AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇವೆ ಸುಧಾರಿಸಲು ಸರ್ಕಾರ ಮಹತ್ವದ ಹೆಜ್ಜೆ; ಆರೋಗ್ಯ ಕವಚ 108 ಅನುಷ್ಠಾನಕ್ಕಾಗಿ ತಾಂತ್ರಿಕ ಸಮಿತಿ ರಚನೆ

ಹಳೆಯ ಸರ್ಕಾರದ GVK ಟೆಂಡರ್​ಗೆ ನೂತನ ಸರ್ಕಾರ ಕೊಕ್ ಕೊಟ್ಟಿದೆ. 108 ಆಂಬುಲೆನ್ಸ್ ಸೇವೆಯಲ್ಲಿ ಮಹತ್ವದ ಬದಲಾವಣೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಆರೋಗ್ಯ ಸೇವೆ ಸುಧಾರಿಸಲು ಸರ್ಕಾರ ಮಹತ್ವದ ಹೆಜ್ಜೆ; ಆರೋಗ್ಯ ಕವಚ 108 ಅನುಷ್ಠಾನಕ್ಕಾಗಿ ತಾಂತ್ರಿಕ ಸಮಿತಿ ರಚನೆ
108 ಆಂಬ್ಯುಲೆನ್ಸ್
Follow us
Vinay Kashappanavar
| Updated By: ಆಯೇಷಾ ಬಾನು

Updated on: Jul 22, 2023 | 9:04 AM

ಬೆಂಗಳೂರು, ಜುಲೈ 22: ಕರ್ನಾಟಕ ರಾಜ್ಯದಲ್ಲಿನ ಆರೋಗ್ಯ ಸೇವೆ(Health Service) ಸುಧಾರಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ(Karnataka Government). ರಾಜ್ಯದಲ್ಲಿ ಉತ್ತಮ ಆರೋಗ್ಯ ಸೇವೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದ್ದು 108 ಆಂಬ್ಯುಲೆನ್ಸ್ ಕಿರಿಕ್​ಗೆ ಇನ್ಮುಂದೆ ಬ್ರೇಕ್ ಬೀಳಲಿದೆ(108 Ambulance). ರಾಜ್ಯದಲ್ಲಿ 108 ಆರೋಗ್ಯ ಕವಚ ಹಾಗೂ 104 ಆರೋಗ್ಯ ಸಹಾಯವಾಣಿ ಯೋಜನೆಗಳ ಉನ್ನತ್ತೀಕರಣ ಹಾಗೂ ಮಾರ್ಗದರ್ಶನಕ್ಕೆ ಸರ್ಕಾರ ಸಮಿತಿ ರಚನೆ ಮಾಡಿದೆ.

ಹಳೆಯ ಸರ್ಕಾರದ GVK ಟೆಂಡರ್​ಗೆ ನೂತನ ಸರ್ಕಾರ ಕೊಕ್ ಕೊಟ್ಟಿದೆ. 108 ಆಂಬುಲೆನ್ಸ್ ಸೇವೆಯಲ್ಲಿ ಮಹತ್ವದ ಬದಲಾವಣೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಡಾ. ಜಿ ಗುರುರಾಜ್, ನಿಮ್ಹಾನ್ಸ್ ಪ್ರಭಾರ ನಿರ್ದೇಶಕರು ಹಾಗೂ ಐಐಐಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ಈ ಮೂಲಕ ಆರೋಗ್ಯ ಸೇವೆಗಳ ಟೆಂಡರ್ ನ್ಯೂನತೆ ಲೋಪದೋಷ ಅಧ್ಯಯನಕ್ಕೆ ಮುಂದಾಗಿದೆ. ಟೆಂಡರ್ ನ್ಯೂನತೆ ಲೋಪದೋಷ ಅಧ್ಯಯನ ಹಾಗೂ ಸಲಹೆ ನೀಡಲು ತಜ್ಞರ ಸಲಹಾ ಸಮಿತಿ ರಚನೆ ಮಾಡಲಾಗಿದ್ದು GVK ಆಂಬುಲೆನ್ಸ್ ಸೇವೆಗೆ ಬಿಗ್ ಶಾಕ್ ಕೊಟ್ಟಂತಾಗಿದೆ.

GVK ಸಂಸ್ಥೆಯ ವಿರುದ್ಧ ಸಾಲು ಸಾಲು ಆರೋಪ ಹಾಗೂ ದೂರು ಬಂದ ಹಿನ್ನಲೆ ಸರ್ಕಾರ ಜಿವಿಕೆ ಟೆಂಡರ್​ಗೆ ಕೊಕ್ ಕೊಟ್ಟಿದೆ. ಕಳೆದ ಮೂರು ತಿಂಗಳ ಹಿಂದೆ ಆರೋಗ್ಯ ಕವಚ ಅಡಿಯಲ್ಲಿನ 108 ಆಂಬುಲೆನ್ಸ್ ಸೇವೆಗೆ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ನಲ್ಲಿಯೂ ಜಿವಿಕೆ ತೆರೆ ಹಿಂದಿನಿಂದ ಭಾಗವಹಿಸಿತ್ತು. ಆದ್ರೆ ಈಗ ಸರ್ಕಾರ ಟೆಂಡರ್ ಪ್ರಕ್ರಿಯೇ ಕೈ ಬಿಟ್ಟಿದೆ. ಟೆಂಡರ್ ಪ್ರಕ್ರಿಯೆ ಖರೀದಿಯಲ್ಲಿನ ವಿಧಾನ, ಟೆಂಡರ್ ಪ್ಲೋಟೀಂಗ್ ನಲ್ಲಿನ ನ್ಯೂನತೆ, ಆಕ್ಷಪಣೆಗಳು, ತಾಂತ್ರಿಕ ದೋಷ, ಪರಿಶೀಲಿಸಿ ಉತ್ತಮ ಸೇವೆ ನೀಡಲು ಸಮಿತಿ ರಚನೆ ಮಾಡಲಾಗಿದೆ. ಉತ್ತಮ ಆರೋಗ್ಯ ಸೇವೆಗೆ ಯಾವ ರೀತಿಯ ಸೌಲಭ್ಯ? ಏನೆಲ್ಲ ತಂತ್ರಜ್ಞಾನ ಇರಬೇಕು? ಯಾವೆಲ್ಲ ಮಾರ್ಗಸೂಚಿ ಸೌಲಭ್ಯ ಅಳವಡಿಸಿಕೊಂಡಿರಬೇಕು? ಈ ಎಲ್ಲ ಮಾನದಂಡಗಳ ಆಧಾರದ ಮೇಲೆ ಸಲಹೆ ಹಾಗೂ ವರದಿ ನೀಡಲು ತಜ್ಞರ ಸಲಹಾ ಸಮಿತಿ ರಚನೆ ಮಾಡಲಾಗಿದೆ.

ಇದನ್ನೂ ಓದಿ: TV9 Impact: ಟಿವಿ9 ವರದಿ ಬೆನ್ನಲ್ಲೇ ಮಕ್ಕಳ ಮೊಬೈಲ್ ಬಳಕೆ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಇಳಿದ ಸರ್ಕಾರ, ತಜ್ಞರ ಸಮಿತಿ ರಚನೆ

ತಾಂತ್ರಿಕ ಸಮಿತಿಯಲ್ಲಿ ಯಾರೆಲ್ಲ ತಜ್ಞರಿದ್ದಾರೆ?

ಐಐಐಟಿ ನಿರ್ದೇಶಕರು, ನಿಮ್ಹಾನ್ಸ್ ನಿರ್ದೇಶಕರು, ವಿಟಿಯು ಮಾಜಿ ಕುಲಪತಿಗಳು, ಕಾರ್ಮಿಕ ಇಲಾಖೆಯ ಆಯುಕ್ತರು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ( IISC ) ತಜ್ಞರನ್ನ ಈ ಸಮಿತಿಯೊಳಗೊಂಡಿದೆ. ಟೆಂಡರ್ ಹಾಗೂ ಸೇವಾದರ ಆಯ್ಕೆ ಸಂಬಂಧ ಸಲಹೆ ಮಾರ್ಗದರ್ಶನವನ್ನ ನೀಡಲು ಈ ಸಮಿತಿ ರಚನೆಯಾಗಿದೆ. ಈ ಸಮಿತಿ ಟೆಂಡರ್ ಪ್ರಕ್ರಿಯೆ ಖರೀದಿಯಲ್ಲಿನ ವಿಧಾನ, ಟೆಂಡರ್ ಪ್ಲೋಟೀಂಗ್ ನಲ್ಲಿನ ನ್ಯೂನತೆ, ಆಕ್ಷಪಣೆಗಳು, ತಾಂತ್ರಿಕ ದೋಷ, ಪರಿಶೀಲಿಸಿ ಸೇವೆ ನೀಡಲು ಮುಂದಿನ ಒಂದು ತಿಂಗಳೊಳಗೆ ಕಾಲಾವಕಾಶ ನೀಡಲಾಗಿದ್ದು ಒಂದು ತಿಂಗಳೊಳಗೆ ಈ ಸಮಿತಿ ವರದಿ ನೀಡಲಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?