ರಾಜ್ಯದಲ್ಲಿ ಹೆಚ್ಚಾದ ಮಂಕಿಪಾಕ್ಸ್ ಆತಂಕ: ಶಂಕಿತರ ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಆಸ್ಪತ್ರೆ ಗುರುತಿಸಿದ ಸರ್ಕಾರ

ರಾಜ್ಯದಲ್ಲಿ ಮಂಕಿಪಾಕ್ಸ್ ಆತಂಕ ಹಿನ್ನೆಲೆ ಆರೋಗ್ಯ ಇಲಾಖೆಯ ಅಲರ್ಟ್ ಆಗಿದ್ದು ರಾಜ್ಯದ ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸುತ್ತೋಲೆ ಹೊರಡಿಸಿದೆ. ಮಂಕಿಪಾಕ್ಸ್ ಶಂಕಿತರನ್ನ ಗುರುತಿಸಿ ಸ್ಕ್ರೀನಿಂಗ್ ಮಾಡುವಂತೆ ಸೂಚನೆ ನೀಡಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆ ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಗುರುತಿಸಲಾಗಿದೆ.

ರಾಜ್ಯದಲ್ಲಿ ಹೆಚ್ಚಾದ ಮಂಕಿಪಾಕ್ಸ್ ಆತಂಕ: ಶಂಕಿತರ ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಆಸ್ಪತ್ರೆ ಗುರುತಿಸಿದ ಸರ್ಕಾರ
ಎಂಪಾಕ್ಸ್
Follow us
|

Updated on: Aug 28, 2024 | 8:02 AM

ಬೆಂಗಳೂರು, ಆಗಸ್ಟ್​.28: ಪಾಕಿಸ್ತಾನ್​ ಸೇರಿ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ (Mpox) ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ (Karnataka Health Department) ಅಲರ್ಟ್ ಆಗಿದ್ದು ಏರ್​ಪೋರ್ಟ್​​ಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದೆ. ಜೊತೆಗೆ ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಮಂಕಿಪಾಕ್ಸ್ ಕಂಡು ಬಂದ್ರೆ 21 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ.

ಆರೋಗ್ಯ ಇಲಾಖೆ ನಿನ್ನೆ ಹೊರಡಿಸಿದ ಸುತ್ತೋಲೆಯಲ್ಲಿ, ರಾಜ್ಯ ಆರೋಗ್ಯ ಆಯುಕ್ತ ಡಿ ರಂದೀಪ್ ಅವರು ಮಂಗನ ಕಾಯಿಲೆಯ ಶಂಕಿತ ಪ್ರಕರಣಗಳ ಬಗ್ಗೆ ನಿಗಾ ಇಡಲು ಸೂಚಿಸಿದ್ದಾರೆ. ವಿಮಾನ ನಿಲ್ದಾಣಗಳು, ಬಂದರು ಮತ್ತು ರಾಜ್ಯದ ಎಲ್ಲಾ ಕಡೆಗಳ ಪ್ರವೇಶ ಕೇಂದ್ರಗಳ ವ್ಯವಸ್ಥಾಪಕ ಅಧಿಕಾರಿಗಳಿಗೆ ಎಚ್ಚರ ವಹಿಸಲು ನಿರ್ದೇಶನ ನೀಡಿದ್ದಾರೆ. ಶಂಕಿತರನ್ನ ಗುರುತಿಸಿ ಸ್ಕ್ರೀನಿಂಗ್ ಮಾಡುವಂತೆ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ.

ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ಎಚ್ಚರವಹಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ಶಂಕಿತ ಪ್ರಕರಣಗಳು ಕಂಡು ಬಂದರೆ ಅವರನ್ನು ಐಸೋಲೇಟ್ ಮಾಡುವುದು, ಚಿಕಿತ್ಸೆ ನೀಡುವುದರ ಬಗ್ಗೆ ರಾಜ್ಯದ ಆರೋಗ್ಯ ಸಿಬ್ಬಂದಿ ಗಮನಹರಿಸುವಂತೆ ಸೂಚಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಮಂಕಿಪಾಕ್ಸ್ ಅನ್ನು ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಘೋಷಿಸಿದ ನಂತರ ಹಾಗೂ ಸ್ವೀಡನ್ ಮತ್ತು ಪಾಕಿಸ್ತಾನದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ನಂತರ, ಶಂಕಿತ ಪ್ರಕರಣಗಳಿಗೆ ಸಿದ್ಧರಾಗುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಭಾರತದಲ್ಲಿ ಪ್ರಸ್ತುತ ಯಾವುದೇ ಸಕ್ರಿಯ ಪ್ರಕರಣಗಳಿಲ್ಲ.

ಇದನ್ನೂ ಓದಿ: Monkeypox Outbreak: ಮಂಕಿಪಾಕ್ಸ್​ನಿಂದ ಮತ್ತೆ ಲಾಕ್‌ಡೌನ್ ಆಗುತ್ತಾ? ಈ ಸಾಂಕ್ರಾಮಿಕ ರೋಗದ ಬಗ್ಗೆ WHO ಎಚ್ಚರಿಕೆ

ಶಂಕಿತ ಪ್ರಕರಣದ ಎಲ್ಲಾ ಕ್ಲಿನಿಕಲ್ ಮಾದರಿಗಳನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರಿನಲ್ಲಿರುವ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಕ್ಕೆ ಸಾಗಿಸಲಾಗುತ್ತೆ. ಬಳಿಕ ಮಂಕಿಪಾಕ್ಸ್ ದೃಢಪಟ್ಟರೆ ಅವರನ್ನು ಕನಿಷ್ಠ 21 ದಿನಗಳವರೆಗೆ ಅಥವಾ ಸಂಪೂರ್ಣವಾಗಿ ಗುಣವಾಗುವವರೆಗೆ ಪ್ರತ್ಯೇಕವಾಗಿ ಐಸೋಲೇಟ್ ಮಾಡಲಾಗುತ್ತದೆ.

ಮಂಕಿಪಾಕ್ಸ್ ರೋಗಲಕ್ಷಣಗಳು

  • ಮೊದಲ ಐದು ದಿನ ಜ್ವರ, ಶೀತ ಮತ್ತು ಬೆವರು, ತಲೆನೋವು, ಸ್ನಾಯು ನೋವು, ಗಂಟಲು ನೋವು, ಕೆಮ್ಮು
  • ಜ್ವರ ಪ್ರಾರಂಭವಾದ ಮೂರು ದಿನಗಳ ನಂತರ ರ‍್ಯಾಶಸ್ ಕಂಡುಬರುತ್ತದೆ
  • ಸಾಮಾನ್ಯವಾಗಿ ಮುಖ, ಅಂಗೈ ಮತ್ತು ಅಡಿಭಾಗದ ಮೇಲೆ ರ‍್ಯಾಶಸ್​ಗಳಾಗಿ ನೋವು ಕಾಣಿಸಿಕೊಳ್ಳುತ್ತದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ