AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣಕ್ಕಾಗಿ ಬೆಂಗಳೂರು ಸುತ್ತ 5 ಸ್ಥಳಗಳನ್ನು ಗುರುತಿಸಿದ ರಾಜ್ಯ ಸರ್ಕಾರ

ತಮಿಳುನಾಡು ಸರ್ಕಾರ ಕರ್ನಾಟಕದ ಗಡಿಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಿರ್ಧರಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗಡಿಭಾಗಕ್ಕೆ ಹೊಂದಿಕೊಂಡಂತೆ ಹೊಸ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಮುಂದಾಗಿದೆ. ಈ ಸಂಬಂಧ ಬೆಂಗಳೂರು ಸುತ್ತಮುತ್ತ ಐದು ಸ್ಥಗಳನ್ನು ಗುರುತಿಸಿದೆ. ಯಾವ್ಯಾವ ಸ್ಥಳಗಳು ಇಲ್ಲಿದೆ ಓದಿ.

ವಿಮಾನ ನಿಲ್ದಾಣಕ್ಕಾಗಿ ಬೆಂಗಳೂರು ಸುತ್ತ 5 ಸ್ಥಳಗಳನ್ನು ಗುರುತಿಸಿದ ರಾಜ್ಯ ಸರ್ಕಾರ
ವಿಮಾನ ನಿಲ್ದಾಣ
Pramod Shastri G
| Updated By: ವಿವೇಕ ಬಿರಾದಾರ|

Updated on:Sep 08, 2024 | 11:34 AM

Share

ಬೆಂಗಳೂರು, ಸೆಪ್ಟೆಂಬರ್​​ 08: ತಮಿಳುನಾಡು ಸರ್ಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಹೊಸ ಯೋಜನೆ ನಿರ್ಮಿಸಿದೆ. ಗಡಿಭಾಗದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಬೆಂಗಳೂರು (Bengaluru) ಸುತ್ತಮುತ್ತ ಜಾಗ ಹುಡುಕುತ್ತಿದೆ. ಈಗಾಗಲೆ ಬಿಡಿದಿ, ಹೇರೋಹಳ್ಳಿ, ಕುಣಿಗಲ್, ತುಮಕೂರು ಮತ್ತು ಜಿಗಣಿ ಸುತ್ರಮುತ್ತ ಖಾಲಿ ಜಾಗಕ್ಕೆ ರಾಜ್ಯ ಸರ್ಕಾರ ಹುಡುಕಾಟ ನಡೆಸಿದೆ.

ಜಿಗಣಿ ಭಾಗದಲ್ಲಿ ಕನಿಷ್ಠ 4 ಸಾವಿರ ಏಕರೆ ಜಾಗ ಅಲಭ್ಯ ಹಿನ್ನೆಲೆಯಲ್ಲಿ ಬಿಡದಿ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಯಾವೆಲ್ಲ ಪ್ರದೇಶಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸಾಧ್ಯತೆ ಇದೆ ಎಂಬುವುದರ ಬಗ್ಗೆ ವರದಿ ಸಿದ್ದಪಡಿಸುವಂತೆ ಕೈಗಾರಿಕಾ ಇಲಾಖೆ ಖಾಸಗಿ ಸಂಸ್ಥೆಗೆ ಸೂಚನೆ ನೀಡಿದೆ.

ಇದನ್ನೂ ಓದಿ: ಬೆಂಗಳೂರು ಗಡಿಭಾಗದ ಹೊಸೂರಿನಲ್ಲಿ ಹೊಸ ಏರ್ಪೋರ್ಟ್ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ನಿರ್ಧಾರ

ಏಕಕಾಲಕ್ಕೆ ಎರಡು ವಿಮಾನ ನಿಲ್ದಾಣಗಳನ್ನು ನಿರ್ಮಿಸುವಂತೆ ಕ್ಯಾಪ್ಟನ್ ಗೋಪಿನಾಥ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಇದರಿಂದ ಕೈಗಾರಿಕೆ ಹಾಗೂ ಸಂಚಾರ ಸಂಪರ್ಕದ ಮೇಲೆ ದೂರಗಾಮಿ ಸತ್ಪರಿಣಾಮ ಬೀರಲಿದೆ ಎಂದಿದ್ದಾರೆ. ಆದರೆ, ರಾಜ್ಯ ಸರ್ಕಾರ ಸದ್ಯ ಒಂದು ವಿಮಾನ ನಿಲ್ದಾಣ ನಿರ್ಮಾಣದತ್ತ ಒಲವು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:17 am, Sun, 8 September 24

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?