತ್ತು. ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿದ್ರು. ನಯಾ ಪೈಸಾ ನೀರಾವರಿಗೆ ಮೀಸಲಿಡಲಿಲ್ಲ. ಅದರ ಬಗ್ಗೆ ಯೋಚನೆ ಕೂಡ ಮಾಡಲಿಲ್ಲ. ಏನೂ ಮಾಡದಿದ್ದಕ್ಕೆ ಒಂದು ಯಾತ್ರೆ ಹಮ್ಮಿಕೊಂಡಿದ್ದಾರೆ. ಇದು ಗಿಮಿಕ್ ಪಾದಯಾತ್ರೆ. ಜನರ ಬಗ್ಗೆ ಅವರಿಗೆ ಕಿಂಚಿತ್ ಕಾಳಜಿ ಇಲ್ಲ. ಮೇಕೇದಾಟು ಬಗ್ಗೆ ಈಗ ಮೈ ಪರಚಿಕೊಳ್ತಿದ್ದಾರೆ. ನನಗೆ ಮಸಾಲೆ ಬೇಕಿಲ್ಲ, ಅವರಿಗೆ ಬೇಕಿರೋದು. ಇವರಿಗೆ ನಿಜವಾಗಿ ಕಾಳಜಿ ಇದ್ರೆ, ಅಧಿಕಾರದಲ್ಲಿ ಇದ್ದಾಗಲೇ ಮಾಡ್ತಿದ್ರು ಅಂತ ಹೇಳಿದರು.

ಇದನ್ನೂ ಓದಿ

ಹೊಸ ವರ್ಷಕ್ಕೆ ನಿಮ್ಮ ಪ್ರೀತಿಪಾತ್ರರನ್ನು ಇಂಪ್ರೆಸ್​ ಮಾಡಲು ಬಾದಾಮ್​ ಹಲ್ವಾ ಮಾಡಿಕೊಡಿ – New Year 2022

Multibagger: ಈ ಬ್ಯಾಂಕಿಂಗ್​ ಸ್ಟಾಕ್​ ಮೇಲೆ 23 ವರ್ಷದ ಹಿಂದೆ ಮಾಡಿದ 1 ಲಕ್ಷ ರೂ. ಹೂಡಿಕೆ ಈಗ 2.68 ಕೋಟಿ ರೂ.

Published On - 2:09 pm, Sat, 1 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ